Quantcast
Channel: VijayKarnataka
Viewing all articles
Browse latest Browse all 6795

ವಾಯುಭಾರ ಕುಸಿತ: ತಮಿಳುನಾಡಲ್ಲಿ ಭೀಕರ ಮಳೆ

$
0
0

ಚೆನ್ನೈ: ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದ ಪರಿಣಾಮ ತಮಿಳುನಾಡು ಸೇರಿದಂತೆ ದಿಕ್ಷಿಣ ಭಾರತದ ವಿವಿಧೆಡೆ ಭಾರಿ ಮಳೆಯಾಗುತ್ತಿದ್ದು, ಚಂಡಮಾರುತದ ಭೀತಿ ಎದುರಾಗಿದೆ.

ವಾಯುಭಾರ ಕುಸಿತದ ಪರಿಣಾಮ ಸಮುದ್ರದ ಅಲೆಗಳ ರಭಸ ಹೆಚ್ಚಾಗಿದೆ. ಗಂಟೆಗೆ 40 ರಿಂದ 50 ಕಿ.ಮೀ. ವೇಗದಲ್ಲಿ ಬೀಸುತ್ತಿರುವ ಗಾಳಿಯು ಈಗಾಗಲೇ ತಮಿಳುನಾಡಿನಾದ್ಯಂತ ರಾದ್ಧಾಂತ ಸೃಷ್ಟಿಸಿದೆ.

ವಾಯುಭಾರ ಕುಸಿತವು ಚಂಡಮಾರುತವಾಗಿ ಪರಿವರ್ತನೆಯಾಗುವ ಹಂತದಲ್ಲಿ ವಿಫಲವಾಗಿದ್ದು, ಅದರ ವೇಗ ಕ್ರಮೇಣ ಕಡಿಮೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ತಮಿಳುನಾಡಿನ ಎಂಟು ಜಿಲ್ಲೆಗಳಲ್ಲಿ ಮಳೆಯ ಪ್ರಮಾಣ ಹೆಚ್ಚಾಗಿದ್ದು, ಯಾವುದೇ ಕಾರಣಕ್ಕೂ ಬೆಸ್ತರು ಸಮುದ್ರಕ್ಕಿಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಸಂಭವನೀಯ ಅಪಾಯವನ್ನು ತಪ್ಪಿಸಲು ಶಾಲಾ ಕಾಲೇಜು ಹಾಗೂ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.

ತಮಿಳುನಾಡಿನ ಗಡಿಗೆ ಹೊಂದಿಕೊಂಡಿರುವ ಕೇರಳ, ಕರ್ನಾಟಕದ ಮೇಲೂ ಈ ಮಾರುತಗಳು ಪ್ರಭಾವ ಬೀರಿದೆ. ಈ ರಾಜ್ಯಗಳಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಭೀಕರ ಮಳೆಯ ಪರಿಣಾಮ ಚೆನ್ನೈನಲ್ಲಿ ನಿರ್ಮಾಣ ಹಂತದ ಕಟ್ಟಡವೊಂದು ಕುಸಿದು ಇಬ್ಬರು ಕೂಲಿ ಕಾರ್ಮಿಕರು ಬಲಿಯಾಗಿದ್ದಾರೆ.

ಸದ್ಯ ಎಂಟು ಜಿಲ್ಲೆಗಳಲ್ಲಿ ಭಾರಿ ಮಳೆಯಾಗುತ್ತಿದ್ದರೆ ಕೆಲವೆಡೆ ತಂಪಾದ ಮೇಲ್ಮೈಗಾಳಿ ಬೀಸುತ್ತಿದ್ದು, ಆಗಾಗ್ಗೆ ತುಂತುರು ಹನಿ ಬೀಳುತ್ತಿದೆ. ಭಾರಿ ಮಳೆಯ ಪರಿಣಾಮ ರೈಲ್ವೆ ಹಳಿಗಳ ಮೇಲೆ ನೀರು ನಿಂತಿದ್ದು, ಸ್ಥಳೀಯರ ರೈಲುಗಳ ಓಡಾಟವನ್ನು ಸ್ಥಗಿತಗೊಳಿಸಲಾಗಿದೆ.

