Quantcast
Channel: VijayKarnataka
Viewing all articles
Browse latest Browse all 6795

ಶಾಸಕರಿಗೆ 50 ಲಕ್ಷಕ್ಕೆ ಮಾರಿದ್ದಳು ಮಲತಾಯಿ: ರೇಪ್ ಸಂತ್ರಸ್ತೆ ಬಾಲಕಿ

$
0
0

ಪಣಜಿ: ಮಲತಾಯಿಯೇ ತನ್ನನ್ನು ಗೋವಾ ಶಾಸಕರಿಗೆ 50 ಲಕ್ಷ ರೂಪಾಯಿಗೆ ಮಾರಿದ್ದಳು ಎಂದು ಶಾಸಕ ಅಟನಾಸಿಯೋ ಮಾನ್ಸೆರಾಟ್ಟೆಯಿಂದ ಅತ್ಯಾಚಾರಕ್ಕೀಡಾಗಿದ್ದಾಳೆ ಎನ್ನಲಾಗುತ್ತಿರುವ ಅಪ್ರಾಪ್ತ ಬಾಲಕಿ ಆರೋಪಿಸಿರುವುದು ಹೊಸ ತಲ್ಲಣಕ್ಕೆ ಕಾರಣವಾಗಿದೆ.

ನ್ಯಾಯಾಲಯ ಸಮನ್ಸ್ ಕಳುಹಿಸಿದ ಬಳಿಕ ಆರೋಪಿ ಶಾಸತ ಮಾನ್ಸೆರಾಟೆ ಗುರುವಾರ ನ್ಯಾಯಾಲಯಕ್ಕೆ ಶರಣಾಗಿದ್ದಾರೆ.

'ಬಾಬುಷ್ ಎಂಬಾತನಿಂದ ನನ್ನ ತಾಯಿ 50 ಲಕ್ಷ ರೂ. ಪಡೆದು ನನ್ನನ್ನು ಶಾಸಕರಿಗೆ ಮಾರಿದ್ದಾಳೆಂಬುದು ನನಗೆ ತಿಳಿದುಬಂದಿದೆ' ಎಂದು 16ರ ಹರೆಯದ ಸಂತ್ರಸ್ತೆ ಹುಡುಗಿ ಗುರುವಾರ ಪೊಲೀಸರೆದುರು ಹೇಳಿಕೆ ನೀಡಿದ್ದಾಳೆ.

ಮಾನ್ಸೆರಾಟೆ ಹಲವು ಬಾರಿ ತನ್ನ ಮೇಲೆ ಅತ್ಯಾಚಾರವೆಸಗಿದ್ದರು ಎಂದು ಬಾಲಕಿಯು ಹೇಳಿಕೆಯಲ್ಲಿ ತಿಳಿಸಿದ್ದಾಳೆ. 'ಗೋವಾ ಸರಕಾರಿ ವೈದ್ಯಕೀಯ ಆಸ್ಪತ್ರೆಯಲ್ಲಿ ಆಕೆಯ ವೈದ್ಯಕೀಯ ಪರೀಕ್ಷೆ ನಡೆಸಲಾಗಿದ್ದು, ಅದರಲ್ಲಿ ಅತ್ಯಾಚಾರವಾಗಿರುವುದು ದೃಢಪಟ್ಟಿದೆ' ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪೋಸ್ಕೋ ಕಾಯಿದೆಯಡಿ ಶಾಸಕನ ಮೇಲೆ ಕೇಸು ದಾಖಲಿಸಿಕೊಂಡಿರುವ ಪೊಲೀಸರು, ಆತ ಹಾಗೂ ಬಾಲಕಿಯ ಮಲತಾಯಿಯ ಮೇಲೆ ಮಾನವ ಕಳ್ಳಸಾಗಣೆ ಕೇಸನ್ನೂ ದಾಖಲಿಸಿಕೊಂಡಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜಕಾರಣಿಯ ನಿವಾಸ ಸೇರಿದಂತೆ ಹಲವು ಕಡೆಗಳಲ್ಲಿ ಪೊಲೀಸರು ಶೋಧ ನಡೆಸಿದ್ದಾರೆ.

ಈ ಮಧ್ಯೆ ಶಾಸಕ ತನ್ನ ಪತ್ನಿ ಹಾಗೂ ಬೆಂಬಲಿಗರೊಂದಿಗೆ ಪಣಜಿಯ ಕ್ರೈಂ ಬ್ರಾಂಚ್ ಕಚೇರಿಗೆ ಆಗಮಿಸಿ ಶರಣಾಗಿದ್ದಾರೆ. 'ನಾನೇನೂ ತಪ್ಪು ಮಾಡಿಲ್ಲ. ದೂರು ಸುಳ್ಳು ಮತ್ತು ಬೋಗಸ್. ಇದು ನನ್ನನ್ನು ಸಿಲುಕಿಸಲು ಷಡ್ಯಂತ್ರ, ಬೇರೇನೂ ಇಲ್ಲ' ಎಂದು ಮಾನ್ಸೆರಾಟೆ ಹೇಳಿದ್ದಾರೆ. ಅಲ್ಲದೆ, ಅತ್ಯಾಚಾರಕ್ಕೆ ಮುನ್ನ ಬಾಲಕಿಗೆ ನೀಡಿದ ಪಾನೀಯದಲ್ಲಿ ಮತ್ತು ಬರಿಸುವ ಔಷಧಿ ಹಾಕಿರುವ ಆರೋಪವನ್ನೂ ಆತ ತಳ್ಳಿ ಹಾಕಿದ್ದಾರೆ.

ಸೈಂಟ್ ಕ್ರೂಸ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿರುವ ಈ ಶಾಸಕನನ್ನು ಕಳೆದ ವರ್ಷವೇ ಕಾಂಗ್ರೆಸ್‌ನಿಂದ ಉಚ್ಚಾಟಿಸಲಾಗಿತ್ತು. ಮಾರ್ಚ್ ತಿಂಗಳಲ್ಲಿ 16ರ ಹರೆಯದ ಹುಡುಗಿಯ ಮೇಲೆ ಅತ್ಯಾಚಾರ ನಡೆಸಿದ ಕುರಿತು ಮಾಜಿ ಶಿಕ್ಷಣ ಸಚಿವ ಮಾನ್ಸೆರಾಟೆ ಮೇಲೆ ಕೇಸು ದಾಖಲಿಸಲಾಗಿತ್ತು. ಆತನ ಪತ್ನಿಯೂ ಶಾಸಕಿಯಾಗಿದ್ದು, ಈ ಕುರಿತು ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ.

ರಾಜ್ಯ ಕಾಂಗ್ರೆಸ್ ಕೂಡ ಪ್ರಕರಣದ ಕುರಿತು ಹೇಳಿಕೆ ನೀಡಲು ನಿರಾಕರಿಸಿದೆ, ಆದರೆ, ಚಾರಿತ್ರ್ಯವಧೆ ಮಾಡುವುದು ಸರಿಯಲ್ಲ ಎಂದು ಹೇಳಿದೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಶಿವಸೇನೆ ಬಿಗಿಪಟ್ಟು: ದೇಶ ಗೆದ್ದ ಬಿಜೆಪಿ ವಿಲವಿಲ


ಶುಭ ಫಲಕ್ಕಾಗಿ ಮನೆಯಲ್ಲಿ ಗಾಳಿ ಗಂಟೆ ಹಾಕುವ ಮುನ್ನ ಈ ವಿಚಾರ ತಿಳಿಯಿರಿ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>