Quantcast
Channel: VijayKarnataka
Viewing all articles
Browse latest Browse all 6795

ಪಿಡಿಒ, ಕಾರ್ಯದರ್ಶಿಗಳ ಅಮಾನತಿಗೆ ನೌಕರರ ವಿರೋಧ

$
0
0

ಆನವಟ್ಟಿ: ನಾಲ್ವರು ಅಧಿಕಾರಿಗಳನ್ನು ಅಮಾನತು ಗೊಳಿಸಿರುವ ಡಿಸಿ ಕ್ರಮ ಖಂಡಿಸಿ ಗ್ರಾಮೀಣ ಅಭಿವೃದ್ಧಿ ಮತ್ತು ಪಂಚಾಯತ್‌ರಾಜ್ ಇಲಾಖೆ ನೌಕರರ ಸಂಘದ ವತಿಯಿಂದ ತಾಲೂಕು ಪಂಚಾಯಿತಿ ಕಚೇರಿ ಎದುರು ಶುಕ್ರವಾರ ಅನಿರ್ದಿಷ್ಟಾ ವಧಿ ಪ್ರತಿಭಟನೆ ಆರಂಭವಾಗಿದೆ.

ನೇತೃತ್ವ ವಹಿಸಿದ್ದ ಸಂಘದ ತಾಲೂಕು ಅಧ್ಯಕ್ಷ ನೀಲಪ್ಪ ಭೂತಣ್ಣನವರ್ ಮಾತ ನಾಡಿ, ಮಾ.31ರಂದು ಪಟ್ಟಣದಲ್ಲಿ ಕರೆದ ತುರ್ತು ಸಭೆಗೆ ಹಲವು ಕಾರ್ಯಕ್ರಮಗಳ ಅನುಷ್ಠಾನದಲ್ಲಿ ನಿರತರಾಗಿದ್ದ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ‌್ಯದರ್ಶಿಗಳು ಹಾಜರಾಗಿಲ್ಲ. ಅಂದು ಗ್ರಾಮಪಂಚಾ ಯಿತಿಗಳಲ್ಲಿ ಕಾರ‌್ಯನಿರ್ವಹಿಸಿದ್ದಾರೆ. ಈ ಬಗ್ಗೆ ಮಾಹಿತಿ ಹಾಗೂ ಸಂವಹನದ ಕೊರತೆಯಿಂದಾಗಿ ಡಿಸಿ ಅವರು ಶಿಗ್ಗಾ, ಗೆಂಡ್ಲಾ, ಹಂಚಿ ಹಾಗೂ ಶಕುನವಳ್ಳಿಯ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಹಾಗೂ ಕಾರ್ಯದರ್ಶಿಗಳನ್ನು ಅಮಾನತುಗೊಳಿಸಿದ್ದಾರೆ. ಈ ಕ್ರಮ ಖಂಡನೀಯ ಎಂದರು.

ತಾಲೂಕು ಉಪಾಧ್ಯಕ್ಷ ಪರಮೇಶ್ ಮಾತನಾಡಿ, ಆರ್ಥಿಕ ವರ್ಷದ ಕೊನೆಯಾಗಿರುವುದರಿಂದ ಕೆಲಸಗಳ ಒತ್ತಡ ಅತಿಯಾಗಿರುತ್ತದೆ. ಅಲ್ಲದೇ ಅತಿ ಜರೂರಾಗಿ ಆರ್ಥಿಕ ಮತ್ತು ಭೌತಿಕವಾಗಿ ಪೂರ್ಣಗೊಂಡ ಕಾಮಗಾರಿಗಳಿಗೆ ಕಾಮಗಾರಿ ಮುಕ್ತಾಯ ದಿನಾಂಕ ನಮೂದಿಸಬೇಕಾಗುತ್ತದೆ. ತಾಲೂಕಿನ ಬಹುತೇಕ ಗ್ರಾಮಗಳಲ್ಲಿ ಮೊಬೈಲ್ ನೆಟ್‌ವರ್ಕ್ ಹಾಗೂ ಇಂಟರ್‌ನೆಟ್ ಸಮಸ್ಯೆಯೂ ಇರುವುದರಿಂದ ಹಲವರು ತಾಲೂಕಿನ ಗಡಿ ಪ್ರದೇಶದಿಂದ ಕೇಂದ್ರ ಸ್ಥಾನಕ್ಕೆ ಬರಲು ಸಮಯಾವಕಾಶ ಬೇಕಾಗುತ್ತದೆ. ಇದೆಲ್ಲದರ ನಡುವೆ ಬಹುತೇಕ ಮಂದಿ ಸಭೆಗೆ ಹಾಜರಾಗಿದ್ದು, ಕೆಲವರು ಮಾತ್ರ ಸಭೆಗೆ ಸಕಾಲಕ್ಕೆ ಹಾಜರಾಗಲು ವಿಳಂಬವಾಗಿದೆ ಎಂದರು. ಕೂಡಲೇ ಅಮಾನತು ಆದೇಶ ಹಿಂಪಡೆಯಬೇಕು. ಇಲ್ಲವಾದಲ್ಲಿ ಜಿಲ್ಲಾ ದ್ಯಂತ ಪ್ರತಿಭಟನೆ ಹಾಗೂ ಸಾಮೂಹಿಕ ರಾಜೀನಾಮೆ ನೀಡಲಾಗುವುದು ಎಂದರು.

