Quantcast
Channel: VijayKarnataka
Viewing all articles
Browse latest Browse all 6795

10 ಪಾಕ್ ಉಗ್ರರ ಪೈಕಿ ಮೂವರ ಹತ್ಯೆ

$
0
0

ಹೊಸದಿಲ್ಲಿ: ಶಿವರಾತ್ರಿ ಹಬ್ಬದಂದು ದೇಶದ ಪುಣ್ಯಕ್ಷೇತ್ರಗಳಲ್ಲಿ ವಿಧ್ವಂಸಕ ಕೃತ್ಯ ನಡೆಸುವ ಉದ್ದೇಶದಿಂದ ಪಾಕಿಸ್ತಾನದಿಂದ ಗಡಿ ನುಸುಳಿ ಬಂದಿದ್ದ 10 ಮಂದಿ ಜೈಷೆ ಉಗ್ರರ ಅಡಗುತಾಣವನ್ನು ಪತ್ತೆ ಹಚ್ಚಲಾಗಿದ್ದು. ಇದುವರೆಗೆ ಮೂವರು ಉಗ್ರರನ್ನು ಕೊಲ್ಲಲಾಗಿದೆ.

ಉಗ್ರರ ಅಡಗುತಾಣವನ್ನು ಯೋಧರು ಸುತ್ತುವರಿದಿದ್ದಾರೆ. ಕಾರ‌್ಯಾಚರಣೆಯಲ್ಲಿ ಇದುವರೆಗೆ ಮೂವರನ್ನು ಕೊಲ್ಲಲಾಗಿದೆ. ಭದ್ರತೆಯ ದೃಷ್ಟಿಯಿಂದ ಕಾರ‌್ಯಾಚರಣೆ ನಡೆಯುತ್ತಿರುವ ಸ್ಥಳದ ಗುಟ್ಟು ಬಿಟ್ಟುಕೊಡಲಾಗದು ಎಂದು ಅಧಿಕೃತ ಮೂಲಗಳು ತಿಳಿಸಿವೆ.

ಕುಛ್‌ನ ಕೋಟೇಶ್ವರ ತೀರದಲ್ಲಿ ಉಗ್ರರು ಭಾರತಕ್ಕೆ ನುಸುಳಿದ್ದ ಅನಾಥ ದೋಣಿ ಮಾ.6ರಂದು ಪತ್ತೆಯಾಗಿತ್ತು.ಸ್ವತಂತ್ರ ಭಾರತದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜೈಷೆ ಉಗ್ರರು ಭಾರತದ ಗಡಿಯೊಳಕ್ಕೆ ನುಗ್ಗಿರುವ ಗುಪ್ತಚರ ಮಾಹಿತಿಯನ್ನು ಪಾಕಿಸ್ತಾನದ ರಾಷ್ಟ್ರೀಯ ಭದ್ರತಾ ಸಲಹೆಗಾರ ನಾಸಿರ್ ಖಾನ್ ಜಂಜುವಾ ಭಾರತದ ಜತೆ ಹಂಚಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಶಿವರಾತ್ರಿಯಂದು ದೇಶದ ಎಲ್ಲ ದೇಗುಲಗಳಲ್ಲೂ ಅಭೂತಪೂರ್ವ ಭದ್ರತೆ ಏರ್ಪಡಿಸಲಾಗಿತ್ತು. ಈಗ ಉಗ್ರರ ಅಡಗುತಾಣವನ್ನೂ ಪತ್ತೆಹಚ್ಚಿ ಅವರನ್ನು ಸದೆಬಡಿಯುವ ಕಾರ‌್ಯಾಚರಣೆ ನಡೆಯುತ್ತಿದೆ.


Viewing all articles
Browse latest Browse all 6795

Trending Articles


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಬಿಗ್‌ ನ್ಯೂಸ್: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ -‌ ಈ ಬಾರಿಯೂ...


‘ಬಾಹುಬಲಿ’ಅಭಿಮಾನಿಗಳಿಗೆ ಗುಡ್ ನ್ಯೂಸ್ ಸುದ್ದಿ ! ಬರ್ತಿದೆ ‘ಪಾರ್ಟ್-3’


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ತುಳು ತೆರೆಗೆ ಸೋನಿಯಾ ಎಂಟ್ರಿ



<script src="https://jsc.adskeeper.com/r/s/rssing.com.1596347.js" async> </script>