Quantcast
Channel: VijayKarnataka
Viewing all articles
Browse latest Browse all 6795

ಮಗಳ ಸಾವಿನಿಂದ ಖಿನ್ನತೆ: ತಂದೆ ಆತ್ಮಹತ್ಯೆ

$
0
0

ಬೆಂಗಳೂರು: ಮಗಳ ಸಾವಿನ ನೋವಿನಿಂದ ಖಿನ್ನತೆಗೆ ಜಾರಿದ್ದ ತಂದೆ, ಮನೆಯಲ್ಲಿ ಯಾರೂ ಇಲ್ಲದ ವೇಳೆಯಲ್ಲಿ ನೇಣಿಗೆ ಶರಣಾಗಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪರಪ್ಪನ ಅಗ್ರಹಾರದಲ್ಲಿ ನಡೆದಿದೆ.

ಪರಪ್ಪನ ಅಗ್ರಹಾರ ಸಮೀಪದ ರಾಯಸಂದ್ರ ನಿವಾಸಿ ಡ್ಯಾನಿಯಲ್‌ ಎಡ್ವಿನ್‌ (44) ಮೃತರು. ಕೆಲವು ದಿನಗಳ ಹಿಂದೆ ಎಡ್ವಿನ್‌ ಅವರ ಮಗಳು ವಿದ್ಯುತ್‌ ಪ್ರವಹಿಸಿ ಸಂಭವಿಸಿದ ಅನಾಹುತದಲ್ಲಿ ಸಾವಿಗೀಡಾಗಿದ್ದಳು. ಇದೇ ದುಃಖದಿಂದ ಖಿನ್ನರಾಗಿದ್ದ ಅವರು ನೇಣು ಹಾಕಿಕೊಂಡು ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದರು.

ಮಗಳ ಸಾವಿನ ನೋವಿನಲ್ಲಿದ್ದ ಡ್ಯಾನಿಯಲ್‌ ಪತ್ನಿ ಗೀತಾ ತವರಿಗೆ ಹೋಗಿದ್ದರು. ಆ ಸಮಯದಲ್ಲಿ ಅವರು ಆತ್ಮಹತ್ಯೆಗೆ ಶರಣಾಗಿದ್ದಾರೆ . ಮಂಗಳವಾರ ಸಂಜೆ ಪತ್ನಿ ಗೀತಾ ಮನೆಗೆ ಮರಳಿದಾಗ ಪ್ರಕರಣ ಬೆಳಕಿಗೆ ಬಂದಿದೆ ಎಂದು ಪೊಲೀಸರು ತಿಳಿಸಿದ್ದಾರೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>