Quantcast
Channel: VijayKarnataka
Viewing all articles
Browse latest Browse all 6795

ಜಯಾ ಸಿಂಗಾಪುರಕ್ಕೆ ಶಿಫ್ಟ್‌ ಇಲ್ಲ

$
0
0

ಚೆನ್ನೈ: ಅನಾರೋಗ್ಯದಿಂದ ಇಲ್ಲಿನ ಅಪೋಲೊ ಆಸ್ಪತ್ರೆಗೆ ಗುರುವಾರ ದಾಖಲಾಗಿರುವ ತಮಿಳುನಾಡು ಮುಖ್ಯಮಂತ್ರಿ ಜೆ.ಜಯಲಲಿತಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಕರೆದೊಯ್ಯುತ್ತಿರುವ ಬಗ್ಗೆ ಸಾಮಾಜಿಕ ಮಾಧ್ಯಮಗಳಲ್ಲಿ ವರದಿಗಳು ಬಂದಿವೆ. ಆದರೆ ಇದೆಲ್ಲವೂ ಸುಳ್ಳು ಸುದ್ದಿ, ಅಮ್ಮಾ ಆರೋಗ್ಯದಲ್ಲಿ ಸುಧಾರಣೆ ಕಂಡುಬಂದಿದ್ದು, ಅವರನ್ನು ಸಿಂಗಾಪುರಕ್ಕೆ ಕರೆದೊಯುತ್ತಿಲ್ಲ ಎಂದು ಎಐಎಡಿಎಂಕೆ ಸ್ಪಷ್ಟಪಡಿಸಿದೆ.

ಜ್ವರ ಹಾಗೂ ದೇಹದಲ್ಲಿನ ನೀರಿನಂಶ ಕಡಿಮೆಯಾದ ಹಿನ್ನೆಲೆಯಲ್ಲಿ 68 ವರ್ಷದ ಜಯಾ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರೀಗ ಚಿಕಿತ್ಸೆಯಿಂದ ಚೇತರಿಸಿಕೊಳ್ಳುತ್ತಿದ್ದು, ಯಾವುದೇ ತೊಂದರೆ ಇಲ್ಲ. ಒಂದೆರೆಡು ದಿನ ವೈದ್ಯರ ತಂಡ ಅವರನ್ನು ಆಸ್ಪತ್ರೆಯಲ್ಲಿಯೇ ನೋಡಿಕೊಳ್ಳುವ ಸಾಧ್ಯತೆ ಇದೆ ಎಂದು ಪಕ್ಷದ ಮೂಲಗಳು ಹೇಳಿವೆ.

ಇದಕ್ಕೂ ಮೊದಲು ಕಿಡ್ನಿ ಹಾಗೂ ಮಧುಮೇಹ ಸಮಸ್ಯೆ ಉಲ್ಬಣಿಸಿರುವ ಹಿನ್ನೆಲೆಯಲ್ಲಿ ಜಯಾ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಸಿಂಗಾಪುರಕ್ಕೆ ಕರೆದೊಯ್ಯುವ ಸಿದ್ಧತೆ ನಡೆಯುತ್ತಿದೆ ಎಂದು ಸೋಷಿಯಲ್‌ ಮೀಡಿಯಾಗಳಲ್ಲಿ ವರದಿಯಾಗಿತ್ತು.

ಎಲ್ಲೆಡೆ ಪ್ರಾರ್ಥನೆ:

'ಅಮ್ಮ'ನ ಚೇತರಿಕೆಗಾಗಿ ತಮಿಳುನಾಡಿನಾದ್ಯಂತ ಅಭಿಮಾನಿಗಳು ದೇವಸ್ಥಾನಗಳಲ್ಲಿ ಪ್ರಾರ್ಥನೆ ನಡೆಸುತ್ತಿದ್ದರೆ, ಆಸ್ಪತ್ರೆಯ ಹೊರಗೆ ನೂರಾರು ಬೆಂಬಲಿಗರು ಜಮಾಯಿಸಿದ್ದಾರೆ. ಹೀಗಾಗಿ ಪೊಲೀಸ್‌ ಭದ್ರತೆ ಬಿಗಿಗೊಳಿಸಲಾಗಿದೆ. ಪ್ರಧಾನಿ ಮೋದಿ ಸೇರಿದಂತೆ ಅನೇಕ ಗಣ್ಯರು ಜಯಾ ಬೇಗ ಗುಣಮುಖರಾಗಲೆಂದು ಹಾರೈಸಿ ಶುಕ್ರವಾರ ಸಂದೇಶ ಕಳುಹಿಸಿದ್ದರು.

English summary: Tamil Nadu Chief Minister J Jayalalithaa, who had been admitted to hospital on Thursday, would be flown to Singapore for treatment, reports said on Saturday. However, the AIADMK was quick to deny the reports.


Viewing all articles
Browse latest Browse all 6795

Trending Articles


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ಮಲಗಿದ್ದ ಮಹಿಳೆ ಬೆದರಿಸಿ ಬೆತ್ತಲೆ ಫೋಟೋ ತೆಗೆದ ಕಳ್ಳ


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಬಿಗ್‌ ನ್ಯೂಸ್: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ -‌ ಈ ಬಾರಿಯೂ...


 ಕೌಟುಂಬಿಕ ಕಲಹ ಹಿನ್ನೆಲೆ; ಬುದ್ದಿವಾದ ಹೇಳಿದ ತಂಗಿಯನ್ನೇ ಕೊಂದ ಅಣ್ಣ…


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ವಚನಗಳಿಂದ ಸಂಗೀತ ಲೋಕ ಶ್ರೀಮಂತ


Final chapter from Krishnamacharya's Yogasanagalu Part II Pranayam. Plus the...


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಆಲೋಚನೆಗೂ ಕ್ರಿಯೆಯಷ್ಟೇ ಮಹತ್ವವಿದೆ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


‘ವ್ಯಾಪಾರ’ದಲ್ಲಿ ವೃದ್ಧಿಯಾಗಲು ಹೀಗೆ ಮಾಡಿ….


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>