Quantcast
Channel: VijayKarnataka
Viewing all articles
Browse latest Browse all 6795

ರಾಘವೇಶ್ವರ ಶ್ರೀ ದೋಷಮುಕ್ತ ಪ್ರಶ್ನಿಸಿ ಹೈಕೋರ್ಟ್‌ಗೆ ಸಂತ್ರಸ್ತೆ ಮೊರೆ

$
0
0

ಬೆಂಗಳೂರು: ಅತ್ಯಾಚಾರ ಆರೋಪ ಪ್ರಕರಣದಿಂದ ರಾಮಚಂದ್ರಾಪುರ ಮಠದ ರಾಘವೇಶ್ವರ ಶ್ರೀಗಳನ್ನು ದೋಷಮುಕ್ತಗೊಳಿಸಿದ ಸೆಷನ್ಸ್‌ ನ್ಯಾಯಾಲಯದ ಆದೇಶ ಪ್ರಶ್ನಿಸಿ ಸಂತ್ರಸ್ತ ಮಹಿಳೆ ಗಾಯಕಿ ಪ್ರೇಮಲತಾ ದಿವಾಕರಶಾಸ್ತ್ರಿ ಹೈಕೋರ್ಟ್‌ ಮೊರೆ ಹೋಗಿದ್ದಾರೆ.

ನ್ಯಾ. ಆನಂದ್‌ ಬೈರಾರೆಡ್ಡಿ ಅವರಿದ್ದ ರಜಾ ಕಾಲದ ನ್ಯಾಯಪೀಠದ ಮುಂದೆ ಅರ್ಜಿಯು ಮಂಗಳವಾರ ವಿಚಾರಣೆಗೆ ಬಂದಿತು. ಆಗ ನ್ಯಾಯಮೂರ್ತಿಗಳು, ಅರ್ಜಿಯನ್ನು ಈಗಾಗಲೇ ಸಿಐಡಿ ಪೊಲೀಸರು ಸಲ್ಲಿಸಿರುವ ಅರ್ಜಿ ಜೊತೆ ಸೇರಿಸಲು ಆದೇಶ ನೀಡಿ ವಿಚಾರಣೆ ಮುಂದೂಡಿದರು.

''ಸೆಷನ್ಸ್‌ ಕೋರ್ಟ್‌ ಮಾ.31ರಂದು ನೀಡಿರುವ ತೀರ್ಪು ರದ್ದುಪಡಿಸಬೇಕು. ಸಾಕ್ಷ್ಯ ವಿಚಾರಣೆಗೂ ಮುನ್ನವೇ ಸ್ವಾಮೀಜಿಗೆ ಕ್ಲೀನ್‌ಚಿಟ್‌ ನೀಡಿರುವುದು ಸರಿಯಲ್ಲ. ನ್ಯಾಯಾಲಯ ಐಪಿಸಿ ಸೆಕ್ಷನ್‌ 506ಅಡಿ ದೋಷಮುಕ್ತಗೊಳಿಸಿ ತಪ್ಪೆಸಗಿದೆ. ಸಂತ್ರಸ್ತ ಮಹಿಳೆ ಅಪರಾಧ ದಂಡ ಸಂಹಿತೆ ಸೆಕ್ಷನ್‌ 164 ಅಡಿ ಹೇಳಿಕೆ ನೀಡಿದ್ದಾರೆ. ಆ ಹೇಳಿಕೆ ಸಾಬೀತಿಗೆ ಮುನ್ನವೇ ದೋಷಮುಕ್ತಗೊಳಿಸಿರುವುದು ಸರಿಯಾದ ಕ್ರಮವಲ್ಲ,'' ಎಂದು ಅರ್ಜಿಯಲ್ಲಿ ಹೇಳಲಾಗಿದೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>