Quantcast
Channel: VijayKarnataka
Viewing all articles
Browse latest Browse all 6795

ಮೋದಿ 'ದೇವರ ವರ' ಹೇಳಿಕೆಗೆ ಆರೆಸ್ಸೆಸ್‌ ಗರಂ

$
0
0

ಹೊಸದಿಲ್ಲಿ: ಪ್ರಧಾನಿ ನರೇಂದ್ರ ಮೋದಿ ಅವರನ್ನು ದೇವರ ವರ ಎಂದು ಬಿಜೆಪಿ ನಾಯಕರು ಬಣ್ಣಿಸಿರುವ ಬಗ್ಗೆ ಆರೆಸ್ಸೆಸ್‌ ಅಸಮಾಧಾನ ವ್ಯಕ್ತಪಡಿಸಿದೆ.

ರಾಷ್ಟ್ರೀಯತೆ ಹಾಗೂ ಅಭಿವೃದ್ಧಿ ಮಂತ್ರದೊಂದಿಗೆ ಪಕ್ಷ ಮನ್ನಡೆಯಬೇಕು. ವ್ಯಕ್ತಿ ಆರಾಧನೆ ಸಲ್ಲದು, ಎಲ್ಲಕ್ಕಿಂತ ಸಂಘಟನೆ ದೊಡ್ಡದು ಎಂದು ಆರೆಸ್ಸೆಸ್‌ ಗುಡುಗಿದೆ.

ಇತ್ತೀಚಿಗೆ ನಡೆದ ಪಕ್ಷದ ರಾಷ್ಟ್ರೀಯ ಕಾರ್ಯಕಾರಣಿಯಲ್ಲಿ ರಾಜಕೀಯ ನಿರ್ಣಯ ಮಂಡಿಸುವ ಸಂದರ್ಭದಲ್ಲಿ ಕೇಂದ್ರ ಸಚಿವ ಎಂ.ವೆಂಕಯ್ಯ ನಾಯ್ಡು, ಪ್ರಧಾನಿ ಮೋದಿ ಭಾರತಕ್ಕೆ ದೇವರು ಕೊಟ್ಟಿರುವ ವರ' ಎಂದು ಹೇಳಿದ್ದರು.

ರಾಜಸ್ಥಾನದ ನಾಗೌರ್‌ನಲ್ಲಿ ಪ್ರತಿನಿಧಿಗಳ ಸಭೆ ನಡೆದ ನಂತರ ಬಿಜೆಪಿಯ ಅಗ್ರ ನಾಯಕರ ಜತೆ ಮಾತುಕತೆ ನಡೆಸಿದ ಆರೆಸ್ಸೆಸ್‌ ಮುಖಂಡರು, ನಾಯ್ಡು ಹೇಳಿಕೆ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಆರೆಸ್ಸೆಸ್‌ನ ಸುರೇಶ್‌ ಭಯ್ಯಾಜೀ ಜೋಶಿ, ಕೃಷ್ಣ ಗೋಪಾಲ್‌, ದತ್ತಾತ್ತ್ರೇಯ ಹೊಸಬಾಳೆ ಹಾಗೂ ಬಿಜೆಪಿಯ ಅಮಿತ್‌ ಶಾ, ರಾಮ್‌ಲಾಲ್‌ ಹಾಗೂ ವಿನಯ್‌ ಸಹಸ್ರಬೋಧೆ ಸಭೆಯಲ್ಲಿ ಭಾಗವಹಿಸಿದ್ದರು.
ಐದು ರಾಜ್ಯಗಳ ವಿಧಾನಸಭೆ ಚುನಾವಣೆ ಹಾಗೂ ಜಮ್ಮು ಕಾಶ್ಮೀರದಲ್ಲಿ ಸರಕಾರ ರಚನೆ ಬಗ್ಗೆಯೂ ಸಭೆಯಲ್ಲಿ ಮಾತುಕತೆ ನಡೆದಿದೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಬಿಗ್‌ ನ್ಯೂಸ್: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ -‌ ಈ ಬಾರಿಯೂ...


 ಕೌಟುಂಬಿಕ ಕಲಹ ಹಿನ್ನೆಲೆ; ಬುದ್ದಿವಾದ ಹೇಳಿದ ತಂಗಿಯನ್ನೇ ಕೊಂದ ಅಣ್ಣ…


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


‘ಒಡಕು ಮೂಡಿಸಿದ ಸಿದ್ಧರಾಮಯ್ಯ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್