Quantcast
Channel: VijayKarnataka
Viewing all articles
Browse latest Browse all 6795

ಕುಟುಕು ಕಾರ್ಯಾಚರಣೆ : ಬಿ.ಆರ್‌.ಪಾಟೀಲ್‌ ಧರಣಿ

$
0
0

ಬೆಂಗಳೂರು: ರಾಜ್ಯಸಭೆ ಚುನಾವಣೆ ಹಿನ್ನೆಲೆಯಲ್ಲಿ ಖಾಸಗಿ ಸುದ್ದಿವಾಹಿನಿಗಳು ನಡೆಸಿದ ಕುಟುಕು ಕಾರ್ಯಾಚರಣೆಯನ್ನೇ ತನಿಖೆಗೊಳಪಡಿಸಬೇಕೆಂದು ಆಗ್ರಹಿಸಿ ಆಳಂದ ಶಾಸಕ ಬಿ.ಆರ್‌.ಪಾಟೀಲ್‌ ವಿಧಾನಸೌಧದ ಆವರಣದ ಕೆಂಗಲ್‌ ಹನುಮಂತಯ್ಯ ಪ್ರತಿಮೆ ಮುಂದೆ ಕಪ್ಪುಪಟ್ಟಿ ಧರಿಸಿ ಶುಕ್ರವಾರ ಪ್ರತಿಭಟನೆ ನಡೆಸಿದರು.

ಖಾಸಗಿ ಸುದ್ದಿವಾಹಿನಿಗಳ ಕುಟುಕು ಕಾರ್ಯಾಚರಣೆಯಲ್ಲಿ ಸೆರೆ ಸಿಕ್ಕಿದ್ದ ಬಿ.ಆರ್‌.ಪಾಟೀಲ್‌ ಅವರು ರಾಜ್ಯಸಭಾ ಚುನಾವಣೆಯ ವೈಖರಿ ಕುರಿತು ಮಾತನಾಡಿದ್ದರು. ಶುಕ್ರವಾರ ರಾತ್ರಿ ಸುದ್ದಿವಾಹಿನಿಗಳಲ್ಲಿ ಈ ಕುರಿತ ವಿಡಿಯೋ ತುಣುಕುಗಳು ಪ್ರಸಾರವಾಗಿದ್ದವು.

ಈ ಹಿನ್ನೆಲೆಯಲ್ಲಿ ಬೆಳಿಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾದ ಬಿ.ಆರ್‌.ಪಾಟೀಲ್‌, ಪ್ರಕರಣದ ವಿವರಣೆ ನೀಡಿದರಲ್ಲದೆ, ಈ ಬಗ್ಗೆ ತನಿಖೆ ನಡೆಸಬೇಕೆಂದು ಕೋರಿದರು. ಅಲ್ಲಿಂದ ನೇರವಾಗಿ ವಿಧಾನಸೌಧಕ್ಕೆ ತೆರಳಿ ಕೆಂಗಲ್‌ ಹನುಮಂತಯ್ಯ ಪ್ರತಿಮೆ ಬಳಿ ಮಧ್ಯಾಹ್ಹ 3.30 ರ ತನಕ ಧರಣಿ ನಡೆಸಿದರು.

ಈ ಸಂದರ್ಭ ಸುದ್ದಿಗಾರರ ಜತೆ ಮಾತನಾಡಿದ ಪಾಟೀಲ್‌, ಗುರುವಾರ ಪ್ರಸಾರವಾದ ವಿಡಿಯೋ ತುಣುಕುಗಳ ಬಗ್ಗೆ ತನಿಖೆ ನಡೆಸಲು ಸರಕಾರದ ಮೇಲೆ ಒತ್ತಡ ತರುವ ಉದ್ದೇಶದಿಂದ ಧರಣಿ ನಡೆಸಿದ್ದಾಗಿ ಹೇಳಿದರು. ಧರಣಿಯಲ್ಲಿ ಕಾಂಗ್ರೆಸ್‌ ಮುಖಂಡ ಎಂ.ಟಿ.ಸುಭಾಷ್‌ಶ್ಚಂದ್ರ ಭಾಗವಹಿಸಿದ್ದರು.


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


Namaskāra नमस्कार (salutation)


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>