Quantcast
Channel: VijayKarnataka
Viewing all articles
Browse latest Browse all 6795

ವೋಟಿಗಾಗಿ ನೋಟಿಗೆ ಸಿಎಂ ಪರೋಕ್ಷ ಹೊಣೆ: ಬಿಎಸ್‌ವೈ

$
0
0

ಕಲಬುರಗಿ: ಶಾಸಕರು ಮತಕ್ಕೆ ಹಣದ ಬೇಡಿಕೆ ಇಟ್ಟ ಪ್ರಕರಣಕ್ಕೂ ಬಿಜೆಪಿಗೂ ಯಾವುದೇ ಸಂಬಂಧ ಇಲ್ಲ, ಇಂತಹ ದುರ್ಬುದ್ಧಿ ಪಕ್ಷಕ್ಕೆ ಬಂದಿಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೇಳಿದ್ದಾರೆ.

ಶುಕ್ರವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚುನಾವಣಾ ಆಯೋಗ ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಬೇಕು. ರಾಜ್ಯಸಭೆಗೆ ಕಾಂಗ್ರೆಸ್‌ ಅಭ್ಯರ್ಥಿ ಪರ ಮತ ಚಲಾಯಿಸಿದರೆ 100 ಕೋಟಿ ರೂ. ಅಭಿವೃದ್ಧಿ ಅನುದಾನ ನೀಡುವುದಾಗಿ ಸಿಎಂ ಸಿದ್ದರಾಮಯ್ಯ ಹೇಳಿರುವುದರ ಮುಂದುವರಿದ ಭಾಗವೇ ಈ ಡೀಲ್‌ ಎಂದು ಹೇಳಿದರು.

''ಅನುದಾನ ನೀಡುವ ಮತ್ತು ಶಾಸಕರಿಗೆ ಬೇಕಾದ ಅಧಿಕಾರಿಗಳನ್ನು ಕ್ಷೇತ್ರಕ್ಕೆ ವರ್ಗಾವಣೆ ಮಾಡುವುದಾಗಿ ಸರಕಾರ ಆಮಿಷವೊಡ್ಡಿದೆ. ಈ ಡೀಲ್‌ ಪ್ರಕರಣಕ್ಕೆ ಸಿಎಂ ಸಿದ್ದರಾಮಯ್ಯ ಪರೋಕ್ಷವಾಗಿ ಹೊಣೆಯಾಗಿದ್ದಾರೆ. ಪ್ರಕರಣದ ಬಗ್ಗೆ ಮುಂದೇನು ಮಾಡಬೇಕು ಎಂಬ ಬಗ್ಗೆ ಪಕ್ಷದ ಪ್ರಮುಖರ ಸಭೆ ಕರೆದು ಚರ್ಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

''ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳ ಪರವಾಗಿ ಮತ ನೀಡುವಂತೆ ಪಕ್ಷೇತರ ಶಾಸಕರಿಗೆ ಕೋರಲಾಗಿದ್ದು, ಅವರು ಸಹಕಾರ ಕೊಡುವ ವಿಶ್ವಾಸವಿದೆ. ರಾಜ್ಯಸಭೆ ಚುನಾವಣೆಯಲ್ಲಿ ನಮ್ಮ ಪಕ್ಷದ ಹೆಚ್ಚುವರಿ ಮತಗಳನ್ನು ಯಾರಿಗೆ ಹಾಕಬೇಕು ಎನ್ನುವುದರ ಬಗ್ಗೆ ಇನ್ನೂ ನಿರ್ಧಾರ ಕೈಗೊಂಡಿಲ್ಲ ಎಂದು ವಿವರಿಸಿದರು.

-----

ರಾಜ್ಯಸಭೆ ಚುನಾವಣೆಯಲ್ಲಿ ಮತ ಹಾಕಲು ಕೆಲ ಶಾಸಕರು ಹಣಕ್ಕೆ ಬೇಡಿಕೆ ಇಟ್ಟಿರುವ ಪ್ರಕರಣ ಕುರಿತಂತೆ ಚುನಾವಣೆ ಆಯೋಗ ಸೂಕ್ತ ಕ್ರಮ ಕೈಗೊಳ್ಳಬೇಕು. ಬಿಜೆಪಿಗೆ ಸಮೀಪ ಇದ್ದವರೇ ಮತ ಹಾಕಲು ಹಣದ ಬೇಡಿಕೆ ಇಟ್ಟಿದ್ದಾರೆ. ರಾಜ್ಯದ ಇತಿಹಾಸದಲ್ಲಿ ಆಪರೇಷನ್‌ ಕಮಲದ ಮೂಲಕ ಹಣದ ಪ್ರಭಾವ ಬೀರಿ ರಾಜಕೀಯ ವ್ಯವಸ್ಥೆ ಹಾಳು ಮಾಡಿದ್ದೇ ಬಿಜೆಪಿ.

- ಎಚ್‌.ಕೆ. ಪಾಟೀಲ್‌, ಸಚಿವ

-------

ರಾಜ್ಯಸಭೆ ಚುನಾವಣೆಯಲ್ಲಿ ಕಾಣಿಸಿಕೊಂಡ ಮತಕ್ಕಾಗಿ ಲಂಚ ಪ್ರಕರಣದಿಂದಾಗಿ ಇಡೀ ರಾಜ್ಯವೇ ತಲೆ ತಗ್ಗಿಸುವಂತಾಗಿದೆ. ಶಾಸಕರಿಗೆ ಇದ್ದ ಕೊಂಚ ಗೌರವ ಕೂಡ ಇಂತಹ ವಿಚಾರಗಳಿಂದ ಕಡಿಮೆಯಾಗಿದೆ. ದೃಶ್ಯ ಮಾಧ್ಯಮಗಳು ಈ ವಿಚಾರವನ್ನು ಬಹಿರಂಗಪಡಿಸುವ ಮೂಲಕ ತಮ್ಮ ಕರ್ತವ್ಯವನ್ನು ನಿಭಾಯಿಸಿವೆ.

- ಜನಾರ್ದನ ಪೂಜಾರಿ, ಕೇಂದ್ರದ ಮಾಜಿ ಸಚಿವ


Viewing all articles
Browse latest Browse all 6795

Trending Articles



<script src="https://jsc.adskeeper.com/r/s/rssing.com.1596347.js" async> </script>