Quantcast
Channel: VijayKarnataka
Viewing all articles
Browse latest Browse all 6795

ಮುಂದಿನ ಬಜೆಟ್‌ನಲ್ಲಿ ಅಡಕೆ ಮಂಡಳಿ ರಚನೆ ವಿಶ್ವಾಸ: ಐವನ್‌

$
0
0

ಮಂಗಳೂರು: ಅಡಕೆ ಬೆಳೆಗಳ ಹಿತದೃಷ್ಟಿಯಿಂದ ಅಡಕೆಗೆ ಒಂದು ಪ್ರತ್ಯೇಕ ಮಂಡಳಿ ಸ್ಥಾಪಿಸುವ ಕುರಿತಾಗಿ ಬಾಗಲಕೋಟೆಯ ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಕುಲಪತಿ ಡಾ.ಡಿ.ಎಲ್‌.ಮಹೇಶ್ವರ್‌ ಅಧ್ಯಕ್ಷತೆಯಲ್ಲಿ ಸರಕಾರಕ್ಕೆ ವರದಿ ಸಲ್ಲಿಸಲಾಗಿದ್ದು, ಮುಂದಿನ ಬಜೆಟ್‌ನಲ್ಲಿ ಸರಕಾರ ಅಡಕೆ ಮಂಡಳಿ ರಚನೆಯ ಘೋಷಣೆ ಮಾಡುವ ವಿಶ್ವಾಸ ಇದೆ ಎಂದು ವಿಧಾನ ಪರಿಷತ್‌ ಮುಖ್ಯ ಸಚೇತಕ ಐವನ್‌ ಡಿಸೋಜ ತಿಳಿಸಿದ್ದಾರೆ.

ನಗರದ ಪಾಲಿಕೆ ಕಚೇರಿಯಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಎರಡು ವರ್ಷಗಳ ಹಿಂದೆ ವಿಧಾನ ಪರಿಷತ್‌ನಲ್ಲಿ ಅಡಕೆ ಮಂಡಳಿ ರಚನೆ ಬಗ್ಗೆ ಪ್ರಶ್ನೆ ಕೇಳಿದ್ದೆ. ಇದಕ್ಕೆ ಪೂರಕವಾಗಿ ಸರಕಾರ ತಜ್ಞರ ಸಮಿತಿ ರಚಿಸಿದ್ದು, ಇದೀಗ ಸಮಿತಿ ಮಂಡಳಿ ರಚನೆ ಮಾಡುವ ಬಗ್ಗೆ ಪೂರಕವಾಗಿಯೇ ಸರಕಾರಕ್ಕೆ ವರದಿ ನೀಡಿದೆ. ಇನ್ನು ಸರಕಾರ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕು. ಮುಂದಿನ ಬಜೆಟ್‌ನಲ್ಲಿ ಇದನ್ನು ಘೋಷಿಸುವಂತೆ ಮುಖ್ಯಮಂತ್ರಿಯಲ್ಲಿ ಮನವಿ ಮಾಡಲಾಗುವುದು ಎಂದು ಅವರು ತಿಳಿಸಿದರು.

ತಜ್ಞರ ಸಮಿತಿ ವರದಿ ನೀಡಿದ ಸಂದರ್ಭ ಮಂಡಳಿ ರಚನೆ ಮಾಡುವ ಬಗ್ಗೆ ಪರಿಶೀನೆ ಮಾಡುವುದಾಗಿ ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ. ಮಂಡಳಿ ರಚನೆ ಜತೆಗೆ ಇದಕ್ಕೆ ದೊಡ್ಡ ಮೊತ್ತದ ನಿಧಿ ಕೂಡಾ ಸರಕಾರ ಒದಗಿಸಬೇಕು. ಅಡಕೆ ಮಂಡಳಿ ರಚನೆಯಾದಲ್ಲಿ ಬೆಳೆಗಾರರಿಗೆ ಎಲ್ಲ ರೀತಿಯಲ್ಲೂ ನೆರವಾಗಲಿದೆ. ಅಡಕೆಗೆ ವಿಶ್ವ ಮಾರುಕಟ್ಟೆಯನ್ನು ಒದಗಿಸುವುದು, ಆಮದು ಪ್ರಮಾಣ ನಿರ್ಬಂಧಿಸುವುದು, ಬೆಲೆ ಕುಸಿತವಾದಾಗ ರೈತರ ನೆರವಿಗೆ ಬರುವುದು ಸೇರಿದಂತೆ ಬೆಳೆಗಾರರಿಗೆ ಹಿತ ಕಾಪಾಡುವ ಕೆಲಸವನ್ನು ಮಂಡಳಿ ಮಾಡಲಿದೆ ಎಂದು ಅವರು ತಿಳಿಸಿದರು.

