Quantcast
Channel: VijayKarnataka
Viewing all articles
Browse latest Browse all 6795

ತಳ ಕಾಣಲಿವೆ ಕಾವೇರಿ ಕಣಿವೆ ಜಲಾಶಯಗಳು

$
0
0

ಮೈಸೂರು ಬ್ಯುರೊ: ತಮಿಳುನಾಡಿಗೆ ಪ್ರತಿದಿನ 6 ಸಾವಿರ ಕ್ಯೂಸೆಕ್ ನೀರು ಬಿಡುವಂತೆ ಸುಪ್ರೀಂಕೋರ್ಟ್ ಮಂಗಳವಾರ ಆದೇಶ ನೀಡಿರುವುದರಿಂದ ಕೆಆರ್‌ಎಸ್ ಸೇರಿದಂತೆ ಕಾವೇರಿ ಕಣಿವೆಯ ಜಲಾಶಯಗಳ ನೀರಿನ ಮಟ್ಟ ಮತ್ತಷ್ಟು ತಳ ಸೇರಲಿದೆ. ಈಗ ಕಾವೇರಿ ಕೊಳ್ಳದ ಪ್ರಮುಖ ಜಲಾಶಯಗಳಲ್ಲಿ ಎಷ್ಟು ನೀರಿದೆ, ಈ ತೀರ್ಪಿನಿಂದ ಯಾವ್ಯಾವ ಜಲಾಶಯದ ನೀರು ಎಷ್ಟು ಕಡಿಮೆಯಾಗುತ್ತದೆ ಎಂಬುದರ ಅವಲೋಕನ ಇಲ್ಲಿದೆ.

ಕೆಆರ್‌ಎಸ್

124.80 ಅಡಿ ಮಟ್ಟದ ಕೆಆರ್‌ಎಸ್ ಜಲಾಶಯದಲ್ಲಿ 98 ಅಡಿ ನೀರು ಸಂಗ್ರಹವಾಗಿತ್ತು. ಆ ನೀರು ಬಸಿದು ಕೊಟ್ಟಿರುವುದರಿಂದ ಜಲಾಶಯದ ಮಟ್ಟ 84 ಅಡಿಗೆ ಕುಸಿದಿದೆ. ಕೇವಲ 13 ಟಿಎಂಸಿ ನೀರು ಜಲಾಶಯದಲ್ಲಿ ಲಭ್ಯವಿದ್ದು, 4 ಟಿಎಂಸಿ ನೀರನ್ನು ಮಾತ್ರ ಬಳಸಬಹುದು. 9 ಟಿಎಂಸಿ ನೀರು ಡೆಡ್‌ಸ್ಟೋರೆಜ್. ನಿತ್ಯ 7 ದಿನದವರೆಗೆ 6 ಸಾವಿರ ಕ್ಯೂಸೆಕ್ ನೀರು ಹರಿಸದರೆ 4 ಟಿಎಂಸಿ ನೀರು ಖಾಲಿಯಾಗುತ್ತದೆ. ನಂತರ ಕುಡಿಯಲೂ ಕೂಡ ನೀರು ಪೂರೈಸಲು ಸಾಧ್ಯವಾಗುವುದಿಲ್ಲ. ಬೆಳೆಗೆ ನೀರು ಬಿಡದ್ದರಿಂದ ಲಕ್ಷಾಂತರ ಎಕರೆ ಪ್ರದೇಶದಲ್ಲಿ ಭತ್ತಕ್ಕೆ ತೊಂದರೆಯಾಗಲಿದೆ.

ಹೇಮಾವತಿ

ಗರಿಷ್ಠ 2922 ಅಡಿ ಸಂಗ್ರಹ ಸಾಮರ್ಥ್ಯದ ಹೇಮಾವತಿ ಜಲಾಶಯದಲ್ಲಿ ಪ್ರಸ್ತುತ 2874 ಅಡಿ ನೀರಿದೆ. 7.4 ಟಿಎಂಸಿ ನೀರಿದ್ದು, ನಾಲ್ಕು ಟಿಎಂಸಿ ಡೆಡ್ ಸ್ಟೋರೇಜ್ ಹೊರತು ಪಡಿಸಿದರೆ 3.4 ಟಿಎಂಸಿ ಮಾತ್ರ ಲಭ್ಯವಿದೆ. ತೀರ್ಪಿಗೆ ಮುನ್ನವೇ ಪ್ರತಿದಿನ 3 ಸಾವಿರ ಕ್ಯೂಸೆಕ್ ನೀರನ್ನು ಕೆಆರ್‌ಎಸ್‌ಗೆ ಹರಿಸಲಾಗುತ್ತಿದೆ. ಹಿಂದಿನ ವರ್ಷ ಇದೇ ದಿನ 18.505 ಟಿಎಂಸಿ ನೀರಿನ ಸಂಗ್ರಹ ಇದ್ದರೂ, 2,800 ಕ್ಯೂಸೆಕ್ ಹೊರಹರಿವಿತ್ತು. ಈ ಬಾರಿ ಅತ್ಯಂತ ಕಡಿಮೆ ನೀರಿದ್ದರೂ, 3 ಸಾವಿರ ಕ್ಯೂಸೆಕ್ ನೀರು ಹರಿಬಿಡಲಾಗುತ್ತಿದೆ.

