Quantcast
Channel: VijayKarnataka
Viewing all articles
Browse latest Browse all 6795

ಹಿಂಸಾಚಾರ ಪೀಡಿತ ಕಾಶ್ಮೀರಕ್ಕೆ ರಾಜನಾಥ್‌ ಭೇಟಿ ಇಂದಿನಿಂದ

$
0
0

ಹೊಸದಿಲ್ಲಿ: ಹಿಂಸಾಚಾರ ಪೀಡಿತ ಕಾಶ್ಮೀರಕ್ಕೆ ಕೇಂದ್ರ ಗೃಹ ಸಚಿವ ರಾಜನಾಥ್‌ ಸಿಂಗ್‌ ಬುಧವಾರದಿಂದ 2 ದಿನಗಳ ಭೇಟಿ ನೀಡಲಿದ್ದಾರೆ.

ಕಾಶ್ಮೀರದಲ್ಲಿ ನಿಲ್ಲದ ಹಿಂಸಾಚಾರದ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ತೀವ್ರ ಕಳವಳ ವ್ಯಕ್ತಪಡಿಸಿರುವ ಬೆನ್ನಲ್ಲೇ, ಗೃಹ ಸಚಿವ ರಾಜನಾಥ್‌ ಸಿಂಗ್‌ 2 ದಿನಗಳ ಪ್ರವಾಸ ಕೈಗೊಳ್ಳುತ್ತಿದ್ದಾರೆ. ಈ ವೇಳೆ, ಅವರು ಕಾಶ್ಮೀರದ ಭದ್ರತಾ ಪರಿಸ್ಥಿತಿ ಪರಾಮರ್ಶಿಸಲಿದ್ದು, ಎಲ್ಲ ವರ್ಗಗಳ ಜನರೊಂದಿಗೆ ಮಾತನಾಡಲಿದ್ದಾರೆ. ಹಿಂಸಾಚಾರ ಹತ್ತಿಕ್ಕುವ ಮತ್ತು ರಾಜ್ಯದಲ್ಲಿ ಶಾಂತಿ ಸ್ಥಾಪನೆ ಬಗ್ಗೆ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳೊಂದಿಗೆ ಸಚಿವ ರಾಜನಾಥ್‌ ಸಿಂಗ್‌ ಮಾತುಕತೆ ನಡೆಸಲಿದ್ದಾರೆ.

ಹಿಂಸಾಚಾರ ಭುಗಿಲೆದ್ದ ಬಳಿಕ ರಾಜನಾಥ್‌ ಸಿಂಗ್‌ ಕಾಶ್ಮೀರಕ್ಕೆ ಭೇಟಿ ನೀಡುತ್ತಿರುವುದು ಎರಡನೇ ಬಾರಿಯಾಗಿದೆ.

ಜುಲೈ 8 ರಂದು ಹಿಜ್ಬುಲ್‌ ಮುಜಾಹಿದ್ದೀನ್‌ ಕಮಾಂಡರ್‌ ಬುರ್ಹಾನ್‌ ವಾನಿ ಹತ್ಯೆ ಬಳಿಕ ಕಣಿವೆಯಲ್ಲಿ ಹಿಂಸಾಚಾರ ನಿರಂತರವಾಗಿ ಮುಂದುವರೆದಿದ್ದು, 65 ಕ್ಕೂ ಹೆಚ್ಚು ನಾಗರಿಕರು ಮೃತಪಟ್ಟಿದ್ದಾರೆ.

ಭೇಟಿ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ರಾಜನಾಥ್‌ ಸಿಂಗ್‌, ಜಮ್ಮು - ಕಾಶ್ಮೀರದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವುದೇ ಕೇಂದ್ರದ ಮೊದಲ ಆದ್ಯತೆ ಎಂದು ಹೇಳಿದ್ದಾರೆ.

ಜಮ್ಮು ಕಾಶ್ಮೀರ ವಿಧಾನಸಭೆ ಪ್ರತಿಪಕ್ಷ ನಾಯಕ ಒಮರ್‌ ಅಬ್ದುಲ್ಲಾ ನೇತೃತ್ವದಲ್ಲಿ ಪ್ರತಿಪಕ್ಷಗಳ ನಿಯೋಗ ಸೋಮವಾರ ದಿಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿ, ಹಿಂಸಾಚಾರದ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು. ಈ ಬಗ್ಗೆ ಪ್ರಧಾನಿ ಸಹ ಕಳವಳ ವ್ಯಕ್ತಪಡಿಸಿದ್ದು, ಇದಕ್ಕೆ ಶಾಶ್ವತ ಪರಿಹಾರ ಕಂಡು ಹಿಡಿಯಲು ಒಗ್ಗೂಡಿ ಶ್ರಮಿಸೋಣ ಎಂದು ಭರವಸೆ ನೀಡಿದ್ದರು.

