Quantcast
Channel: VijayKarnataka
Viewing all articles
Browse latest Browse all 6795

ಸಂಭಾವನೆ ಬಾಕಿ: ನಿರ್ಮಾಪಕರ ವಿರುದ್ಧ ಶ್ರೀದೇವಿ ದೂರು

$
0
0

ಚೆನ್ನೈ: ಬಾಲಿವುಡ್‌ನ ಎವರ್ ಬ್ಯೂಟಿ ಕ್ವೀನ್ ಶ್ರೀ ದೇವಿ ಅವರು ಇತ್ತೀಚೆಗೆ ತಾವು ನಟಿಸಿದ ಪುಲಿ ಚಿತ್ರ ನಿರ್ಮಾಪಕರ ವಿರುದ್ಧ ದೂರು ದಾಖಲಿಸಿದ್ದಾರೆ.

ತಮಗೆ ನೀಡಬೇಕಾಗಿರುವ 50 ಲಕ್ಷ ರೂಪಾಯಿ ಸಂಭಾವನೆಯನ್ನು ಕೊಡದೆ ನಿರ್ಮಾಪಕರಾದ ಪಿ ಟಿ ಸೆಲ್ವಂ ಹಾಗೂ ಶಿಬು ಥಮೀನ್ಸ್ ಅವರು ವಂಚಿಸಿದ್ದಾರೆಂದು ಆರೋಪಿಸಿ ಮುಂಬಯಿ ನಿರ್ಮಾಪಕರ ಮಂಡಳಿಗೆ ಶ್ರೀದೇವಿ ದೂರು ನೀಡಿದ್ದಾರೆ.

ಮೂಲಗಳ ಪ್ರಕಾರ ಶ್ರೀದೇವಿ ಅವರು ಈ ಚಿತ್ರದಲ್ಲಿ ನಟಿಸಲು 5 ಕೋಟಿ ರೂಪಾಯಿ ಸಂಭಾವನೆ ಕೇಳಿದ್ದರು. ನಿರ್ಮಾಪಕರು ಈಗಾಗಲೇ 4.5 ಕೋಟಿ ರೂ. ನೀಡಿದ್ದು, 50 ಲಕ್ಷ ರೂ. ಬಾಕಿ ಹಣ ಕೊಡಬೇಕಾಗಿದೆ ಎನ್ನಲಾಗಿದೆ.

ಪುಲಿ ಚಿತ್ರದ ಬಿಡುಗಡೆಗೂ ಮುನ್ನ ಆದಾಯ ತೆರಿಗೆ ಅಧಿಕಾರಿಗಳು ನಟ ವಿಜಯ್ ಅವರ ಮನೆ ಮೇಲೆ ದಾಳಿ ನಡೆಸಿದ್ದರು, ಈ ವೇಳೆ ಇಬ್ಬರೂ ನಿರ್ಮಾಪಕರ ಬ್ಯಾಂಕ್ ಖಾತೆ ಹಾಗೂ ಕೆಲವು ಹಣಕಾಸು ವ್ಯವಹಾರಗಳ ಮೇಲೆ ಕಡಿವಾಣ ಹಾಕಿದ್ದು ಸಂಭಾವನೆ ನೀಡಲು ಅಡ್ಡಿಯಾಗಿದೆ ಎಂದು ತಿಳಿದುಬಂದಿದೆ.

ಶ್ರೀದೇವಿ ಅವರ ದೂರನ್ನು ಪರಿಗಣಿಸಿರುವ ತಮಿಳುನಾಡು ಚಿತ್ರ ನಿರ್ಮಾಪಕರ ಮಂಡಳಿಯು ವಿಚಾರಣೆ ನಡೆಸುತ್ತಿದೆ. ಪ್ರಸ್ತುತ ಶಿಬು ಥಮೀನ್ಸ್ ಅವರು ಶಸ್ತ್ರ ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾಗಿದ್ದು, ದೂರು ಹಿನ್ನೆಲೆಯಲ್ಲಿ ಟ್ವಿಟರ್ ನಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. ಶಸ್ತ್ರ ಚಿಕಿತ್ಸೆ ನಂತರ ಶ್ರೀದೇವಿ ಅವರೊಂದಿಗಿನ ಹಣಕಾಸು ವ್ಯವಹಾರವನ್ನು ಇತ್ಯರ್ಥಪಡಿಸಿಕೊಳ್ಳುತ್ತೇನೆಂದು ಹೇಳಿಕೊಂಡಿದ್ದಾರೆ.


Viewing all articles
Browse latest Browse all 6795

Trending Articles


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ಮಲಗಿದ್ದ ಮಹಿಳೆ ಬೆದರಿಸಿ ಬೆತ್ತಲೆ ಫೋಟೋ ತೆಗೆದ ಕಳ್ಳ


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಬಿಗ್‌ ನ್ಯೂಸ್: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ -‌ ಈ ಬಾರಿಯೂ...


 ಕೌಟುಂಬಿಕ ಕಲಹ ಹಿನ್ನೆಲೆ; ಬುದ್ದಿವಾದ ಹೇಳಿದ ತಂಗಿಯನ್ನೇ ಕೊಂದ ಅಣ್ಣ…


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ವಚನಗಳಿಂದ ಸಂಗೀತ ಲೋಕ ಶ್ರೀಮಂತ


Final chapter from Krishnamacharya's Yogasanagalu Part II Pranayam. Plus the...


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಆಲೋಚನೆಗೂ ಕ್ರಿಯೆಯಷ್ಟೇ ಮಹತ್ವವಿದೆ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


‘ವ್ಯಾಪಾರ’ದಲ್ಲಿ ವೃದ್ಧಿಯಾಗಲು ಹೀಗೆ ಮಾಡಿ….


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>