Quantcast
Channel: VijayKarnataka
Viewing all articles
Browse latest Browse all 6795

ಬೇಳೆಕಾಳು ಬೆಲೆ ತಗ್ಗಿಸಲು ಶತಪ್ರಯತ್ನ

$
0
0

*ಬೆಂಬಲ ಬೆಲೆ ಪರಿಶೀಲನೆಗೆ ಸಮಿತಿ ರಚನೆ

ಹೊಸದಿಲ್ಲಿ: ಗಗನಮುಖಿಯಾಗಿರುವ ಬೇಳೆಕಾಳುಗಳ ಬೆಲೆಯನ್ನು ನಿಯಂತ್ರಿಸಲು ಸಾಧ್ಯವಿರುವ ಎಲ್ಲ ಕ್ರಮಗಳನ್ನು ಕೈಗೊಳ್ಳಲು ನಿರ್ಧರಿಸಿರುವ ಕೇಂದ್ರ ಸರಕಾರ, ಕನಿಷ್ಠ ಬೆಂಬಲ ಬೆಲೆಯ ಬಗ್ಗೆ ಪುನರ್‌ ಪರಿಶೀಲನೆ ನಡೆಸಲು ಮತ್ತು ದ್ವಿದಳ ಧಾನ್ಯಗಳನ್ನು ಬೆಳೆಸಲು ಉತ್ತೇಜನ ನೀಡುವುದನ್ನು ಪರಿಶೀಲಿಸಲು ಸಮಿತಿ ರಚಿಸಲು ತೀರ್ಮಾನಿಸಿದರು.

ಇದರ ಜತೆಗೆ ಈಗಿರುವ ಎಂಟು ಲಕ್ಷ ಟನ್‌ ಬೇಳೆಕಾಳುಗಳ ಸಂಗ್ರಹವನ್ನು ಇಪ್ಪತ್ತು ಲಕ್ಷ ಟನ್‌ಗಳಿಗೆ ಹೆಚ್ಚಿಸುವ ಉದ್ದೇಶದಿಂದ ಬೇಳೆಕಾಳುಗಳನ್ನು ಬೆಳೆಯುವ ಇನ್ನೂ ಅನೇಕ ರಾಷ್ಟ್ರಗಳಿಂದ ಆಮದು ಮಾಡಿಕೊಳ್ಳುವ ಬಗ್ಗೆಯೂ ಸರಕಾರ ಚಿಂತನೆ ನಡೆಸಿದೆ.

ಹಣಕಾಸು ಸಚಿವ ಅರುಣ್‌ ಜೇಟ್ಲಿ ಅವರ ನೇತೃತ್ವದಲ್ಲಿ ಸೋಮವಾರ ನಡೆದ ಉನ್ನತ ಮಟ್ಟದ ಸಭೆಯಲ್ಲಿ ಈ ಕುರಿತ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಆಹಾರ ಸಚಿವ ರಾಮ್‌ ವಿಲಾಸ್‌ ಪಾಸ್ವಾನ್‌ ಮತ್ತು ನಗರಾಭಿವೃದ್ಧಿ ಸಚಿವ ಎಂ.ವೆಂಕಯ್ಯ ನಾಯ್ಡು ಹಾಜರಿದ್ದರು.

ಮುಖ್ಯ ಆರ್ಥಿಕ ಸಲಹೆಗಾರರ ನೇತೃತ್ವದಲ್ಲಿ ಸಮಿತಿಯನ್ನು ರಚಿಸಲಾಗುತ್ತದೆ. ಕನಿಷ್ಠ ಬೆಂಬಲ ಬೆಲೆ ಮತ್ತು ಬೋನಸ್‌ ಸೇರಿದಂತೆ ಇನ್ನೂ ಅನೇಕ ಸಾಧ್ಯತೆಗಳನ್ನು ಪರಿಶೀಲಿಸುವುದರ ಜತೆಗೆ ಬೇಳೆಕಾಳುಗಳ ಕುರಿತು ಸುದೀರ್ಘಾವಧಿಯ ನೀತಿಯನ್ನು ರೂಪಿಸುವ ಬಗ್ಗೆ ಈ ಸಮಿತಿ ಕಾರ್ಯನಿರ್ವಹಿಸಲಿದೆ ಎಂದು ಸಭೆಯ ಬಳಿಕ ಸಚಿವ ಪಾಸ್ವಾನ್‌ ತಿಳಿಸಿದರು.

