Quantcast
Channel: VijayKarnataka
Viewing all articles
Browse latest Browse all 6795

ನೈಋತ್ಯ ರೈಲ್ವೆ: ಪ್ರಸಕ್ತ ವರ್ಷ ಗುರಿ ಮೀರಿ ಆದಾಯ

$
0
0

ಸರಕು ಸಾಗಣೆ ಮೂಲಕ 3842 ಕೋಟಿ ರೂ. ವರಮಾನ

ಹುಬ್ಬಳ್ಳಿ : ನೈಋತ್ಯ ರೈಲ್ವೆ ವಲಯ ವ್ಯಾಪ್ತಿಯ ಹುಬ್ಬಳ್ಳಿ, ಬೆಂಗಳೂರು ಹಾಗೂ ಮೈಸೂರು ವಿಭಾಗದಲ್ಲಿ ಪ್ರಯಾಣಿಕರಿಗಿಂತಲೂ ಸರಕು ಸಾಗಣೆಯಿಂದಲೇ ಹೆಚ್ಚು ಆದಾಯ ಗಳಿಸಲಾಗಿದೆ ಎಂದು ನೈಋತ್ಯ ರೈಲ್ವೆ ವಲಯದ ಪ್ರಧಾನ ವ್ಯವಸ್ಥಾಪಕ ಪಿ.ಕೆ. ಸಕ್ಸೇನಾ ತಿಳಿಸಿದರು.

ನಗರದ ಗದಗ ರಸ್ತೆಯಲ್ಲಿನ ಚಾಲುಕ್ಯ ರೈಲ್ವೆ ಇನ್‌ಸ್ಟಿಟ್ಯೂಟ್‌ನಲ್ಲಿ ಮಂಗಳವಾರ ನಡೆದ 61ನೇ ರೈಲ್ವೆ ಸಪ್ತಾಹ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ರೈಲ್ವೆ ಬೋರ್ಡ್ ನೀಡಿದ್ದ 41 ದಶಲಕ್ಷ ಟನ್ ಸರಕು ಸಾಗಣೆಯ ಗುರಿಯನ್ನು ಮೀರಿ 42.9 ದಶಲಕ್ಷ ಟನ್ ಸರಕು ಸಾಗಣೆ ಮಾಡುವ ಮೂಲಕ 3842 ಕೋಟಿ ರೂ. ಆದಾಯ ಗಳಿಸಲಾಗಿದೆ ಎಂದರು.

ರೈಲ್ವೆ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯಿಂದಾಗಿ 3,400 ವಿಶೇಷ ರೈಲುಗಳನ್ನು ಓಡಿಸಲಾಗಿದೆ. ಅಲ್ಲದೆ 6,091 ಹೆಚ್ಚುವರಿ ಬೋಗಿಗಳನ್ನು ನಿತ್ಯ ಸಂಚರಿಸುವ ರೈಲುಗಳಿಗೆ ಜೋಡಿಸಲಾಗಿದೆ. ಆ ಮೂಲಕ ರೈಲ್ವೆ ಸಿಬ್ಬಂದಿ ಶೇ.95ರಷ್ಟು ಸಮಯ ಪ್ರಜ್ಞೆ ಮೆರೆದಿದ್ದಾರೆ ಎಂದರು.

ರೈಲ್ವೆ ಪ್ರಯಾಣಿಕರ ಸುರಕ್ಷತೆ ಹಾಗೂ ಭದ್ರತೆಗೆ ಹೆಚ್ಚು ಆದ್ಯತೆ ನೀಡಲಾಗಿದೆ. ನೈಋತ್ಯ ರೈಲ್ವೆ ವಿಭಾಗದಲ್ಲಿ 2015-16 ರಲ್ಲಿ ರೈಲು ಕಾರ್ಯಾಚರಣೆಯ ಸುರಕ್ಷತೆಗಾಗಿ ಮಾನವ ಸಹಿತ ಕ್ರಾಸಿಂಗ್‌ಗಳನ್ನು ತೆಗೆದು ಹಾಕಿ 53 ಮಾನವ ರಹಿತ ಕ್ರಾಸಿಂಗ್‌ಗಳನ್ನು ನಿರ್ಮಿಸಲಾಗಿದೆ. ಅಲ್ಲದೆ ನಾಲ್ಕು ರೈಲು ನಿಲ್ದಾಣಗಳಲ್ಲಿ ಪಾದಚಾರಿಗಳ ಮೇಲ್ಸೇತುವೆ ನಿರ್ಮಿಸಲಾಗಿದೆ ಎಂದು ತಿಳಿಸಿದರು.

ಪ್ರಶಸ್ತಿ ವಿತರಣೆ

ಒಟ್ಟು ಸಾಮರ್ಥ್ಯ ಪರಿಗಣಿಸಿ ಮೈಸೂರು ವಿಭಾಗಕ್ಕೆ ಪ್ರಶಸ್ತಿಯನ್ನು ಇದೇ ಸಂದರ್ಭದಲ್ಲಿ ವಿತರಿಸಲಾಯಿತು. ಇದೇ ರೀತಿ ನೈಋತ್ಯ ರೈಲ್ವೆ ವಲಯ ವ್ಯಾಪ್ತಿಯ ಹುಬ್ಬಳ್ಳಿ, ಬೆಂಗಳೂರು ಹಾಗೂ ಮೈಸೂರು ವಿಭಾಗಗಳಲ್ಲಿನ ಸುರಕ್ಷತೆ, ಎಲೆಕ್ಟ್ರಿಸಿಟಿ, ಕಮರ್ಷಿಯಲ್, ಕಾರ್ಯಾಚರಣೆ, ವೈದ್ಯಕೀಯ, ಎಂಜಿನಿಯರಿಂಗ್, ಮೆಕ್ಯಾನಿಕಲ್, ಮೆಕ್ಯಾನಿಕಲ್ ಸ್ಟೋರ್, ವರ್ಕಶಾಪ್, ಸ್ಟೇಶನ್, ರೈಲು ನಿಲ್ದಾಣದ ನಿರ್ವಹಣೆ, ಬೆಸ್ಟ್ ಸ್ಟೇಶನ್, ಬೆಸ್ಟ್ ರನ್ನಿಂಗ್ ರೂಮ್‌ಗಳಲ್ಲಿ ಸಾಧನೆ ಮಾಡಿದ ನಾನಾ ಡಿಪಾರ್ಟ್‌ಮೆಂಟ್‌ಗಳಿಗೆ ಪ್ರಶಸ್ತಿ ವಿತರಿಸಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮ ನಡೆದವು.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಮಲಗಿದ್ದ ಮಹಿಳೆ ಬೆದರಿಸಿ ಬೆತ್ತಲೆ ಫೋಟೋ ತೆಗೆದ ಕಳ್ಳ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


‘ವ್ಯಾಪಾರ’ದಲ್ಲಿ ವೃದ್ಧಿಯಾಗಲು ಹೀಗೆ ಮಾಡಿ….


ಅಪ್ಪ ಅಮ್ಮ ಬೈಯ್ತಾರೆ ಅಂತ ಬೆಂಗಳೂರಿಂದ ಚಳ್ಳಕೆರೆಗೆ ಹೋದ ಮಕ್ಕಳು


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


Namaskāra नमस्कार (salutation)


ತುಳು ತೆರೆಗೆ ಸೋನಿಯಾ ಎಂಟ್ರಿ



<script src="https://jsc.adskeeper.com/r/s/rssing.com.1596347.js" async> </script>