Quantcast
Channel: VijayKarnataka
Viewing all articles
Browse latest Browse all 6795

ಈಶಾನ್ಯ ರಾಜ್ಯಗಳ ಅಭಿವೃದ್ಧಿಗೆಆದ್ಯತೆ: ರಾಜನಾಥ ಸಿಂಗ್

$
0
0

ಶಿಲ್ಲಾಂಗ್: ಈಶಾನ್ಯ ರಾಜ್ಯಗಳನ್ನು ಆಗ್ನೇಯ ಏಷ್ಯಾದ ಭಾಗಗಳ ವ್ಯಾಪಾರ ಕೇಂದ್ರವಾಗಿ ಮಾಡಲಾಗುವುದು.ಆದರೆ ಅಲ್ಲಿ ಶಾಂತಿಯನ್ನು ಕಾಪಾಡುವಂತಾಗಬೇಕು ಎಂದು ಗೃಹ ಸಚಿವ ರಾಜನಾಥ ಸಿಂಗ್ ತಿಳಿಸಿದ್ದಾರೆ.

ಅಸ್ಸಾಂ ರೈಫಲ್ಸ್ ನ 181ನೇ ವರ್ಷದ ದಿನಾಚರಣೆಯ ಅಂಗವಾಗಿ ಹಮ್ಮಿಕೊಳ್ಳಲಾಗಿದ್ದ 'ಸೈನಿಕ್ ಸಮ್ಮೇಳನ' ಕಾರ್ಯಕ್ರಮದಲ್ಲಿ ಸಿಂಗ್ ಮಾತನಾಡಿದರು.

ಕಳೆದ ದಿನಗಳಲ್ಲಿ ಅಸ್ಸಾಂ ರೈಫಲ್ಸ್ ಈಶಾನ್ಯ ರಾಜ್ಯಗಳಲ್ಲಿ ಶಾಂತಿಯನ್ನು ಕಾಪಾಡಿದೆ. ಆಗ್ನೇಯ ಏಷ್ಯಾದ ಭಾಗಗಳಲ್ಲಿ ಹೆಚ್ಚಿನ ಸಂಪರ್ಕ ಮತ್ತು ಬೇಡಿಕೆಗಳಿಂದ ಗಡಿಯಾಚೆಗಿನ ವ್ಯಾಪಾರ ಹೆಚ್ಚಿಸಲು ಸಹಾಯವಾಗುತ್ತದೆ. ಈಶಾನ್ಯ ಭಾಗವು ವೇಗವಾಗಿ ಅಭಿವೃದ್ದಿ ಹೊಂದುವುದೇ ನಮ್ಮ ಆದ್ಯತೆ. ಇತ್ತೀಚಿನ ದಿನಗಳಲ್ಲಿ ಮಹಿಳೆಯರೂ ಕೂಡಾ ರೈಫಲ್ಸ್ ಗೆ ಸೇರುತ್ತಿರುವುದು ಹೆಮ್ಮೆಯ ಸಂಗತಿ ಎಂದರು.

ಈಶಾನ್ಯ ರಾಜ್ಯಗಳಲ್ಲಿ ಹಿಂಸೆಯು ಕಳೆದ 18 ವರ್ಷಗಳಲ್ಲಿಯೇ ಹಿಂದಿನ ವರ್ಷ ಕಡಿಮೆ ಆಗಿದೆ. ಅಸ್ಸಾಂ ರೈಫಲ್ಸ್ ಹಳೆಯ ಅರೆಸೈನಿಕ ಪಡೆಯಾಗಿದ್ದು 1835 ರಲ್ಲಿ ಶಿಲ್ಲಾಂಗ್ ನಲ್ಲಿ ಸ್ಥಾಪಿಸಲಾಗಿತ್ತು.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>