Quantcast
Channel: VijayKarnataka
Viewing all articles
Browse latest Browse all 6795

ಮಾನಹಾನಿ ಪ್ರಕರಣ: ಜೇಟ್ಲಿ ಸಾಕ್ಷ್ಯಕ್ಕೆ ಕೇಜ್ರಿ ತಕರಾರು

$
0
0

ಹೊಸದಿಲ್ಲಿ: ದಿಲ್ಲಿ ಸಿಎಂ ಅರವಿಂದ್ ಕೇಜ್ರಿವಾಲ್ ಹಾಗೂ ಇನ್ನಿತರ ಐವರ ವಿರುದ್ಧದ ಮಾನಿಹಾನಿ ಪ್ರಕರಣದಲ್ಲಿ ಸಚಿವ ಅರುಣ್ ಜೇಟ್ಲಿ ಒದಗಿಸಿರುವ ವಿದ್ಯುನ್ಮಾನ ಸಾಕ್ಷ್ಯಗಳನ್ನು ಒಪ್ಪಲು ಕೇಜ್ರಿವಾಲ್ ನಿರಾಕರಿಸಿದ್ದಾರೆ.

ಎಎಪಿ ನಾಯಕರು, ಈ ಸಂಬಂಧ ಹೈಕೋರ್ಟ್‌ನ ಜಂಟಿ ರಜಿಸ್ಟ್ರಾರ್ ಕೋವೈ ವೇಣುಗೋಪಾಲ್‌ಗೆ ಆಕ್ಷೇಪ ಸಲ್ಲಿಸಿದ್ದಾರೆ. ಭಾರತೀಯ ದಂಡ ಸಂಹಿತೆ 65 ಬಿ ಅನ್ವಯ ವಿದ್ಯುನ್ಮಾನ್ ಸಾಕ್ಷ್ಯಗಳನ್ನು ವಿಚಾರಣೆ ವೇಳೆ ಪುರಾವೆಗಳಾಗಿ ಪರಿಗಣಿಸುವಂತಿಲ್ಲ ಎಂಬ ಕಾರಣ ನೀಡಿ ಅವುಗಳನ್ನು ತಿರಸ್ಕರಿಸುಲು ಒತ್ತಾಯಿಸಿದ್ದಾರೆ.

ಇದೇ ವೇಳೆ, ಕೇಂದ್ರ ಸಚಿವ ಅರುಣ್ ಜೇಟ್ಲಿ ಪರ ಕೋರ್ಟ್‌ಗೆ ಹಾಜರಾದ ಪ್ರತಿಭಾ ಎಂ ಸಿಂಗ್, ಕೇಜ್ರಿವಾಲ್ ಆಕ್ಷೇಪಕ್ಕೆ ವಿರೋಧ ವ್ಯಕ್ತಪಡಿಸಿದರು. ವಿಚಾರಣೆ ವೇಳೆ, ವಿದ್ಯುನ್ಮಾನ ಸಾಕ್ಷ್ಯಗಳನ್ನು ಒದಗಿಸಬಹುದು ಎಂದು ಸಮರ್ಥಿಸಿಕೊಂಡರು.

ಎರಡೂ ಕಡೆಯವರು ನ್ಯಾಯಾಲಯಕ್ಕೆ ಸಾಕ್ಷ್ಯ ಒದಗಿಸಬೇಕು ಅದನ್ನು ನ್ಯಾಯಾಲಯ ನಿರ್ಧರಿಸುತ್ತದೆ. ಇದು ವಿಚಾರಣೆಯನ್ನು ವಿಳಂಬಗೊಳಿಸಲು ಕೇಜ್ರಿವಾಲ್ ಮತ್ತು ಇತರ ಐವರು ಯತ್ನಿಸುತ್ತಿದ್ದಾರೆ ಎಂದೂ ಅವರು ಆರೋಪಿಸಿದರು.

ಹಿನ್ನೆಲೆ: ಡಿಡಿಸಿಎ ಮಂಡಳಿಯಲ್ಲಿ ಹಣಕಾಸು ಅಕ್ರಮದಲ್ಲಿ ಅರುಣ್ ಜೇಟ್ಲಿ ಭಾಗಿಯಾಗಿದ್ದಾರೆ. ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕು ಹಾಗೂ ಜೇಟ್ಲಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಸಿಎಂ ಅರವಿಂದ್ ಕೇಜ್ರಿವಾಲ್ ಆರೋಪಿಸಿದ್ದರು. ಈ ಹಿನ್ನೆಲೆಯಲ್ಲಿ ಅರುಣ್ ಜೇಟ್ಲಿ ಇದೊಂದು ಸುಳ್ಳು ಆರೋಪವಾಗಿದ್ದು, ತಮ್ಮ ಘನತೆಗೆ ಕುಂದುಂಟಾಗಿದೆ ಎಂದು ಆರೋಪಿಸಿ, ಮಾನಹಾನಿ ಪ್ರಕರಣ ದಾಖಲಿಸಿದ್ದರು.


Viewing all articles
Browse latest Browse all 6795

Trending Articles



<script src="https://jsc.adskeeper.com/r/s/rssing.com.1596347.js" async> </script>