Quantcast
Channel: VijayKarnataka
Viewing all articles
Browse latest Browse all 6795

ಕೃಷ್ಣಾ ನೀರು ಮರು ಹಂಚಿಕೆ: ಸುಪ್ರೀಂ ಮೊರೆ ಹೋದ ತೆಲಂಗಾಣ

$
0
0

ಹೊಸದಿಲ್ಲಿ: ಕೃಷ್ಣಾ ಕೊಳ್ಳದ ವ್ಯಾಪ್ತಿಯಲ್ಲಿನ ಶೇ.25ರಷ್ಟು ಜನಸಂಖ್ಯೆ ತೆಲಂಗಾಣದಲ್ಲಿದ್ದರೂ ರಾಜ್ಯಕ್ಕೆ ಶೇ.12ರಷ್ಟು ನೀರು ಮಾತ್ರ ಹಂಚಿಕೆಯಾಗಿದೆ. ಹೀಗಾಗಿ ಕೃಷ್ಣಾ ನದಿ ನೀರನ್ನು ಪಾಲುದಾರ ರಾಜ್ಯಗಳಲ್ಲಿ ನಡುವೆ ಮರು ಹಂಚಿಕೆ ಮಾಡಬೇಕು ಎಂದು ತೆಲಂಗಾಣ ಸುಪ್ರೀ ಕೋರ್ಟ್‌ ಎದುರು ಬೇಡಿಕೆ ಮಂಡಿಸಿದೆ.

ಆಂಧ್ರ ಪ್ರದೇಶ ವಿಭಜನೆಯಾಗಿ ಪ್ರತ್ಯೇಕ ತೆಲಂಗಾಣ ರಚನೆಯಾದ ನಂತರ ಆಂಧ್ರಪ್ರದೇಶ ಪುನರ್‌ವಿಂಗಡಣೆ ಕಾಯಿದೆ 89ರ ಪ್ರಕಾರ ಕೃಷ್ಣಾ ನೀರಿನ ಮರು ಹಂಚಿಕೆ ಕೋರಿ ತೆಲಂಗಾಣ ಸಲ್ಲಿಸಿದ ಅರ್ಜಿಯ ಮೇಲೆ ನ್ಯಾಯಮೂರ್ತಿಗಳಾದ ದೀಪಕ್‌ ಮಿಶ್ರಾ ಮತ್ತು ಅಮಿತಾವ್‌ ರಾವ್‌ ಅವರನ್ನೊಳಗೊಂಡ ನ್ಯಾಯಪೀಠ ಗುರುವಾರ ವಿಚಾರಣೆ ನಡೆಸಿತು.

ತೆಲಂಗಾಣದ ಈ ಅರ್ಜಿಯನ್ನು ಕೃಷ್ಣಾ ನ್ಯಾಯಾಧಿಕರಣ ಈಗಾಗಲೇ ತಿರಸ್ಕರಿಸಿದ್ದು, ಕೃಷ್ಣಾ ನದಿ ನೀರಿನ ಮರು ಹಂಚಿಕೆ ಸಾಧ್ಯವೇ ಇಲ್ಲ. ಈಗಾಗಲೇ ಆಂಧ್ರಪ್ರದೇಶಕ್ಕೆ ಹಂಚಿಕೆಯಾಗಿರುವ ನೀರಿನಲ್ಲೇ ಎರಡೂ ರಾಜ್ಯಗಳು ಹಂಚಿಕೆ ಮಾಡಿಕೊಳ್ಳಬೇಕೇ ಹೊರತು ಮರು ಹಂಚಿಕೆ ಅಸಾಧ್ಯ ಎಂದು ಅದು ಹೇಳಿದೆ.

ಈ ಹಿನ್ನೆಲೆಯಲ್ಲಿ ಕರ್ನಾಟಕದ ಪರ ವಾದ ಮಂಡಿಸಿದ ಹಿರಿಯ ನ್ಯಾಯವಾದಿ ಫಾಲಿ ನಾರಿಮನ್‌ ಅವರು, ಎರಡೂ ರಾಜ್ಯಗಳ ಅರ್ಜಿಯ ಮೇಲೆ ನ್ಯಾಯಾಧಿಕರಣ ಅಂತಿಮ ತೀರ್ಪು ಪ್ರಕಟಿಸಿದೆ. ಈ ಎರಡು ರಾಜ್ಯಗಳ ನಡುವಿನ ವಿವಾದದ ಕರ್ನಾಟಕಕ್ಕೆ ಸಂಬಂಧಿಸಿಲ್ಲ. ಹೀಗಾಗಿ ತೆಲಂಗಾಣದ ಬೇಡಿಕೆಯಲ್ಲಿ ಮಾನ್ಯ ಮಾಡಬಾರದು ಎಂದರು.

ತೆಲಂಗಾಣದ ಪರ ನ್ಯಾಯವಾದಿ ವೈದ್ಯನಾಥನ್‌, ಆಂಧ್ರ ಪ್ರದೇಶದ ಪರವಾಗಿ ನ್ಯಾಯವಾದಿ ಗಂಗೂಲಿ ವಾದ ಮಂಡನೆ ಮಾಡಿದರು. ವಿಚಾರಣೆಯನ್ನು ಜ.18ಕ್ಕೆ ಮುಂದೂಡಲಾಗಿದೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಶಿವಸೇನೆ ಬಿಗಿಪಟ್ಟು: ದೇಶ ಗೆದ್ದ ಬಿಜೆಪಿ ವಿಲವಿಲ


ಶುಭ ಫಲಕ್ಕಾಗಿ ಮನೆಯಲ್ಲಿ ಗಾಳಿ ಗಂಟೆ ಹಾಕುವ ಮುನ್ನ ಈ ವಿಚಾರ ತಿಳಿಯಿರಿ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>