ಸದ್ಯ ಬೇಳೆಕಾಳು ಬೆಳೆಯುವ ರೈತರಿಗೆ ಕನಿಷ್ಠ ಬೆಂಬಲ ಬೆಲೆ ಮತ್ತು ಬೋನಸ್‌ ಬಗ್ಗೆ ಸಮಿತಿ ಪರಾಮರ್ಶೆ ನಡೆಸುತ್ತದೆ ಮತ್ತು ಭಾರತದಲ್ಲಿ ಬೇಳೆಕಾಳು ಬೆಳೆಯುವುದಕ್ಕೆ ಉತ್ತೇಜನ ನೀಡಲು ಸೂಕ್ತ ನೀತಿಯನ್ನು ರೂಪಿಸಲಿದೆ. ಕನಿಷ್ಠ ಬೆಂಬಲ ಬೆಲೆಗೆ ಹೋಲಿಸಿದರೆ ಉತ್ಪಾದನಾ ಬೋನಸ್‌ ಹೆಚ್ಚು ಫಲಪ್ರದ ಎಂಬುದು ತಮ್ಮ ಅಭಿಮತವಾಗಿದೆ ಎಂದು ಅವರು ಹೇಳಿದರು.

ಎರಡು ವಾರಗಳಲ್ಲಿ ವರದಿ

ಸಮಿತಿಯು ಮುಂದಿನ ಎರಡು ವಾರಗಳಲ್ಲಿ ವರದಿ ಸಲ್ಲಿಸಲಿದೆ. ಸರಕಾರ ಈಗಾಗಲೇ 2016-17ರ ಸಾಲಿಗೆ ಮುಂಗಾರು ಬೇಳೆಕಾಳುಗಳ ಕನಿಷ್ಠ ಬೆಂಬಲ ಬೆಲೆಯನ್ನು ಅಪಾರ ಪ್ರಮಾಣದಲ್ಲಿ ಏರಿಸಿತ್ತು. ಸಮಿತಿ ನೀಡಲಿರುವ ವರದಿಯ ಆಧಾರದಲ್ಲಿ ಸರಕಾರ ಮುಂಗಾರು ಅವಧಿಗೆ ಹೆಚ್ಚಿನ ಪ್ರೋತ್ಸಾಹಧನವನ್ನು ಪ್ರಕಟಿಸಲಿದೆಯೇ ಅಥವಾ ಹಿಂಗಾರು ಋುತುವಿಗೆ ಪರಿಶೀಲಿಸಲಿದೆಯೇ ಎಂಬುದನ್ನು ಕಾದು ನೋಡಬೇಕು.

ಸರಕಾರ 2016-17ರ ಬೆಳೆ ವರ್ಷದಲ್ಲಿ 1.19 ಲಕ್ಷ ಟನ್‌ ತೊಗರಿಬೇಳೆಯನ್ನು ಸಂಗ್ರಹಿಸಿದೆ. ಇವುಗಳನ್ನು ಕೆ.ಜಿ.ಗೆ 120 ರೂ. ಸಬ್ಸಿಡಿ ದರದಲ್ಲಿ ಚಿಲ್ಲರೆ ಮಾರಾಟ ಮಾಡಲು ರಾಜ್ಯ ಸರಕಾರಗಳಿಗೆ ಸರಬರಾಜು ಮಾಡಲಾಗಿದೆ.

ಈ ವರ್ಷ ಒಟ್ಟು ದೇಶೀಯ ಉತ್ಪಾದನೆ ಇಪ್ಪತ್ತು ದಶಲಕ್ಷ ಟನ್‌ ಮುಟ್ಟುವ ಸಾಧ್ಯತೆ ಅಧಿಕವಾಗಿರುವುದರಿಂದ ಮುಂದಿನ ಎರಡು ಮೂರು ತಿಂಗಳಲ್ಲಿ ಧಾನ್ಯಗಳ ಬೆಲೆಯಲ್ಲಿ ಇಳಿಕೆಯಾಗುವುದು ನಿಶ್ಚಿತ ಎಂದು ಸಚಿವರು ವಿಶ್ವಾಸ ವ್ಯಕ್ತಪಡಿಸಿದರು.

ಕೋಟ್ಸ್‌

ರಾಜ್ಯ ಸರಕಾರಗಳ ನೀರಸ ಪ್ರತಿಕ್ರಿಯೆಯಿಂದಾಗಿ ಕೇಂದ್ರ ಸರಕಾರದ ಘನತೆಗೆ ಧಕ್ಕೆ ಉಂಟಾಗಿದೆ. ನಮ್ಮ ಬಳಿ ಇರುವ ಬೇಳೆಕಾಳುಗಳನ್ನು ಪಡೆದುಕೊಳ್ಳುವಂತೆ ಎಲ್ಲ ರಾಜ್ಯ ಸರಕಾರಗಳಿಗೆ ಮತ್ತೊಮ್ಮೆ ಮನವಿ ಮಾಡಿಕೊಳ್ಳುತ್ತಿದ್ದೇನೆ. ಈ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ರಾಜ್ಯಗಳ ಬಳಿ ಸಾಕಷ್ಟು ಮೂಲಸೌಕರ್ಯಗಳಿವೆ.

ರಾಮ್‌ ವಿಲಾಸ್‌ ಪಾಸ್ವಾನ್‌, ಆಹಾರ ಸಚಿವರು.



Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್