ಪ್ರತಿಭಟನೆಯಲ್ಲಿ ಶ್ರೀರಾಮ್, ಹೋಮೇಶಪ್ಪ, ನರೇಂದ್ರ, ಸೀಮಾ, ಕಾಳಿಂಗರಾಜ, ನಾಗರಾಜ, ಸುಭಾಷ್, ಮಂಜಪ್ಪ, ನವೀನ, ರಾಜು, ಭುಜಂಗಪ್ಪ, ಶಕುನವಳ್ಳಿ ಗ್ರಾ.ಪಂ.ಅಧ್ಯಕ್ಷೆ ಸುನಿತಾ, ಉಪಾಧ್ಯಕ್ಷ ಮಹೇಶ, ಸಾಗರ, ಸೊರಬ, ಶಿಕಾರಿಪುರ ಗ್ರಾ.ಪಂ.ಪಿಡಿಓ ಮತ್ತು ಕಾರ್ಯದರ್ಶಿಗಳು ಹಾಜರಿದ್ದರು.

--------------
ಆಸ್ಪತ್ರೆಗೆ ದಾಖಲು

ಆನವಟ್ಟಿ: ತಾಲೂಕು ಪಂಚಾಯಿತಿ ಎದುರು ಪ್ರತಿಭಟನೆ ಸಂದರ್ಭ ಅಮಾನತುಗೊಂಡ ಹಂಚಿ ಗ್ರಾಮ ಪಂಚಾಯಿತಿ ಕಾರ‌್ಯದರ್ಶಿ ಸುರೇಶ್ ಅಸ್ವಸ್ಥರಾಗಿ ಕುಸಿದು ಬಿದ್ದರು. ತಕ್ಷಣವೇ ಅವರನ್ನು ಅಂಬ್ಯುಲೆನ್ಸ್ ನಿಂದ ಪಟ್ಟಣದ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಯಿತು. ಸುರೇಶ್ ಈ ಮೊದಲು ಸಕ್ಕರೆ ಕಾಯಿಲೆ ಹಾಗೂ ರಕ್ತದೊತ್ತಡಕ್ಕೆ ಚಿಕಿತ್ಸೆ ಪಡೆಯುತ್ತಿದ್ದರು. ಪ್ರಾಮಾಣಿಕವಾಗಿ ಕಾರ‌್ಯನಿರ್ವಹಿಸುತ್ತಿದ್ದ ಅವರಿಗೆ ಅಮಾನತು ವಿಷಯ ದಿಗ್ಭ್ರಮೆ ಉಂಟು ಮಾಡಿದೆ ಎನ್ನುತ್ತಾರೆ ಅವರ ಸಹೋದ್ಯೋಗಿಗಳು.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಶಿವಸೇನೆ ಬಿಗಿಪಟ್ಟು: ದೇಶ ಗೆದ್ದ ಬಿಜೆಪಿ ವಿಲವಿಲ


ಶುಭ ಫಲಕ್ಕಾಗಿ ಮನೆಯಲ್ಲಿ ಗಾಳಿ ಗಂಟೆ ಹಾಕುವ ಮುನ್ನ ಈ ವಿಚಾರ ತಿಳಿಯಿರಿ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>