Quantcast
Channel: VijayKarnataka
Viewing all articles
Browse latest Browse all 6795

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ : ಆರೋಪಿ ಬಂಧನ

$
0
0

ಬೆಂಗಳೂರು: ವಿವಾಹವಾಗುವುದಾಗಿ ನಂಬಿಸಿದ ವ್ಯಕ್ತಿಯೊಬ್ಬ ಬಾಲಕಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಬಸವೇಶ್ವರ ನಗರದಲ್ಲಿ ನಡೆದಿದ್ದು, ಪ್ರಕರಣ ತಡವಾಗಿ ಬೆಳಕಿಗೆ ಬಂದಿದೆ.

ಈ ಸಂಬಂಧ ದಾಸರಹಳ್ಳಿ ನಿವಾಸಿ ಜಯಸೂರ್ಯ(38) ಎಂಬಾತನನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಯು 16 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದು, ಬಾಲಕಿ 7 ತಿಂಗಳ ಗರ್ಭಿಣಿಯಾಗಿದ್ದಾಳೆ. ಸದ್ಯ ಆಕೆಯನ್ನು ಬಾಲಮಂದಿರಕ್ಕೆ ಕಳುಹಿಸಲಾಗಿದೆ.

ಪಾನಿಪೂರಿ ತಿನ್ನುವಾಗ ಪರಿಚಯ

ಆರೋಪಿ ವಿವಾಹಿತನಾಗಿದ್ದು, ಪತ್ನಿ ಹಾಗೂ ಮಕ್ಕಳ ಜತೆ ದಾಸರಹಳ್ಳಿಯಲ್ಲಿ ವಾಸಿಸುತ್ತಿದ್ದಾನೆ. ಕಾಮಾಕ್ಷಿಪಾಳ್ಯ ಸಮೀಪ ತಳ್ಳುವ ಗಾಡಿಯಲ್ಲಿ ಪಾನಿಪೂರಿ ಮಾರಾಟ ಮಾಡುವ ಕೆಲಸ ಮಾಡುತ್ತಿದ್ದ. ನೊಂದ ಬಾಲಕಿಯ ಪೋಷಕರು ಮೂರು ವರ್ಷದ ಹಿಂದೆ ಮೃತಪಟ್ಟಿದ್ದು, ಆಕೆ ಮಂಜುನಾಥ ನಗರದ ಅಜ್ಜಿ ಮನೆಯಲ್ಲಿ ವಾಸಿಸುತ್ತಿದ್ದಳು.

ವರ್ತನೆ ಹಾಗೂ ನಡತೆ ಸರಿ ಇಲ್ಲ ಎಂಬ ಕಾರಣಕ್ಕೆ ಅಜ್ಜಿ ಮೊಮ್ಮಗಳನ್ನು ಮನೆಯಿಂದ ಹೊರ ಹಾಕಿದ್ದರು. ಬಳಿಕ ಆಕೆ ಉದ್ಯಾನವನಗಳಲ್ಲಿ, ಹೋಟೆಲ್‌ಗಳಲ್ಲಿ, ಅಲ್ಲಲ್ಲಿ ಮನೆಕೆಲಸ ಮಾಡುತ್ತ ಬಸ್ ನಿಲ್ದಾಣ, ಸಾರ್ವಜನಿಕ ಸ್ಥಳದಲ್ಲಿ ಮಲಗಿ ಜೀವನ ಸಾಗಿಸುತ್ತಿದ್ದಳು. ಕೆಲವೊಮ್ಮೆ ಅಜ್ಜಿ ಮನೆಗೆ ಹೋಗುತ್ತಿದ್ದಳು.

ಈ ವೇಳೆ ಆರೋಪಿ ಜಯಸೂರ್ಯನ ಬಳಿ ಪಾನಿಪೂರಿ ತಿನ್ನಲು ಬಾಲಕಿ ಹಲವು ಬಾರಿ ಹೋಗಿದ್ದು, ಈ ವೇಳೆ ಆತನ ಪರಿಚಯವಾಗಿತ್ತು. ನಂತರ ಮೊಬೈಲ್‌ನಲ್ಲಿ ಮಾತುಕತೆ ಆರಂಭವಾಗಿತ್ತಲ್ಲದೆ, ಬಳಿಕ ಅದು ಪ್ರೇಮಕ್ಕೆ ತಿರುಗಿತು. ಕಳೆದ ಒಂದು ವರ್ಷದಿಂದ ಅವರಿಬ್ಬರ ನಡುವೆ ಸಂಪರ್ಕ ಇದ್ದು, ಬಾಲಕಿ ಗರ್ಭ ಧರಿಸಿದ್ದಳು. ಆದರೆ, ಇದನ್ನು ಆಕೆ ಯಾರಿಗೂ ತಿಳಿಸಿರಲಿಲ್ಲ. ಬಾಲಕಿ ಕೆಲಸ ಮಾಡುವ ಮನೆಯವರು ಆಕೆಯನ್ನು ಕಂಡು ಅನುಮಾನಗೊಂಡು ವಿಚಾರಿಸಿದಾಗ ಪ್ರಕರಣ ಬೆಳಕಿಗೆ ಬಂದ ನಂತರ ಅವರು ಬಾಲಕಿ ಅಜ್ಜಿಗೆ ವಿಷಯ ತಿಳಿಸಿದರು.

ಬಳಿಕ ಅಜ್ಜಿ ಆತನನ್ನು ಸಂಪರ್ಕಿಸಿ ಮೊಮ್ಮಗಳನ್ನು ವಿವಾಹವಾಗುವಂತೆ ಕೇಳಿದಾಗ ಆತ ನಿರಾಕರಿಸಿದ್ದ. ಇದರಿಂದ ಬಾಲಕಿ ಬಸವೇಶ್ವರ ನಗರ ಠಾಣೆಯಲ್ಲಿ ದೂರು ದಾಖಲಿಸಿದ್ದಳು. ದೂರು ದಾಖಲಿಸಿಕೊಂಡ ಪೊಲೀಸರು ತಲೆಮರೆಸಿಕೊಂಡಿದ್ದ ಆರೋಪಿಯನ್ನು ಬಂಧಿಸಿದ್ದಾರೆ. ಆರೋಪಿ ಹಾಗೂ ಬಾಲಕಿಯನ್ನು ವೈದ್ಯಕೀಯ ತಪಾಸಣೆಗೊಳಪಡಿಸಿ ಮುಂದಿನ ಕ್ರಮಕೈಗೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>