Quantcast
Channel: VijayKarnataka
Viewing all articles
Browse latest Browse all 6795

ಕಾರು ಬದಲಾವಣೆಗೂ, ಕಾಗೆಗೂ ಸಂಬಂಧವಿಲ್ಲ: ಸಿಎಂ ಸಮರ್ಥನೆ

$
0
0

ಬೆಂಗಳೂರು: ಕಾಗೆ ಕುಳಿತುಕೊಂಡಿದ್ದ ಕಾರಣಕ್ಕೆ ಕಾರು ಬದಲಾವಣೆ ಮಾಡಿಲ್ಲ. ತಾಂತ್ರಿಕ ಸಮಸ್ಯೆ ಮತ್ತು 2 ಲಕ್ಷ ಕಿ.ಮೀ ಗಿಂತ ಹೆಚ್ಚು ಸಂಚರಿಸಿದ್ದರಿಂದ ಕಾರು ಬದಲಾಯಿಸಬೇಕಾಯಿತು ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.

ಗೃಹ ಕಚೇರಿ ಕೃಷ್ಣಾದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ''ಕಾರು ಬದಲಿಸುವ ವಿಚಾರವು ಎರಡು ತಿಂಗಳಿನಿಂದಲೂ ನಡೆಯುತ್ತಿದೆ. ಈಗ ಕಾರು ಮತ್ತು ಕಾಗೆಗೆ ಸಂಪರ್ಕ ಕಲ್ಪಿಸಲಾಗುತ್ತಿದೆ. ಇದರಲ್ಲಿ ಯಾವುದೇ ಹುರುಳಿಲ್ಲ,'' ಎಂದರು.

''ನನಗೆ ಮೂಢ ನಂಬಿಕೆಗಳಲ್ಲಿ ನಂಬಿಕೆ ಇಲ್ಲ. ಒಂದು ವೇಳೆ ಇದ್ದಿದ್ದರೆ, ಆರು ಬಾರಿ ಚಾಮರಾಜನಗರಕ್ಕೆ ಹೋಗುತ್ತಿರಲಿಲ್ಲ. ರಾಹುಕಾಲದಲ್ಲಿ ಬಜೆಟ್ ಮಂಡನೆ ಮಾಡುತ್ತಿರಲಿಲ್ಲ. ಅಷ್ಟೇ ಅಲ್ಲ, ಅಮಾವಾಸ್ಯೆ ದಿನವಾದ ಜು. 4ರಿಂದ ವಿಧಾನಮಂಡಲ ಅಧಿವೇಶನಕ್ಕೆ ದಿನಾಂಕ ಗೊತ್ತುಪಡಿಸುತ್ತಿರಲಿಲ್ಲ,'' ಎಂದು ಹೇಳಿದರು.

ಸರಕಾರ ಇನ್ನಾದರೂ ಜನರ ಬಳಿಗೆ ಹೋಗಲಿ ಎಂಬ ವಿಧಾನಸಭೆ ಅಧ್ಯಕ್ಷ ಕಾಗೋಡು ತಿಮ್ಮಪ್ಪ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಸಿಎಂ, ''ಬರಗಾಲಕ್ಕೆ ತುತ್ತಾಗಿರುವ 16 ಜಿಲ್ಲೆಗಳಿಗೆ ಭೇಟಿ ನೀಡಿ ಅಹವಾಲು ಆಲಿಸಿದ್ದೇನೆ. ಯಾವ ಸಿಎಂ ಕೂಡ ಬರಗಾಲದ ಸಂದರ್ಭದಲ್ಲಿ ಇಷ್ಟು ಜಿಲ್ಲೆಗಳಿಗೆ ಭೇಟಿ ನೀಡಿರಲಿಲ್ಲ. ನಮ್ಮ ಸರಕಾರವು ಬರ ಪರಿಸ್ಥಿತಿಯನ್ನು ಸಮರ್ಪಕವಾಗಿ ನಿಭಾಯಿಸುತ್ತಿದೆ,'' ಎಂದು ತಿಳಿಸಿದರು.

ನ್ಯಾಯಾಲಯದಿಂದ ಕಾವೇರಿ ವಿವಾದ ಇತ್ಯರ್ಥ:

ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ತಮಿಳುನಾಡು ಮುಖ್ಯಮಂತ್ರಿ ಜಯಲಲಿತಾ ಅವರು ಪ್ರಧಾನಿ ಬಳಿಗೆ ನಿಯೋಗ ಕೊಂಡೊಯ್ದಿರುವ ಬಗ್ಗೆ ಕೇಳಿದ ಪ್ರಶ್ನೆಗೆ, ''ಕಾವೇರಿ ವಿವಾದವು ಸುಪ್ರೀಂಕೋರ್ಟ್ ಮತ್ತು ನ್ಯಾಯಮಂಡಳಿ ಮುಂದಿದೆ. ನ್ಯಾಯ ಮಂಡಳಿ ಆದೇಶ ಪ್ರಶ್ನಿಸಿ, ಮೇಲ್ಮನವಿ ಸಲ್ಲಿಸಲಾಗಿದೆ. ನ್ಯಾಯಾಲಯವೇ ಪ್ರಕರಣವನ್ನು ಇತ್ಯರ್ಥಪಡಿಸಲಿದೆ,'' ಎಂದರು.

ಆಯ್ಕೆ ವಿಳಂಬದಿಂದ ಸೋಲು:

''ವಿಧಾನ ಪರಿಷತ್ತಿನ ಶಿಕ್ಷಕರು ಮತ್ತು ಪದವೀಧರರ ಕ್ಷೇತ್ರಗಳಿಗೆ ನಡೆದ ಚುನಾವಣೆಯಲ್ಲಿ ಪಕ್ಷಕ್ಕೆ ಸೋಲಾಗಿರುವುದು ನಿಜ. ಅಭ್ಯರ್ಥಿಗಳನ್ನು ಆಯ್ಕೆ ಮಾಡುವಲ್ಲಿ ವಿಳಂಬ ಮಾಡಿದ್ದರಿಂದ ಸೂಕ್ತ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗಲಿಲ್ಲ. ಚುನಾವಣೆ ಘೋಷಣೆ ಬಳಿಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆವು. ಹೀಗಾಗಿ ಸೋಲು ಅನುಭವಿಸಬೇಕಾಯಿತು. ಇದರಲ್ಲಿ ನಮ್ಮ ತಪ್ಪಿದೆ ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಮಲಗಿದ್ದ ಮಹಿಳೆ ಬೆದರಿಸಿ ಬೆತ್ತಲೆ ಫೋಟೋ ತೆಗೆದ ಕಳ್ಳ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


‘ವ್ಯಾಪಾರ’ದಲ್ಲಿ ವೃದ್ಧಿಯಾಗಲು ಹೀಗೆ ಮಾಡಿ….


ಅಪ್ಪ ಅಮ್ಮ ಬೈಯ್ತಾರೆ ಅಂತ ಬೆಂಗಳೂರಿಂದ ಚಳ್ಳಕೆರೆಗೆ ಹೋದ ಮಕ್ಕಳು


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


Namaskāra नमस्कार (salutation)


ತುಳು ತೆರೆಗೆ ಸೋನಿಯಾ ಎಂಟ್ರಿ



<script src="https://jsc.adskeeper.com/r/s/rssing.com.1596347.js" async> </script>