Quantcast
Channel: VijayKarnataka
Viewing all articles
Browse latest Browse all 6795

ಮೂರು ದಿನಗಳ ಕಲಾ ಪ್ರದರ್ಶನಕ್ಕೆ ಚಾಲನೆ

$
0
0

ಬಾಗಲಕೋಟ: ಕರ್ನಾಟಕ ಲಲಿತಾ ಕಲಾ ಅಕಾಡೆಮಿ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಂಯುಕ್ತವಾಗಿ ಏರ್ಪಡಿಸಿರುವ ಮೂರು ದಿನಗಳ 44 ನೇ ವಾರ್ಷಿಕ ಕಲಾ ಪ್ರದರ್ಶನಕ್ಕೆ ಹಿರಿಯ ಕಲಾವಿದ ವಿಜಯ ಸಿಂಧೂರ ಚಾಲನೆ ನೀಡಿದರು. ನಗರದ ಕಲಾ ಭವನದಲ್ಲಿ ಶುಕ್ರವಾರ ಆರಂಭಗೊಂಡ ಕಲಾಪ್ರದರ್ಶನಕ್ಕೆ ಚಾಲನೆ ನೀಡಿದ ಅವರು, ಬಾಗಲಕೋಟದಲ್ಲಿ ಆರ್ಟ್ ಗ್ಯಾಲರಿ ಸ್ಥಾಪಿಸುವಂತೆ ಸರಕಾರವನ್ನು ಒತ್ತಾಯಿಸಿದರು. ಕಲಾ ವೈಭವವನ್ನು ಗ್ರಾಮ ಮಟ್ಟಕ್ಕೆ ತಲುಪಿಸುವ ಉದ್ದೇಶದಿಂದ ಇತರ ಪ್ರದೇಶಗಳಲ್ಲೂ ಆರ್ಟ್ ಗ್ಯಾಲರಿಗಳ ಸ್ಥಾಪನೆ ಅಗತ್ಯವಿದೆ ಎಂದು ಅವರು ಪ್ರತಿಪಾದಿಸಿದರು. ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಶ್ರೀಶೈಲ ಕರಿಶಂಕರಿ, ಮೂರು ದಿನಗಳ ಕಲಾ ಪ್ರದರ್ಶನವನ್ನು ವೀಕ್ಷಿಸುವ ಮೂಲಕ ನಗರದ ಜನತೆ ಕಲೆಯನ್ನು ಪ್ರೋತ್ಸಾಹಿಸುವಂತೆ ಅವರು ಮನವಿ ಮಾಡಿದರು. ಲಲಿತ ಕಲಾ ಅಕಾಡೆಮಿಯ ಅಧ್ಯಕ್ಷ ಡಾ. ಎಂ.ಎಸ್. ಮೂರ್ತಿ ಅಧ್ಯಕ್ಷತೆ ವಹಿಸಿ, ಅಕಾಡೆಮಿಯು ಗೌರವ ಪ್ರಶಸ್ತಿ ಹಾಗೂ ಸಾಧಕರಿಗೆ ನೀಡುವ ವಾರ್ಷಿಕ ಪ್ರಶಸ್ತಿ ಮೊತ್ತ ಹೆಚ್ಚಿಸಿದೆ. ಅಕಾಡೆಮಿಗಳು ಗಂಜಿಕೇಂದ್ರಗಳಲ್ಲ ಎಂದ ಅವರು, ಲಲಿತ ಕಲೆ ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಎಲ್ಲರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು. ಖಾಸೀಂ ಕನಸಾವಿ , ಬಿ.ಕೆ. ಬಡಿಗೇರ, ಎ. ಮಹಾಲಿಂಗಪ್ಪ, ಎಚ್.ವಿ. ಇಂದ್ರಮ್ಮ, ಎಸ್.ಕೆ. ಕೊನೆಸಾಗರ, ಬಾಳಾಸಾಹೇಬ ಲೋಕಾಪೂರ ಇತರರು ಇದ್ದರು.








Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


Namaskāra नमस्कार (salutation)


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>