Quantcast
Channel: VijayKarnataka
Viewing all articles
Browse latest Browse all 6795

ಯುವತಿಯ ಹಿಂಬಾಲಿಸಿ ಚಿನ್ನಾಭರಣ ದರೋಡೆ

$
0
0

ಬೆಂಗಳೂರು: ರಾತ್ರಿ ಕೆಲಸ ಮುಗಿಸಿಕೊಂಡು ಮನೆಗೆ ತೆರಳುತ್ತಿದ್ದ ಯುವತಿಯನ್ನು ಹಿಂಬಾಲಿಸಿ ಬಂದ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಬೆದರಿಸಿ ಆಕೆಯ ಕೊರಳಿನಲ್ಲಿದ್ದ 15 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿರುವ ಘಟನೆ ಆಡುಗೋಡಿಯಲ್ಲಿ ನಡೆದಿದೆ.

ನೇಹಾ ದರೋಡೆಗೆ ಒಳಗಾದ ಯುವತಿ. ಬಾರ್‌ನಲ್ಲಿ ಸಪ್ಲೈಯರ್‌ ಆಗಿ ಕೆಲಸ ಮಾಡುತ್ತಿರುವ ಈಕೆ ರಾತ್ರಿ ಕೆಲಸ ಮುಗಿಸಿಕೊಂಡು 1.30ರ ಸುಮಾರಿಗೆ ಮನೆಗೆ ತೆರಳುತ್ತಿದ್ದರು. ದೇವೇಗೌಡ ಬ್ಲಾಕ್‌ನ ಸಮುದಾಯ ಭವನದ ಎದುರಿಗೆ ಬಾಡಿಗೆ ಮನೆಯಲ್ಲಿ ನೆಲೆಸಿರುವ ನೇಹಾರನ್ನು ಬಾರ್‌ನ ಕ್ಯಾಬ್‌ನಲ್ಲೇ ಮನೆ ಸಮೀಪ ಡ್ರಾಪ್‌ ಮಾಡಲಾಗಿತ್ತು. ಕ್ಯಾಬ್‌ನಿಂದ ನೇಹಾ ಕೆಳಗಿಳಿದ ಕೆಲವೇ ನಿಮಿಷಗಳಲ್ಲಿ ದ್ವಿಚಕ್ರ ವಾಹನದಲ್ಲಿ ಹಿಂಬಾಲಿಸಿ ಬಂದ ಮೂವರು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸುವ ಬೆದರಿಕೆ ಒಡ್ಡಿ ಆಕೆಯ ಕೊರಳಿನಲ್ಲಿದ್ದ 15 ಗ್ರಾಂ ತೂಕದ ಚಿನ್ನದ ಸರವನ್ನು ಕಿತ್ತುಕೊಂಡು ಹೋಗಿದ್ದಾರೆ ಎಂದು ಪೊಲೀಸರು ತಿಳಿಸಿದರು.

ದರೋಡೆ ವೇಳೆ ನೇಹಾ ಸಹಾಯಕ್ಕಾಗಿ ಕಿರುಚಿಕೊಂಡರಾದರೂ ಸ್ಥಳೀಯರು ಮನೆಗಳಿಂದ ಹೊರಗೆ ಬರುವುದರೊಳಗೆ ದುಷ್ಕರ್ಮಿಗಳು ಪರಾರಿಯಾದರು ಎಂದು ನೇಹಾ ಪೊಲೀಸರಿಗೆ ಹೇಳಿಕೆ ನೀಡಿದ್ದಾರೆ. ನೇಹಾ ಕೆಲಸ ಮಾಡುವ ಬಾರ್‌ಗೆ ಬಂದಿದ್ದವರೇ ಈ ಕೃತ್ಯ ಎಸಗಿರಬಹುದು ಅಥವಾ ನೇಹಾ ಅವರು ನಿತ್ಯ ಬಂದು ಹೋಗುವುದನ್ನು ಗಮನಿಸಿದ್ದ ಅದೇ ಏರಿಯಾದ ಕಿಡಿಗೇಡಿಗಳೇ ಕೃತ್ಯ ನಡೆಸಿರಬಹುದು ಎಂದು ಪೊಲೀಸರು ಅಂದಾಜಿಸಿದ್ದಾರೆ. ಘಟನೆ ನಡೆದ ಸ್ಥಳ ಮತ್ತು ಸಂಪರ್ಕ ರಸ್ತೆ ಹಾಗೂ ಮುಖ್ಯ ರಸ್ತೆಗಳಲ್ಲಿ ಅಳವಡಿಸಲಾಗಿರುವ ಸಿಸಿಟಿವಿ ದೃಶ್ಯಗಳನ್ನು ವಶಕ್ಕೆ ಪಡೆದು ಪರಿಶೀಲಿಸಲಾಗುತ್ತಿದೆ. ಆರೋಪಿಗಳನ್ನು ಆದಷ್ಟು ಬೇಗ ಬಂಧಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಆಡುಗೋಡಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಸರಗಳ್ಳತನ

ಬೆಳಗ್ಗೆ ದೇವಸ್ಥಾನದಿಂದ ಮನೆಗೆ ತೆರಳುತ್ತಿದ್ದ ಮಹಿಳೆಯೊಬ್ಬರ ಕೊರಳಿನಲ್ಲಿದ್ದ 50 ಗ್ರಾಂ ತೂಕದ ಚಿನ್ನದ ಸರವನ್ನು ಬೈಕ್‌ನಲ್ಲಿ ಬಂದ ಕಿಡಿಗೇಡಿಗಳು ಕಿತ್ತುಕೊಂಡು ಹೋಗಿರುವ ಘಟನೆ ಜೆ.ಪಿ.ನಗರ ಪೊಲೀಸ್‌ ಠಾಣಾ ವ್ಯಾಪ್ತಿಯ ಎನ್‌.ಟಿ.ಸಂದ್ರದಲ್ಲಿ ನಡೆದಿದೆ. ಇದೇ ಏರಿಯಾದ ನಿವಾಸಿ ಸುಧಾರಾಣಿ, ಬೆಳಗ್ಗೆ 8.30ರ ಸುಮಾರಿಗೆ ಅಣ್ಣಯಪ್ಪ ಮುಖ್ಯರಸ್ತೆಯಲ್ಲಿ ನಡೆದು ಹೋಗುತ್ತಿದ್ದಾಗ ಕಪ್ಪು ಬಣ್ಣದ ಪಲ್ಸರ್‌ ಬೈಕಿನಲ್ಲಿ ಬಂದ ಇಬ್ಬರು ಕಿಡಿಗೇಡಿಗಳು ಹಿಂದಿನಿಂದ ಸರ ಕಿತ್ತುಕೊಂಡು ಪರಾರಿಯಾಗಿದ್ದಾರೆ. ಜೆ.ಪಿ.ನಗರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಶಿವಸೇನೆ ಬಿಗಿಪಟ್ಟು: ದೇಶ ಗೆದ್ದ ಬಿಜೆಪಿ ವಿಲವಿಲ


ಶುಭ ಫಲಕ್ಕಾಗಿ ಮನೆಯಲ್ಲಿ ಗಾಳಿ ಗಂಟೆ ಹಾಕುವ ಮುನ್ನ ಈ ವಿಚಾರ ತಿಳಿಯಿರಿ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್