Quantcast
Channel: VijayKarnataka
Viewing all articles
Browse latest Browse all 6795

ಹಠಮಾರಿ ಕರ್ನಾಟಕ ಎಂದ ಪುದುಚೆರಿ ಸಿಎಂ

$
0
0

ಪುದುಚೆರಿ: ತಮಿಳುನಾಡು ಮತ್ತು ಪುದುಚೆರಿಗೆ ಕಾವೇರಿ ನೀರು ಬಿಡುಗಡೆ ಮಾಡದೇ ಇರುವ ಕರ್ನಾಟಕ ಸರಕಾರದ ತೀರ್ಮಾನ ತೀರಾ ಹಠಮಾರಿತನದ್ದು ಎಂದು ಪುದುಚೆರಿ ಮುಖ್ಯಮಂತ್ರಿ ವಿ.ನಾರಾಯಣ ಸ್ವಾಮಿ ಟೀಕಿಸಿದ್ದಾರೆ.

ಸುಪ್ರೀಂಕೋರ್ಟ್‌ ಆದೇಶವನ್ನು ತಿರಸ್ಕರಿಸುವ ಈ ನಿರ್ಧಾರ ನ್ಯಾಯಾಂಗ ಮತ್ತು ಶಾಸಕಾಂಗದ ನಡುವಿನ ಸಂಘರ್ಷಕ್ಕೆ ದಾರಿ ಮಾಡುತ್ತದೆ ಎಂದಿದ್ದಾರೆ.

'ತಮಿಳುನಾಡು ಮತ್ತು ಪುದುಚೆರಿಯ ರೈತರ ಸಾಂಬಾ ಬೆಳೆಗೆ ನೀರಿನ ಅಗತ್ಯವಿದೆ. ಇಂತಹ ಸಂದರ್ಭದಲ್ಲಿ ಕಾವೇರಿ ನೀರು ಬಿಡುಗಡೆ ಮಾಡದೇ ಇರುವ ಕರ್ನಾಟಕ ವಿಧಾನ ಸಭೆಯ ನಿರ್ಧಾರ ಹಠಮಾರಿತನದ್ದು, ಅದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ,'ಎಂದು ಅವರು ಹೇಳಿದ್ದಾರೆ.

'ಕರ್ನಾಟಕ ಸರಕಾರ ಸುಪ್ರೀಂಕೋರ್ಟ್‌ ಆದೇಶವನ್ನು ಗೌರವಿಸಬೇಕು ಎಂದ ನಾರಾಯಣ ಸ್ವಾಮಿ, ಬೆಳೆಗೆ ನೀರು ಸಿಗದೇ ಇದ್ದರೆ ರೈತರು ಸಂಕಷ್ಟಕ್ಕೆ ಸಿಲುಕುತ್ತಾರೆ. ಕಾರೈಕಲ್‌ ವಲಯದಲ್ಲಿನ ಬೆಳೆಗೆ ನೀರು ಅತ್ಯಗತ್ಯವಾಗಿದೆ. ಅದನ್ನು ಕರ್ನಾಟಕ ಮನಗಾಣಬೇಕು,' ಎಂದಿದ್ದಾರೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>