Quantcast
Channel: VijayKarnataka
Viewing all articles
Browse latest Browse all 6795

ನಾನೇನು ಹೆದರೋದಿಲ್ಲ: ಸೋನಿಯಾ

$
0
0

ಹೊಸದಿಲ್ಲಿ: ಸಂಸತ್ ಅಧಿವೇಶನದಲ್ಲಿ ಬುಧವಾರ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ವಿರುದ್ಧ ಅಗಸ್ಟಾ ವೆಸ್ಟ್‌ಲ್ಯಾಂಡ್‌ ಹೆಲಿಕಾಪ್ಟರ್‌ ಖರೀದಿ ಹಗರಣವನ್ನು ಅಸ್ತ್ರವಾಗಿ ಬಳಸಿಕೊಂಡು ಬಿಜೆಪಿ ದಾಳಿ ಆರಂಭಿಸಿದ್ದರೆ 'ನಾನೇನು ಇದಕ್ಕೆ ಹೆದರೋದಿಲ್ಲ. ನಾವು ಏನನ್ನೂ ಮುಚ್ಚಿಟ್ಟಿಲ್ಲ, ಹೀಗಿರುವಾಗ ನನ್ನ ಹೆಸರು ತೆಗೆದುಕೊಂಡಿರು ವುದಕ್ಕೆ ಭಯ ಪಡುತ್ತಿಲ್ಲ,' ಎಂದು ಸೋನಿಯಾ ಪ್ರತಿಕ್ರಿಯಿಸಿದ್ದಾರೆ.

ಈ ಹೆಲಿಕಾಪ್ಟರ್‌ ಖರೀದಿ ಹಗರಣದ ಕುರಿತು ಲೋಕಸಭೆಯಲ್ಲಿ ಚರ್ಚೆ ನಡೆಸಲು ಹೊಸದಿಲ್ಲಿಯ ಸಂಸದೆ ಮೀನಾಕ್ಷಿ ಲೇಖಿ ನೋಟಿಸ್‌ ನೀಡಿದ್ದರೆ, ಅವರ ಸಹೋದ್ಯೋಗಿ ಭೂಪೇಂದ್ರ ಯಾದವ್‌ ರಾಜ್ಯಸಭೆಗೆ ನೋಟಿಸ್‌ ನೀಡಿದ್ದಾರೆ.

ಹಗರಣ ಸಂಬಂಧ ಇಟಲಿ ಕೋರ್ಟ್‌ ಆದೇಶದಲ್ಲಿ ಪ್ರಸ್ತಾಪವಾಗಿರುವ 'ಸಿಗ್ನೋರ' ಗಾಂಧಿ ವಿಷಯವನ್ನು ಬಿಜೆಪಿ ಸಭೆಯಲ್ಲಿ ಚರ್ಚಿಸಲಿದೆ.

ಆಗಸ್ಟಾ ವೆಸ್ಟ್‌ಲ್ಯಾಂಡ್‌ ಹಗರಣಕ್ಕೆ ಯುಪಿಎ ಸರಕಾರವೇ ಕಾರಣವೆಂದು ಇಟಲಿಯ ಕೋರ್ಟ್‌ ಹೇಳಿದ್ದು ಈ ವಿಷಯದಲ್ಲಿ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ, ಅಂದಿನ ಪ್ರಧಾನಿ ಡಾ. ಮನಮೋಹನ್‌ ಸಿಂಗ್‌, ಸೋನಿಯಾ ಅವರ ಆಪ್ತ ಕಾರ್ಯದರ್ಶಿ ಅಹ್ಮದ್‌ ಪಟೇಲ್‌, ಆಸ್ಕರ್‌ ಫರ್ನಾಂಡಿಸ್‌ ಅವರ ಹೆಸರುಗಳನ್ನು ಉಲ್ಲೇಖೀಸಲಾಗಿದೆ.

ರಾಜ್ಯ ಸಭೆಯಲ್ಲಿ ಕೋಲಾಹಲ

ಹಗರಣಕ್ಕೆ ಸಂಬಂಧಿಸಿದಂತೆ ಇಟಲಿ ಕೋರ್ಟ್ ನೀಡಿರುವ ತೀರ್ಪಿನಲ್ಲಿ ಸೋನಿಯಾ ಹೆಸರು ಇದೆ ಎಂದು ಬಿಜೆಪಿ ಮುಖಂಡ ಸುಬ್ರಹ್ಮಣ್ಯನ್ ಸ್ವಾಮಿ ಹೇಳಿದ್ದು, ರಾಜ್ಯ ಸಭೆಯಲ್ಲಿ ತೀವ್ರ ಕೋಲಾಹಲಕ್ಕೆ ಕಾರಣವಾಯಿತು. ಸ್ವಾಮಿ ವಿರುದ್ಧ ಕಾಂಗ್ರೆಸ್ ಸದಸ್ಯರು ಪ್ರತಿಭಟನೆ ನಡೆಸಿದ್ದು, ಕಲಾಪವನ್ನು ಮುಂದೂಡಲಾಯಿತು.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಬಿಗ್‌ ನ್ಯೂಸ್: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ -‌ ಈ ಬಾರಿಯೂ...


 ಕೌಟುಂಬಿಕ ಕಲಹ ಹಿನ್ನೆಲೆ; ಬುದ್ದಿವಾದ ಹೇಳಿದ ತಂಗಿಯನ್ನೇ ಕೊಂದ ಅಣ್ಣ…


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


‘ಒಡಕು ಮೂಡಿಸಿದ ಸಿದ್ಧರಾಮಯ್ಯ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>