ಪಟಾಕಿ ಮಾರಾಟಗಾರರಿಗೆ ಆತಂಕ

ದಕ್ಷಿಣ ಭಾರತದಲ್ಲೇ ಅತಿ ಹೆಚ್ಚು ಪಟಾಕಿ ಉತ್ಪಾದನಾ ಘಟಕಗಳನ್ನು ಹೊಂದಿರುವ ತಮಿಳುನಾಡಿನಲ್ಲಿ ಭೀಕರ ಮಳೆಯಾಗುತ್ತಿರುವ ಹಿನ್ನೆಲೆ ಪಟಾಕಿ ಮಾರಾಟಗಾರರು ಆತಂಕಗೊಂಡಿದ್ದಾರೆ.

ದೀಪಾವಳಿ ಹೊಸ್ತಿಲಲ್ಲೇ ವರುಣನ ಆರ್ಭಟ ಆರಂಭವಾಗಿರುವುದು ಪಟಾಕಿ ಮಾರಾಟಗಾರರಿಗೆ ನುಂಗಲಾರದ ತುತ್ತಾಗಿದೆ.

ಪಾಯಿಂಟ್ಸ್

* ಕರಾವಳಿ ಪ್ರದೇಶದ ಸುತ್ತಲೂ ನೀರಿನ ಪ್ರಮಾಣ ಕಡಿಮೆಯಾಗುವರೆಗೆ ಸಮುದ್ರಕ್ಕಿಳಿಯದಂತೆ ಎಚ್ಚರಿಕೆ

* ಗಂಟೆಗೆ 40 ರಿಂದ 60 ಕಿ.ಮೀ. ವೇಗದಲ್ಲಿ ಉತ್ತರ ತಮಿಳುನಾಡು ಜಿಲ್ಲೆಗಳತ್ತ ಮುನ್ನುಗ್ಗುತ್ತಿರುವ ಮಾರುತಗಳು

* ಪುದುಚೇರಿಯಿಂದ ಚಿದಂಬರಂವರೆಗೆ ಎಂಟು ಕ್ಷಿಪ್ರ ಕಾರ‌್ಯಪಡೆಗಳು ಕಾರ‌್ಯನಿರತ

* ವಾಯುಭಾರ ಕುಸಿತದ ಪರಿಣಾಮ ಮುಂದಿನ 24-28 ಗಂಟೆಗಳಲ್ಲಿ ತಮಿಳುನಾಡಿನ ಉತ್ತರ ಕರಾವಳಿಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆ

* ಮಾರುತಗಳ ವೇಗವು ಉತ್ತರ ತಮಿಳುನಾಡಿನಲ್ಲಿ ಗಂಟೆಗೆ 60 ಕಿ.ಮೀ ವೇಗ ಪಡೆದುಕೊಳ್ಳಲಿದೆ. ಪುದುಚೇರಿ, ಪದುಕ್ಕೊಟ್ಟೈ ಮತ್ತು ರಾಮನಾಥಪುರಂ ಮೂಲಕ ಇದು ಹಾದುಹೋಗಲಿದೆ. ಇದರ ವೇಗವು 60-70 ಕಿ.ಮೀ.ಗೆ ಪರಿವರ್ತನೆಯಾಗುವ ಸಾಧ್ಯತೆಯಿದೆ.

* ಪುದುಚೇರಿ, ಚೆನ್ನೈಗೆ ಹೊಂದುಕೊಂಡಿರುವ ಜಿಲ್ಲೆಗಳು ಹಾಗೂ ಕಂಚೀಪುರಂ ಮತ್ತು ತಿರುವಲ್ಲುವರ್‌ನ ಶಾಲಾ ಕಾಲೇಜುಗಳು ಹಾಗೂ ಕಚೇರಿಗಳಿಗೆ ರಜೆ ಘೋಷಿಸಲಾಗಿದೆ.

ತಮಿಳುನಾಡನ್ನು ಕಾಡಿದ ಸೈಕ್ಲೋನ್‌ಗಳು

ಫನೂಸ್ (2005) - 102 ಕೆಪಿಎಚ್

ನಿಶಾ (2008) - 83 ಕೆಪಿಎಚ್

ಜಾಳ್ (2010) - 111 ಕೆಪಿಎಚ್

ನೀಲಂ (2012) - 84 ಕೆಪಿಎಚ್

ಮಡಿ (2013) - 120 ಕೆಪಿಎಚ್


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


Namaskāra नमस्कार (salutation)


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>