Quantcast
Channel: VijayKarnataka
Viewing all articles
Browse latest Browse all 6795

‘ಗೊರುಚ’ಗೆ ಬಸವ ಪುರಸ್ಕಾರ

$
0
0

ಬೆಂಗಳೂರು: ಕನ್ನಡದ ಹಿರಿಯ ಬರಹಗಾರ ಹಾಗೂ ಚಿಂತಕ ಗೊ.ರು. ಚನ್ನಬಸಪ್ಪ ಅವರನ್ನು ಪ್ರತಿಷ್ಠಿತ 'ರಾಷ್ಟ್ರೀಯ ಬಸವ ಪುರಸ್ಕಾರ' ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.

ಕನ್ನಡ ಸಾಹಿತ್ಯ ಪರಿಷತ್ತಿನ ಮಾಜಿ ಅಧ್ಯಕ್ಷರೂ ಆಗಿರುವ ಗೊರುಚ ಅವರು ಶರಣ ಸಾಹಿತ್ಯ ಹಾಗೂ ಸಂಸ್ಕೃತಿಯನ್ನು ವಿಶ್ವಾದ್ಯಂತ ಪ್ರಚುರ ಪಡಿಸುವಲ್ಲಿ ತಮ್ಮನ್ನು ತೊಡಗಿಸಿಕೊಂಡಿರುವುದನ್ನು ಪರಿಗಣಿಸಿ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ ಎಂದು ಸಚಿವೆ ಉಮಾಶ್ರೀ ತಿಳಿಸಿದ್ದಾರೆ.

ಪ್ರತಸ್ತಿಯು ಹತ್ತು ಲಕ್ಷ ರೂ. ನಗದು, ಬಸವ ಪುತ್ಥಳಿ, ಸ್ಮರಣ ಫಲಕ ಒಳಗೊಂಡಿದ್ದು, ಈ ತಿಂಗಳ 9ರಂದು ಮೈಸೂರಿನಲ್ಲಿ ನಡೆಯಲಿರುವ ಸಮಾರಂಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ ಎಂದು ಅವರು ತಿಳಿಸಿದರು.


Viewing all articles
Browse latest Browse all 6795

Trending Articles



<script src="https://jsc.adskeeper.com/r/s/rssing.com.1596347.js" async> </script>