Quantcast
Channel: VijayKarnataka
Viewing all articles
Browse latest Browse all 6795

ಪ್ರತ್ಯೇಕ ಎನ್‌ಕೌಂಟರ್‌: ಮೂವರು ನಕ್ಸಲರ ಹತ್ಯೆ

$
0
0

ರಾಯಪುರ: ಛತ್ತೀಸ್‌ಗಢದ ಬಸ್ತಾರ ವಿಭಾಗದಲ್ಲಿ ನಡೆದ ಎರಡು ಪ್ರತ್ಯೇಕ ಘಟನೆಗಳಲ್ಲಿ ಮೂವರು ನಕ್ಸಲರನ್ನು ಭದ್ರತಾ ಪಡೆಗಳು ಹೊಡೆದುರುಳಿಸಿದ್ದು, ಅವರ ಬಳಿಯಿದ್ದ ಶಸ್ತ್ರಾಸ್ತ್ರಗಳನ್ನು ವಶಕ್ಕೆ ಪಡೆದಿವೆ.

ಬಸ್ತಾರನ ಬರ್ಗಾಮ್‌ ಠಾಣೆಯ ವ್ಯಾಪ್ತಿಗೆ ಒಳಪಡುವ ಸಂಗ್ವೀಲ್‌ ಅರಣ್ಯ ಪ್ರದೇಶದಲ್ಲಿ ಶನಿವಾರ ಬೆಳಗಿನ ಜಾವ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಮೃತಪಟ್ಟಿದ್ದಾರೆ.

ಮಾವೋ ನಾಯಕನೊಬ್ಬನನ್ನು ಸ್ವಾಗತಿಸಲು ನಕ್ಸಲರ ತಂಡ ಇಂದ್ರಾವತಿ ನದಿಯನ್ನು ದಾಟುತ್ತಿದೆ ಎಂಬ ಸುಳಿವಿನ ಜಾಡು ಹಿಡಿದ ಜಿಲ್ಲಾ ಮೀಸಲು ಪಡೆ, ಛತ್ತಿಸಗಢ ಸಶಸ್ತ್ರ ಪಡೆ ಕಾರ್ಯಾಚರಣೆ ನಡೆಸಿವೆ. ಸುಮಾರು ಒಂದು ತಾಸು ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಮೃತಪಟ್ಟು, ಉಳಿದ ನಕ್ಸಲರು ಕಾಡಿನಲ್ಲಿ ತಪ್ಪಿಸಿಕೊಂಡರು.

ಕಾರ್ಯಾಚರಣೆಯ ನಂತರ 12 ಬೊರ್‌ ರೈಫಲ್‌ಗಳು ಸೇರಿದಂತೆ ಅಪಾರ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ. 2015 ರ ಅಕ್ಟೋಬರ್‌ನಲ್ಲಿ ಪೊಲೀಸ್‌ ಪೇದೆ ಮೇಲೆ ದಾಳಿ ನಡೆಸಿದ್ದು ಇದೇ ತಂಡ ಎಂದು ಪೊಲೀಸರು ಶಂಕಿಸಿದ್ದಾರೆ.

ಬಿಜಾಪುರ ಜಿಲ್ಲೆಯ ಬೆದ್ರೆ ಪೊಲೀಸ್‌ ಠಾಣೆ ವ್ಯಾಪ್ತಿಯ ರೆಂಗವಾಯಾ ಗ್ರಾಮದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ನಲ್ಲಿ ಇನ್ನೊಬ್ಬ ನಕ್ಸಲ್‌ ಹತನಾಗಿದ್ದಾನೆ. ಕಾಡಿನಲ್ಲಿ ಅಡಗಿದ್ದ ನಕ್ಸಲರು ಏಕಾಏಕಿ ಪೊಲೀಸರ ಮೇಲೆ ಗುಂಡಿನ ದಾಳಿ ಪ್ರಾರಂಭಿಸಿದ್ದಾರೆ. ಪ್ರತಿದಾಳಿಯಲ್ಲಿ ಒಬ್ಬ ಮೃತಪಟ್ಟಿದ್ದಾನೆ. ಉಳಿದವರು ಪಲಾಯನ ಮಾಡಿದ್ದಾರೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಶಿವಸೇನೆ ಬಿಗಿಪಟ್ಟು: ದೇಶ ಗೆದ್ದ ಬಿಜೆಪಿ ವಿಲವಿಲ


ಶುಭ ಫಲಕ್ಕಾಗಿ ಮನೆಯಲ್ಲಿ ಗಾಳಿ ಗಂಟೆ ಹಾಕುವ ಮುನ್ನ ಈ ವಿಚಾರ ತಿಳಿಯಿರಿ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>