Quantcast
Channel: VijayKarnataka
Viewing all articles
Browse latest Browse all 6795

ಸಹಜ ಸ್ಥಿತಿಯತ್ತ ಮರಳುತ್ತಿದೆ ರಾಜ್ಯ

$
0
0

ಬೆಂಗಳೂರು: ತಮಿಳುನಾಡಿಗೆ ಕಾವೇರಿ ನೀರು ಬಿಡಲು ಹೇಳಿ, ಸುಪ್ರೀಂ ಕೋರ್ಟ್ ನೀಡಿರುವ ಆದೇಶದ ವಿರುದ್ಧ ಕನ್ನಡ ಪರ ಸಂಘಟನೆಗಳು ಶುಕ್ರವಾರ ರಾಜ್ಯ ಬಂದ್‌ಗೆ ಕರೆ ನೀಡಿದ್ದವು. ದಿನಪೂರ್ತಿ ಬಹುತೇಕ ಸ್ತಬ್ಧವಾಗಿದ್ದ ರಾಜ್ಯ, ಸಂಜೆ 6ರ ನಂತರ ಸಹಜ ಸ್ಥಿತಿಯತ್ತ ಮರಳಿದೆ.

ನಿಧಾನವಾಗಿ ಆಟೋ ಹಾಗೂ ನಗರ ಸಾರಿಗೆ ಬಸ್‌ಗಳು ರಸ್ತೆಗಿಳಿಯುತ್ತಿದ್ದು, ಜನರ ಓಡಾಟ ಆರಂಭವಾಗಿದೆ. ಕೆಎಸ್‌ಆರ್‌ಟಿಸಿ ಬಸ್‌ಗಳೂ ಸಂಚಾರ ಆರಂಭಿಸಿದ್ದು, ಬೆಂಗಳೂರಿನಿಂದ ವಿವಿಧೆಡೆ ಪಯಣ ಆರಂಭಿಸಿವೆ.

ಬಂದ್‌ಗೆ ರಾಜ್ಯದ ವಿವಿಧೆಡೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ಅಲ್ಲಲ್ಲಿ ಟಯರ್ ಸುಟ್ಟಿರುವ ಘಟನೆಗಳನ್ನು ಹೊರತುಪಡಿಸಿ, ಬಂದ್ ಬಹುತೇಕ ಶಾಂತಿಯುತವಾಗಿತ್ತು. ಕೊಡಗು ಜಿಲ್ಲೆ ಹೊರತುಪಡಿಸಿ, ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಬಂದ್‌ಗೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಎಲ್ಲ ಅಂಗಡಿ ಮುಗ್ಗಟ್ಟುಗಳೂ ಮುಚ್ಚಿದ್ದವು.

ಇತರೆ ರಾಜ್ಯಗಳಿಂದ ಬಂದಿಳಿದ ಪ್ರಯಾಣಿಕರು ನಗರದ ಮೆಜೆಸ್ಟಿಕ್ ಸೇರಿ, ರಾಜ್ಯದ ಹಲವು ಬಸ್ ನಿಲ್ದಾಣಗಳಲ್ಲಿ ವಾಹನ ಸಿಗದೆ ಪರದಾಡಿದರು. ಬೆಂಗಳೂರಿನ ವಿಮಾನ ನಿಲ್ದಾಣದಲ್ಲಿ ಬಂದಿಳಿದ ಅನೇಕ ಪ್ರಯಾಣಿಕರೂ, ತಮ್ಮ ಗುರಿ ತಲುಪಲು ವಾಹನಗಳು ಸಿಗದೇ ಪರದಾಡಿದರು.

ಬಂದ್ ಲೈವ್ ಬ್ಲಾಗಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕಳೆದ ಶುಕ್ರವಾರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ, ಕಾರ್ಮಿಕ ಸಂಘಟನೆಗಳು ಭಾರತ್ ಬಂದ್‌ಗೆ ಕರೆ ನೀಡಿದ್ದವು. ಈ ವಾರವೂ ಮತ್ತೆ ಬಂದ್‌ಗೆ ಕರೆ ನೀಡಿದ್ದರು ಜನರು ಶಪಿಸಿದರು. ಆದರೂ ಈ ವಿವಾದದ ಬಿಸಿ ಬೆಂಗಳೂರಿಗರಿಗೂ ತಟ್ಟುವುದರಿಂದ ಕನ್ನಡ ಚಿತ್ರರಂಗ ಸೇರಿದಂತೆ, ಹಲವು ಸಂಘಟನೆಗಳು ಬಂದ್‌ಗೆ ಬೆಂಬಲ ಸೂಚಿಸಿದ್ದವು.


Viewing all articles
Browse latest Browse all 6795

Trending Articles


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಬಿಗ್‌ ನ್ಯೂಸ್: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ -‌ ಈ ಬಾರಿಯೂ...


‘ಬಾಹುಬಲಿ’ಅಭಿಮಾನಿಗಳಿಗೆ ಗುಡ್ ನ್ಯೂಸ್ ಸುದ್ದಿ ! ಬರ್ತಿದೆ ‘ಪಾರ್ಟ್-3’


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ತುಳು ತೆರೆಗೆ ಸೋನಿಯಾ ಎಂಟ್ರಿ



<script src="https://jsc.adskeeper.com/r/s/rssing.com.1596347.js" async> </script>