Quantcast
Channel: VijayKarnataka
Viewing all articles
Browse latest Browse all 6795

ಶವ ಮನೆಯಲ್ಲಿರಿಸಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆದ ಬಾಲಕಿ

$
0
0

ತಿರುಪತಿ: ಈ ಬಾಲಕಿಗೆ ಜೀವನದಲ್ಲಿ ಎದುರಾದ ಅತಿ ದೊಡ್ಡ ಸಂದಿಗ್ಧ ಪರಿಸ್ಥಿತಿ ಇದು. ಒಂದೆಡೆ ಜೀವನದ ಮಹತ್ವದ ಘಟ್ಟವಾದ 10ನೇ ತರಗತಿ ಪರೀಕ್ಷೆ. ಮತ್ತೊಂದೆಡೆ ತನ್ನ ತಾಯಿಯ ಅನಿರೀಕ್ಷಿತ ಸಾವು. ಧೃತಿಗೆಡದೇ ತನ್ನ ತಾಯಿಯ ಕೊನೆ ಆಸೆಯಂತೆ ಪರೀಕ್ಷೆ ಬರೆದಿದ್ದಾಳೆ ಈ ದಿಟ್ಟ ಬಾಲಕಿ.

ಆಂಧ್ರಪ್ರದೇಶದ ತಿರುಪತಿಯಲ್ಲಿ ಸೋಮವಾರ ಈ ಮನಕಲಕುವ ಘಟನೆ ನಡೆದಿದೆ. ಎಲ್ಲ ವಿದ್ಯಾರ್ಥಿಗಳಂತೆಯೇ ಜಯಶ್ರೀ ಎಂಬ ಬಾಲಕಿಯೂ ಸೋಮವಾರ ಬೆಳಗ್ಗೆ ಎಸ್‌ಎಸ್‌ಎಲ್‌ಪಿ ಪರೀಕ್ಷೆಗೆ ತೆರಳಲು ಸಿದ್ಧತೆ ನಡೆಸುತ್ತಿದ್ದಳು. ಮಗಳಿಗೆ ಉಪಾಹಾರ ಸಿದ್ಧಪಡಿಸುತ್ತಿದ್ದ ತಾಯಿ ನಿರ್ಮಲಾ ಎಂಬವರು ಇದ್ದಕ್ಕಿದ್ದಂತೆ ಪಾರ್ಶ್ವವಾಯುಪೀಡಿತರಾಗಿ ಕುಸಿದುಬಿದ್ದು ಇಹಲೋಕ ತ್ಯಜಿಸಿದರು. ಈ ದುರಂತದಿಂದ ಜಯಶ್ರೀಗೆ ದಿಕ್ಕೇ ತೋಚಲಿಲ್ಲ. ಆದರೆ, ಶಿಕ್ಷಣದ ಮಹತ್ವದ ಬಗ್ಗೆ ತಾಯಿ ಯಾವಾಗಲೂ ಹೇಳುತ್ತಿದ್ದ ಮಾತು ನೆನಪಿನಲ್ಲಿತ್ತು.

ತಾಯಿಯ ಅಂತ್ಯ ಸಂಸ್ಕಾರಕ್ಕೆ ಸಿದ್ಧತೆ ನಡೆಯುತ್ತಿದ್ದಾಗಲೇ ಶಾಲೆಗೆ ತೆರಳಿದ ಬಾಲಕಿ ಕಂಬಿನಿ ಸುರಿಸುತ್ತಲೇ ಪರೀಕ್ಷೆಯನ್ನು ಬರೆದಳು. ಪರೀಕ್ಷೆ ಮುಗಿದ ಬಳಿಕ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಂಡಳು.

ಪರೀಕ್ಷೆಯಲ್ಲಿ ಪಾಲ್ಗೊಳ್ಳುವುದು ಜಯಶ್ರೀಗೆ ಸುಲಭದ ಮಾತೇನೂ ಆಗಿರಲಿಲ್ಲ. ಅಂತ್ಯಸಂಸ್ಕಾರಕ್ಕೆಂದು ಆಗಮಿಸಿದ್ದ ಸಂಬಂಧಿಗಳು ಜಯಶ್ರೀ ಪರೀಕ್ಷೆಗೆ ತೆರಳುವುದಕ್ಕೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರು. ಇದು ಸೋಮವಾರಕ್ಕೇ ಮುಗಿದಿಲ್ಲ. ಅಮ್ಮನ ಕೊನೆ ಆಸೆ ಅದೇ ಆಗಿರುವುದರಿಂದ ಉಳಿದೆಲ್ಲಾ ಪರೀಕ್ಷೆಗಳನ್ನು ಬರೆಯುವುದಾಗಿ ಜಯಶ್ರಿ ತಿಳಿಸಿದ್ದಾಳೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಮಲಗಿದ್ದ ಮಹಿಳೆ ಬೆದರಿಸಿ ಬೆತ್ತಲೆ ಫೋಟೋ ತೆಗೆದ ಕಳ್ಳ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


‘ವ್ಯಾಪಾರ’ದಲ್ಲಿ ವೃದ್ಧಿಯಾಗಲು ಹೀಗೆ ಮಾಡಿ….


ಅಪ್ಪ ಅಮ್ಮ ಬೈಯ್ತಾರೆ ಅಂತ ಬೆಂಗಳೂರಿಂದ ಚಳ್ಳಕೆರೆಗೆ ಹೋದ ಮಕ್ಕಳು


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


Namaskāra नमस्कार (salutation)


ತುಳು ತೆರೆಗೆ ಸೋನಿಯಾ ಎಂಟ್ರಿ



<script src="https://jsc.adskeeper.com/r/s/rssing.com.1596347.js" async> </script>