Quantcast
Channel: VijayKarnataka
Viewing all articles
Browse latest Browse all 6795

2.95 ಕೋಟಿ ಗ್ರಾಮೀಣ ಮನೆಗಳ ನಿರ್ಮಾಣ

$
0
0

ಕೇಂದ್ರ ಸಚಿವ ಸಂಪುಟ ಸಭೆ ಅನುಮೋದನೆ

ಹೊಸದಿಲ್ಲಿ: 2022ರ ವೇಳೆಗೆ ಎಲ್ಲರಿಗೂ ವಸತಿ ಕಲ್ಪಿಸುವ ಮಹತ್ವಾಕಾಂಕ್ಷಿ ಕಾರ್ಯಕ್ರಮದ ಅಡಿ, ಗ್ರಾಮೀಣ ಭಾರತದಲ್ಲಿ 2.95 ಕೋಟಿ ಮನೆಗಳನ್ನು ನಿರ್ಮಿಸಲು ಕೇಂದ್ರ ಸರಕಾರ ನಿರ್ಧರಿಸಿದೆ.

ಹೊಸದಿಲ್ಲಿಯಲ್ಲಿ ಬುಧವಾರ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ತೆಗೆದುಕೊಳ್ಳಲಾಗಿದೆ.

ಪ್ರಧಾನ ಮಂತ್ರಿ ಆವಾಸ್ ಗ್ರಾಮೀಣ ಯೋಜನೆಯ ಅಡಿ, ಗ್ರಾಮೀಣ ಭಾಗದಲ್ಲಿ ಮೊದಲ ಮೂರು ವರ್ಷಗಳಲ್ಲಿ ಒಂದು ಕೋಟಿ ಮನೆಗಳನ್ನು ನಿರ್ಮಿಸಲು ಸುಮಾರು 81,975 ಕೋಟಿ ರೂ. ವೆಚ್ಚ ಮಾಡಲು ಸರಕಾರ ನಿರ್ಧರಿಸಿದೆ.

ಸಭೆಯ ನಂತರ ಸುದ್ದಿಗಾರರಿಗೆ ವಿವರ ಒದಗಿಸಿದ ಕೇಂದ್ರ ದೂರಸಂಪರ್ಕ ಮತ್ತು ಐಟಿ ಸಚಿವ ರವಿಶಂಕರ್ ಪ್ರಸಾದ್, ಗ್ರಾಮೀಣ ಭಾರತದಲ್ಲಿ ಮಹತ್ವಾಕಾಂಕ್ಷಿ ಸ್ವಚ್ಛ ಭಾರತ ಅಭಿಯಾನ ಕೈಗೊಳ್ಳಲು ವಿಶ್ವಬ್ಯಾಂಕ್ ನೀಡಿರುವ 10,023 ಕೋಟಿ ರೂ.(1.5 ಬಿಲಿಯನ್ ಡಾಲರ್) ಸಾಲ ರೂಪದ ಆರ್ಥಿಕ ನೆರವಿಗೆ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದರು.

ಈಗಾಗಲೇ ರಾಜ್ಯಗಳಲ್ಲಿ ನಡೆಯುತ್ತಿರುವ ಸ್ವಚ್ಛ ಭಾರತ ಅಭಿಯಾನದ ಕಾರ್ಯ ನಿರ್ವಹಣೆ ಆಧರಿಸಿ, ಅವುಗಳನ್ನು ಮತ್ತಷ್ಟು ಪ್ರೋತ್ಸಾಹಿಸುವ ಉದ್ದೇಶದಿಂದ ಕೇಂದ್ರ ಸರಕಾರ ವಿಶ್ವಬ್ಯಾಂಕ್‌ನ ಈ ನೆರವನ್ನು ಒದಗಿಸಲಿದೆ ಎಂದು ಕೇಂದ್ರ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಸಭೆಯ ನಂತರ ದೂರಸಂಪರ್ಕ ಮತ್ತು ಐಟಿ ಸಚಿವ ರವಿಶಂಕರ್ ಪ್ರಸಾದ್ ವಿವರ ನೀಡಿದರು.

ವಿಶ್ವಬ್ಯಾಂಕ್‌ನ ಸಾಲ ಶೌಚಾಲಯ ನಿರ್ಮಾಣಕ್ಕೆ ಹೆಚ್ಚು ಬಳಕೆ ಆಗಬೇಕು ಎಂಬುದು ಕೇಂದ್ರದ ನಿಲುವಾಗಿದೆ. 2019ರ ವೇಳೆಗೆ ಸಂಪೂರ್ಣ ಶೌಚಾಲಯ ಹೊಂದಿದ ರಾಷ್ಟ್ರವಾಗಿ ರೂಪಿಸುವ ಗುರಿಯ ಉಪಕ್ರಮವಾಗಿ ಈ ನೆರವು ರಾಜ್ಯಗಳಿಗೆ ಹಂಚಿಕೆಯಾಗಲಿದೆ ಎಂದು ಅವರು ತಿಳಿಸಿದರು.

ಸಂಪುಟದ ಇತರೆ ತೀರ್ಮಾನಗಳು....

*ಸಫಾಯಿ ಕರ್ಮಚಾರಿಗಳ ರಾಷ್ಟ್ರೀಯ ಆಯೋಗದ ಅವಧಿ ಮೂರು ವರ್ಷಗಳಿಗೆ ವಿಸ್ತರಿಸಲು ಸಮ್ಮತಿ

*124 ಕಿ.ಮೀ. ಉದ್ದದ ಕಿಯುಲ್-ಗಯಾ ರೈಲು ಮಾರ್ಗವನ್ನು ಜೋಡಿ ಮಾರ್ಗವಾಗಿ ಪರಿವರ್ತಿಸಲು 1,354.22 ಕೋಟಿ ರೂ.

*ಬಹುನಿರೀಕ್ಷಿತ ರಾಷ್ಟ್ರೀಯ ಬಂಡವಾಳ ಸರಕುಗಳ ನೀತಿ ಬುಧವಾರದ ಸಂಪು ಸಭೆಯ ಪರಿಗಣನೆಗೆ ಬರಲಿಲ್ಲ: ರವಿಶಂಕರ್ ಪ್ರಸಾದ್ ಸ್ಪಷ್ಟನೆ


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


Namaskāra नमस्कार (salutation)


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>