ಈಗ ರಾಜ್ಯ ಸರಕಾರ ಮಂಡಳಿ ರಚನೆ ನಿರ್ಧಾರ ಕೈಗೊಂಡರೂ ದೇಶದ ಎಲ್ಲ ರಾಜ್ಯಗಳಲ್ಲಿರುವ ಅಡಕೆ ಬೆಳೆಗಾರರ ಹಿತಾಸಕ್ತಿಯಿಂದ ಕೇಂದ್ರ ಸರಕಾರವೇ ಮುಂದೆ ಬಂದು ಅಡಕೆ ಮಂಡಳಿ ರಚನೆ ಮಾಡಬೇಕು. ಈ ನಿಟ್ಟಿನಲ್ಲಿ ರಾಜ್ಯದ ತೋಟಗಾರಿಕೆ ಸಚಿವರಿಗೆ ಮನವಿ ಮಾಡಿದ್ದೇನೆ. ಅವರು ಕೇಂದ್ರದ ಕೃಷಿ ಇಲಾಖೆ ಸಚಿವರಿಗೆ ಈ ಬಗ್ಗೆ ಮನವರಿಕೆ ಮಾಡುವ ಭರವಸೆ ನೀಡಿದ್ದಾರೆ. ಕೇಂದ್ರ ಸರಕಾರವೇ ಮಂಡಳಿ ರಚನೆ ಮಾಡಿದರೆ ಇಡೀ ದೇಶದ ಅಡಕೆ ಬೆಳೆಗಾರರಿಗೆ ನೆರವಾಗಲಿದೆ ಎಂದು ಐವನ್‌ ಡಿಸೋಜ ತಿಳಿಸಿದರು.

ದೇಶದಲ್ಲಿ ಅಡಕೆ ಬೆಳೆಯುವ ರಾಜ್ಯಗಳ ಪೈಕಿ ಕರ್ನಾಟಕ ಮುಂಚೂಣಿಯಲ್ಲಿದೆ. ಸಣ್ಣ ಮತ್ತು ಅತಿ ಸಣ್ಣ ಹುಡುವಳಿದಾರರೇ ಅಡಕೆ ಬೆಳೆಯನ್ನು ಹೆಚ್ಚಾಗಿ ಬೆಳೆಯುತ್ತಿದ್ದಾರೆ. ಈ ನಿಟ್ಟಿನಲ್ಲಿ ಬೆಳೆಗಾರರ ನೆರವಿಗೆ ನಿಲ್ಲುವುದು ಸರಕಾರದ ಕರ್ತವ್ಯ. ಅಡಕೆ ಮಂಡಳಿ ರಚನೆಯಾದಲ್ಲಿ ಬೆಳೆಗಾರರ ಹಿತ ಕಾಪಾಡಲು ಖಂಡಿತಾ ಸಾಧ್ಯವಿದೆ ಎಂದು ಅವರು ತಿಳಿಸಿದರು.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಶಿವಸೇನೆ ಬಿಗಿಪಟ್ಟು: ದೇಶ ಗೆದ್ದ ಬಿಜೆಪಿ ವಿಲವಿಲ


ಶುಭ ಫಲಕ್ಕಾಗಿ ಮನೆಯಲ್ಲಿ ಗಾಳಿ ಗಂಟೆ ಹಾಕುವ ಮುನ್ನ ಈ ವಿಚಾರ ತಿಳಿಯಿರಿ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>