-----

ತುರ್ತು ಪರಿಹಾರ ಕಂಡುಕೊಳ್ಳಬೇಕಿದೆ: ಆ್ಯಂಟನಿ

ತಿರುವನಂತಪುರ: ಕಾಶ್ಮೀರದಲ್ಲಿ ನಡೆಯುತ್ತಿರುವ ಹಿಂಸಾಚಾರ ಕೊನೆಗೊಳಿಸಲು ತುರ್ತು ಪರಿಹಾರ ಕಂಡು ಹಿಡಿಯಬೇಕಿದೆ ಎಂದು ಮಾಜಿ ರಕ್ಷಣಾ ಸಚಿವ ಎ.ಕೆ. ಆ್ಯಂಟನಿ ಹೇಳಿದ್ದಾರೆ.

ತಿರುವನಂತಪುರದಲ್ಲಿ ಮಂಗಳವಾರ ಮಾತನಾಡಿದ ಅವರು, ಹಿಂಸಾಚಾರ ನಿಲ್ಲಿಸಲು ತಕ್ಷಣ ಸರ್ವಪಕ್ಷ ನಿಯೋಗ ತೆಗೆದುಕೊಂಡು ಹೋಗುವಂತೆ ಕೇಂದ್ರ ಸರಕಾರವನ್ನು ಅವರು ಒತ್ತಾಯಿಸಿದ್ದಾರೆ.

ಚಿದು ಮೆಚ್ಚುಗೆ: ಜಮ್ಮು ಕಾಶ್ಮೀರ ಪ್ರತಿಪಕ್ಷಗಳ ಬೇಡಿಕೆಗಳಿಗೆ ಪ್ರಧಾನಿ ಸಕಾರಾತ್ಮಕ ಪ್ರತಿಕ್ರಿಯೆ ನೀಡಿರುವ ಬಗ್ಗೆ ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

'' ಕಾಶ್ಮೀರ ಕಣಿವೆಗೆ ಸರ್ವಪಕ್ಷ ನಿಯೋಗ ಕಳುಹಿಸುವುದಾಗಿ ಕಾಶ್ಮೀರದ ಪ್ರತಿಪಕ್ಷಗಳ ನಾಯಕರಿಗೆ ಭರವಸೆ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ 'ಹೊಸ ಯೋಚನೆ' ಮಾಡಿದ್ದಾರೆ. ಇದನ್ನು ನಾವು ಸ್ವಾಗತಿಸುತ್ತೇವೆ''ಎಂದು ಕಾಂಗ್ರೆಸ್‌ ನಾಯಕ ಪಿ.ಚಿದಂಬರಂ ಮಂಗಳವಾರ ಟ್ವೀಟ್‌ ಮಾಡಿದ್ದಾರೆ.

------

ಕಾಶ್ಮೀರದಲ್ಲಿ ನಿಲ್ಲದ ಹಿಂಸಾಚಾರ: 17 ಮಂದಿಗೆ ಗಾಯ

ಶ್ರೀನಗರ: ಕಾಶ್ಮೀರ ಕಣಿವೆಯಲ್ಲಿ ಹಿಂಸಾಚಾರ ಮುಂದುವರೆದಿದೆ. ಸೋಫಿಯಾನ ಜಿಲ್ಲೆಯಲ್ಲಿ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಸಿಡಿಸಿದ ಪೆಲೆಟ್‌ಗಳಿಂದ 17 ಮಂದಿ ಗಾಯಗೊಂಡಿದ್ದಾರೆ.

ಸೋಪಿಯಾನದಲ್ಲಿ ನೂರಾರು ನಾಗರಿಕರು ಮಂಗಳವಾರ ಪ್ರತಿಭಟಿಸಿದರು. ಈ ವೇಳೆ, ಭದ್ರತಾ ಸಿಬ್ಬಂದಿ ಮೇಲೆ ಕಲ್ಲು ತೂರಾಟ ನಡೆಸಿದರು. ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಸೆಲ್‌ ದಾಳಿ ನಡೆಸಿದ್ದರಿಂದ 17 ಮಂದಿ ಗಾಯಗೊಂಡಿದ್ದಾರೆ. ಬಾರಾಮುಲ್ಲಾ ಜಿಲ್ಲೆಯಲ್ಲೂ ಕಲ್ಲು ತೂರಾಟದ ವರದಿಯಾಗಿದೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>