ಹಾರಂಗಿ

2859 ಅಡಿಗಳ ಗರಿಷ್ಠಮಟ್ಟದ ಹಾರಂಗಿ ಜಲಾಶಯದಲ್ಲಿ ಈ ವರ್ಷ 2857 ಅಡಿಗಳಷ್ಟು ನೀರಿನ ಸಂಗ್ರಹವಾಗಿದೆ. ತಮಿಳುನಾಡಿಗೆ ನೀರು ಹರಿಸಿದ್ದರಿಂದ ನಿತ್ಯ 2000 ಕ್ಯೂಸೆಕ್ ನೀರು ಹರಿಯುತ್ತಿದೆ. ಪರಿಣಾಮ ಜಲಾಶಯದ ಮಟ್ಟ 2841.32 ಅಡಿಗಳಿಗೆ ಕುಸಿದಿದೆ. ನಾಲೆ ಮೂಲಕ ಕೃಷಿ ಚಟುವಟಿಕೆಗಳಿಗೆ ಹರಿಯುತ್ತಿದ್ದ ನೀರನ್ನು ಸದ್ಯಕ್ಕೆ ನಿಲ್ಲಿಸಲಾಗಿದೆ. ಪ್ರಸ್ತುತ 4.30 ಟಿಎಂಸಿ ನೀರು ಜಲಾಶಯದಲ್ಲಿದ್ದು, ಇದರಲ್ಲಿ 3.65 ಟಿಎಂಸಿ ಡೆಡ್ ಸ್ಟೋರೇಜ್. ಬಳಕೆಗೆ ಸಿಗುವುದು ಕೇವಲ 0.75 ಟಿಎಂಸಿ.

ಕಬಿನಿ

ಎಚ್.ಡಿ.ಕೋಟೆ ತಾಲೂಕಿನ ಕಬಿನಿ ಜಲಾಶಯದಿಂದ ತಮಿಳುನಾಡಿಗೆ ಬಿಡುತ್ತಿದ್ದ 2500 ಕ್ಯೂಸೆಕ್ ನೀರಿನ ಪ್ರಮಾಣವನ್ನು ಮಂಗಳವಾರ ಬೆಳಗಿನಿಂದ 2000 ಕ್ಯೂಸೆಕ್‌ಗೆ ಇಳಿಸಲಾಗಿದೆ. ಜಲಾಶಯದ ಬಲ ಮತ್ತು ಎಡದಂಡೆ ನಾಲೆಗೆ ನೀರನ್ನು ಸಂಪೂರ್ಣವಾಗಿ ನಿಲ್ಲಿಸಲಾಗಿದೆ. ಜಲಾಶಯದ ಗರಿಷ್ಠ ಮಟ್ಟ 2284 ಅಡಿಗಳು. 16 ದಿನಗಳಿಂದ ಜಲಾಶಯಗಳಿಂದ ಸತತವಾಗಿ ನೀರು ಬಿಡುತ್ತಿರುವುದರಿಂದ ಜಲಾಶಯದ ಮಟ್ಟ 2269.45 ಅಡಿಗೆ ಇಳಿದಿದೆ. ಕಬಿನಿ ಜಲಾಶಯ ವ್ಯಾಪ್ತಿಯಲ್ಲಿ ಕಳೆದ ಮೂರ‌್ನಾಲ್ಕು ದಿನಗಳ ಹಿಂದೆ ಕೇರಳ ರಾಜ್ಯದ ವಯನಾಡು ಜಿಲ್ಲೆಯಲ್ಲಿ ಸ್ವಲ್ಪ ಮಳೆ ಬಿದ್ದ ಕಾರಣದಿಂದ ಜಲಾಶಯಕ್ಕೆ 2300 ಕ್ಯೂಸೆಕ್ ಒಳ ಹರಿವು ಇದೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>