Quantcast
Channel: VijayKarnataka
Viewing all articles
Browse latest Browse all 6795

ಬಿಕಾನೇರ್‌ ಭೂ ಹಗರಣ: ವಾದ್ರಾಗೆ ಇಡಿ ನೋಟಿಸ್‌

$
0
0

ಹೊಸದಿಲ್ಲಿ: ಸ್ಕೃಲೈಟ್‌ ಹಾಸ್ಪಿಟಾಲಿಟಿ ಲಿಮಿಟೆಡ್‌ ಭೂಖರೀದಿ ಹಗರಣ ಸಂಬಂಧ ಕಾಂಗ್ರೆಸ್‌ ಅಧ್ಯಕ್ಷೆ ಸೋನಿಯಾ ಗಾಂಧಿ ಅವರ ಅಳಿಯ ರಾಬರ್ಟ್‌ ವಾದ್ರಾ ಅವರಿಗೆ ಜಾರಿ ನಿರ್ದೇಶನಾಲಯ ಮಂಗಳವಾರ ನೋಟಿಸ್‌ ಜಾರಿ ಮಾಡಿದೆ.

ಕಠಿಣ ಅಕ್ರಮ ಹಣ ಲೇವಾದೇವಿ ತಡೆ ಕಾಯಿದೆ(ಪಿಎಂಎಲ್‌ಎ)ಯಡಿ ನೋಟಿಸ್‌ ಜಾರಿ ಮಾಡಲಾಗಿದ್ದು, ಇದಕ್ಕೆ ಉತ್ತರಿಸಲು ವಾದ್ರಾ ಸಂಸ್ಥೆಗೆ ಜೂನ್‌ 24ರವರೆಗೆ ಕಾಲಾವಕಾಶ ನೀಡಲಾಗಿದೆ.

ವಾದ್ರಾ ಮಾಲೀಕತ್ವದ ಸ್ಕೈಲೈಟ್‌ ಹಾಸ್ಪಿಟಾಲಿಟಿ ಸಂಸ್ಥೆಯು ಡಿಎಲ್‌ಎಫ್‌ ಜತೆ ನಡೆಸಿದ ಭೂಮಿ ಖರೀದಿ ವ್ಯವಹಾರದ ಕುರಿತು ಜಾರಿ ನಿರ್ದೇಶನಾಲಯ ಬಹಳ ಹಿಂದಿನಿಂದಲೂ ಪರಿಶೀಲನೆ ನಡೆಸುತ್ತಿತ್ತು. ರಾಜಸ್ಥಾನದ ಬಿಕಾನೇರ್‌ ಜಿಲ್ಲೆಯಲ್ಲಿ ಸ್ಕೈಲೈಟ್‌ ಖರೀದಿಸಿದ ಭೂಮಿಯ ಮಾಲೀಕತ್ವದ ಕುರಿತಂತೆ ವಿವಾದ ತಲೆದೋರಿದೆ.

ಸೇನಾ ಉದ್ದೇಶಕ್ಕೆ ನಡೆಸಿದ ಭೂಸ್ವಾಧೀನದಲ್ಲಿ ಭೂಮಿ ಕಳೆದುಕೊಂಡವರಿಗೆ ಮೀಸಲಿರಿಸಿದ್ದ ಜಮೀನನ್ನು ನಕಲಿ ಮಾಲೀಕರನ್ನು ಸೃಷ್ಟಿಸಿ ಅವರಿಂದ ಖರೀದಿಸಲಾಗಿದೆ ಎಂಬ ಆರೋಪ ಕೇಳಿಬಂದಿದೆ. ರಾಜಸ್ಥಾನದಲ್ಲಿ ಕಾಂಗ್ರೆಸ್‌ ಆಳ್ವಿಕೆಯಲ್ಲಿದ್ದ ಕಾಲದಲ್ಲಿ ನಡೆದ ಹಗರಣ ಇದಾಗಿದ್ದು, ವಸುಂಧರಾ ರಾಜೇ ಸರಕಾರ ಅಧಿಕಾರಕ್ಕೆ ಬಂದ ಬಳಿಕ ಈ ವ್ಯವಹಾರವನ್ನು ರದ್ದುಪಡಿಸಲಾಗಿತ್ತು.


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


Namaskāra नमस्कार (salutation)


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>