Quantcast
Channel: VijayKarnataka
Viewing all articles
Browse latest Browse all 6795

ರಾಹುಲ್‌ ರಾಜ್‌ ನಿರೀಕ್ಷಣಾ ಜಾಮೀನು ಅರ್ಜಿ ವಜಾ

$
0
0

ಮುಂಬಯಿ: ಕಿರು ತೆರೆ ನಟಿ ಪ್ರತ್ಯೂಷಾ ಬ್ಯಾನರ್ಜಿ ಆತ್ಮಹತ್ಯೆ ಪ್ರಕರಣದಲ್ಲಿ ಮುಖ್ಯ ಆರೋಪಿಯ ಸ್ಥಾನದಲ್ಲಿರುವ ನಟ ಹಾಗೂ ನಿರ್ಮಾಪಕ ರಾಹುಲ್‌ರಾಜ್‌ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಗುರುವಾರ ದಿಂಡೋಸಿ ಕೋರ್ಟ್‌ ವಜಾ ಮಾಡಿದೆ.

ರಾಹುಲ್‌ ಸಲ್ಲಿಸಿದ ಅರ್ಜಿಗೆ ವಿರೋಧ ವ್ಯಕ್ತಪಡಿಸಿದ ಬ್ಯಾನರ್ಜಿ ಕುಟುಂಬದ ವಕೀಲರಾದ ಫಲ್ಗುಣಿ ಬ್ರಹ್ಮಭಟ್‌, ವಿಚಾರಣೆ ಇನ್ನೂ ಪ್ರಾಥಮಿಕ ಹಂತದಲ್ಲೇ ಇದ್ದು, ಕೊಲೆಯೋ, ಆತ್ಮಹತ್ಯೆಯೋ ಎಂಬುದು ದೃಢಪಟ್ಟಿಲ್ಲ. ಹೀಗಾಗಿ ಈ ಹಂತದಲ್ಲಿ ನಿರೀಕ್ಷಣಾ ಜಾಮೀನು ನೀಡುವುದು ಸರಿಯಲ್ಲ ಎಂದು ವಾದಿಸಿದರು.

ವಾದ ಮಂಡಿಸಿದ ರಾಹುಲ್‌ ಪರ ವಕೀಲ ಅಶೋಕ್‌ ಸರೋಗಿ, ಹಣಕಾಸು ವ್ಯವಹಾರಕ್ಕೆ ಸಂಬಂಧಿಸಿದಂತೆ ಪ್ರತ್ಯೂಷಾ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದರು. ಇದನ್ನು ತಳ್ಳಿಹಾಕಿದ ಫಲ್ಗುಣಿ ಹಣಕಾಸು ವ್ಯವಹಾರ ಆತ್ಮಹತ್ಯೆಗೆ ಕಾರಣವಲ್ಲ ಎಂದರು.

ಇಬ್ಬರ ವಾದ ಪ್ರತಿವಾದ ಆಲಿಸಿದ ನ್ಯಾಯಾಧೀಶ ಅಹಮ್ಮದ್‌ ರಾಹುಲ್‌ ರಾಜ್‌ ಸಿಂಗ್‌ ನಿರೀಕ್ಷಣಾ ಜಾಮೀನು ಅರ್ಜಿಯನ್ನು ತಿರಸ್ಕರಿಸಿದರು. ಈ ಹಿನ್ನೆಲೆಯಲ್ಲಿ ರಾಹುಲ್‌ ರಾಜ್‌ ಪರ ವಕೀಲರು ಸೆಸೆನ್ಸ್‌ ನ್ಯಾಯಾಧೀಶರ ತೀರ್ಪನ್ನು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸುವ ಸಾಧ್ಯತೆ ಇದೆ.


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


‘ಬಾಹುಬಲಿ’ಅಭಿಮಾನಿಗಳಿಗೆ ಗುಡ್ ನ್ಯೂಸ್ ಸುದ್ದಿ ! ಬರ್ತಿದೆ ‘ಪಾರ್ಟ್-3’


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>