Quantcast
Channel: VijayKarnataka
Viewing all articles
Browse latest Browse all 6795

ಅರುಂಧತಿ ಭಟ್ಟಾಚಾರ್ಯ ಮುಂದುವರಿಕೆ ಸಂಭವ

$
0
0

ಹೊಸದಿಲ್ಲಿ: ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾದೊಂದಿಗೆ(ಎಸ್‌ಬಿಐ) ಸಹವರ್ತಿ 5 ಬ್ಯಾಂಕ್‌ಗಳ ವಿಲೀನ ಪ್ರಕ್ರಿಯೆ ಚಾಲ್ತಿಯಲ್ಲಿದ್ದು, ಈ ಹಿನ್ನೆಲೆಯಲ್ಲಿ ಎಸ್‌ಬಿಐ ಮುಖ್ಯಸ್ಥೆ ಅರುಂಧತಿ ಭಟ್ಟಾಚಾರ್ಯ ಅಧಿಕಾರಾವಧಿಯನ್ನು ಇನ್ನೂ ಒಂದು ವರ್ಷ ವಿಸ್ತರಿಸಲು ಸರಕಾರ ಮುಂದಾಗಿದೆ ಎಂದು ಮೂಲಗಳು ತಿಳಿಸಿವೆ.

''ಮಹಾವಿಲೀನದ ಸಂದರ್ಭದಲ್ಲಿ ಭಟ್ಟಾಚಾರ್ಯ ಅವರ ಉಪಸ್ಥಿತಿ ಅಗತ್ಯವಿದೆ. ಹೀಗಾಗಿ ಅಧಿಕಾರಾವಧಿ ವಿಸ್ತರಿಸಲು ಸರಕಾರ ಒಲವು ತೋರಿದೆ,'' ಎಂದು ಮೂಲಗಳು ಹೇಳಿವೆ. ಅವರ ಮೂರು ವರ್ಷಗಳ ಅಧಿಕಾರಾವಧಿ ಸೆಪ್ಟೆಂಬರ್‌ ಅಂತ್ಯಕ್ಕೆ ಮುಕ್ತಾಯವಾಗಬೇಕಿತ್ತು.

''ಬ್ಯಾಂಕ್‌ ಸಂಸ್ಥೆಗಳ ಮಂಡಳಿಯ(ಬಿಬಿಬಿ) ಅಭಿಪ್ರಾಯವನ್ನು ಈಗಾಗಲೇ ಸರಕಾರ ಸ್ವೀಕರಿಸಿದ್ದು, ಅರುಂಧತಿ ಭಟ್ಟಾಚಾರ್ಯರ ವಿಸ್ತರಣೆ ಸಂಬಂಧಿ ಆದೇಶವು ಮುಂದಿನ ಕೆಲವೇ ದಿನಗಳಲ್ಲಿ ಬಿಡುಗಡೆಯಾಗಲಿದೆ,'' ಎಂದು ಮೂಲಗಳು ಹೇಳಿವೆ.

ವರ್ಷದ ಆರಂಭದಲ್ಲಿಯೇ ಎಸ್‌ಬಿಐನಲ್ಲಿ ಮಹಾವಿಲೀನಕ್ಕೆ ಕೇಂದ್ರ ಸಂಪುಟ ಸಮ್ಮತಿ ನೀಡಿತ್ತು. ಸ್ಟೇಟ್‌ ಬ್ಯಾಂಕ್‌ ಆಫ್‌ ಬಿಕನೇರ್‌, ಸ್ಟೇಟ್‌ ಬ್ಯಾಂಕ್‌ ಆಫ್‌ ತಿರುವಂಕೂರ್‌, ಸ್ಟೇಟ್‌ ಬ್ಯಾಂಕ್‌ ಆಫ್‌ ಪಟಿಯಾಲ, ಸ್ಟೇಟ್‌ ಬ್ಯಾಂಕ್‌ ಆಫ್‌ ಮೈಸೂರು, ಸ್ಟೇಟ್‌ ಬ್ಯಾಂಕ್‌ ಆಫ್‌ ಹೈದರಾಬಾದ್‌ ಮತ್ತು ಭಾರತೀಯ ಮಹಿಳಾ ಬ್ಯಾಂಕ್‌(ಬಿಎಂಬಿ) ಅನ್ನು ಎಸ್‌ಬಿಐನಲ್ಲಿ ವಿಲೀನಗೊಳಿಸುವುದು ಸರಕಾರದ ಉದ್ದೇಶ. ಈ ವಿಲೀನದಿಂದ 37 ಲಕ್ಷ ಕೋಟಿ ರೂ. ಆಸ್ತಿಯನ್ನು ಎಸ್‌ಬಿಐ ಹೊಂದಲಿದ್ದು, ವಿಶ್ವದ ಬೃಹತ್‌ ಬ್ಯಾಂಕ್‌ಗಳಲ್ಲಿ ಒಂದಾಗಲಿದೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಬಿಗ್‌ ನ್ಯೂಸ್: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ -‌ ಈ ಬಾರಿಯೂ...


 ಕೌಟುಂಬಿಕ ಕಲಹ ಹಿನ್ನೆಲೆ; ಬುದ್ದಿವಾದ ಹೇಳಿದ ತಂಗಿಯನ್ನೇ ಕೊಂದ ಅಣ್ಣ…


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


‘ಒಡಕು ಮೂಡಿಸಿದ ಸಿದ್ಧರಾಮಯ್ಯ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>