Quantcast
Channel: VijayKarnataka
Viewing all articles
Browse latest Browse all 6795

ಸಾರ್ವಜನಿಕ ಶಿಕ್ಷಣ ಇಲಾಖೆ ಜತೆ ಪಿಯು ಮಂಡಳಿ ವಿಲೀನ

$
0
0

ಪಿಯು ಉಪನ್ಯಾಸಕರ ಸಂಘದ ವಿರೋಧ

ಶ್ರೀಕಾಂತ ಹುಣಸವಾಡಿ ಬೆಂಗಳೂರು

ಪ್ರೌಢಶಾಲೆ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಒಂದೇ ಆಡಳಿತ ಮತ್ತು ಕಾರ‍್ಯವ್ಯವಸ್ಥೆಯಡಿಗೆ ತರುವ ಉದ್ದೇಶದಿಂದ ಸರಕಾರ, ಸಾರ್ವಜನಿಕ ಶಿಕ್ಷಣ ಆಯುಕ್ತಾಲಯದ ಜೊತೆ ಪದವಿ ಪೂರ್ವ ಶಿಕ್ಷಣ ಇಲಾಖೆ ವಿಲೀನಗೊಳಿಸುವ ಪ್ರಕ್ರಿಯೆಯನ್ನು ಸದ್ದಿಲ್ಲದೆ ಆರಂಭಿಸಿದೆ.

ಯಾವ ರೀತಿ ವಿಲೀನ ಪ್ರಕ್ರಿಯೆ ನಡೆಸಬೇಕು, ಅದರಿಂದ ಆಗುವ ಸಾಧಕ -ಬಾಧಕಗಳ ಬಗ್ಗೆ ಅಧ್ಯಯನ ನಡೆಸಲು ಸಾರ್ವಜನಿಕ ಶಿಕ್ಷಣ ಇಲಾಖೆ ಪ್ರಧಾನ ಕಾರ‍್ಯದರ್ಶಿ ಅಧ್ಯಕ್ಷತೆಯಲ್ಲಿ ಉನ್ನತ ಮಟ್ಟದ ಸಮಿತಿ ರಚಿಸಲಾಗಿದೆ. ಪದವಿ ಪೂರ್ವ ಶಿಕ್ಷಣ ಇಲಾಖೆ ನಿರ್ದೇಶಕರು ಮತ್ತಿತರರು ಸಮಿತಿಯಲ್ಲಿದ್ದಾರೆ.

ಆ ಸಮಿತಿಯು ಶಿಕ್ಷಕರು ಮತ್ತು ಉಪನ್ಯಾಸಕರ ನಡುವಿನ ವೇತನ ಶ್ರೇಣಿ, ಅವರ ಸೇವಾ ಕ್ರಮ, ಸಮವಸ್ತ್ರ, ಆಡಳಿತ ವ್ಯವಸ್ಥೆ ಸೇರಿದಂತೆ ಹಲವು ಅಂಶಗಳ ಬಗ್ಗೆ ಅಧ್ಯಯನ ನಡೆಸುತ್ತಿದೆ. ಸಾರ್ವಜನಿಕ ಶಿಕ್ಷಣ ಇಲಾಖೆಯ ಹಿರಿಯ ಅಧಿಕಾರಿಗಳನ್ನೂ ಒಳಗೊಂಡಿರುವ ಸಮಿತಿ ಎಲ್ಲ ಆಯಾಮಗಳಿಂದ ಅಧ್ಯಯನ ನಡೆಸಿ ಸಮಗ್ರ ಸದ್ಯದಲ್ಲೇ ಸರಕಾರಕ್ಕೆ ವರದಿ ಸಲ್ಲಿಸಲಿದೆ. ಆನಂತರ ಸರಕಾರ ವಿಲೀನ ಪ್ರಕ್ರಿಯೆ ಕುರಿತು ಅಧಿಕೃತ ತೀರ್ಮಾನ ಕೈಗೊಳ್ಳಲಿದೆ.ಅದನ್ನು ಸಚಿವ ಸಂಪುಟ ಮುಂದಿಟ್ಟು ಅನುಮೋದನೆ ಪಡೆದು ಆನಂತರ ಕಾಯಿದೆ ರೂಪಿಸಿ ಕಾರ‍್ಯಗತಗೊಳಿಸಲಾಗುವುದು.ಬಹುತೇಕ ಮುಂದಿನ ಶೈಕ್ಷಣಿಕ ವರ್ಷದ ಆರಂಭದಲ್ಲಿ ಜಾರಿಗೊಳ್ಳುವ ಸಾಧ್ಯತೆಯಿದೆ.

ಏಕೆ ವಿಲೀನ? ಕೇಂದ್ರ ಸರಕಾರ ಸರ್ವ ಶಿಕ್ಷಣ ಅಭಿಯಾನ (ಎಸ್‌ಎಸ್‌ಎ) ಮತ್ತು ರಾಷ್ಟ್ರೀಯ ಮಾಧ್ಯಮಿಕ ಶಿಕ್ಷಣ ಅಭಿಯಾನ(ಆರ್‌ಎಂಎಸ್‌ಎ)ಅಡಿ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣಕ್ಕೆ ಮಾತ್ರ ಆರ್ಥಿಕ ನೆರವು ನೀಡಲಿದ್ದು,ಪದವಿ ಪೂರ್ವ ಶಿಕ್ಷಣಕ್ಕೆ ನೀಡುವುದಿಲ್ಲ. ಹಾಗಾಗಿ ಬಹುತೇಕ ರಾಜ್ಯಗಳು 1ರಿಂದ 5, 6ರಿಂದ 8 ಮತ್ತು 9ರಿಂದ 12ನೇ ತರಗತಿವರೆಗಿನ ಶಿಕ್ಷಣವನ್ನು ಮೂರು ವಿಭಾಗಗಳನ್ನಾಗಿ ಮಾಡಿ ಅವುಗಳನ್ನು ಒಂದೇ ಆಯುಕ್ತಾಲಯದಡಿ ತಂದು ಕೇಂದ್ರದಿಂದ ಅನುದಾನವನ್ನು ಪಡೆಯುತ್ತಿವೆ.ಅದೇ ಮಾದರಿ ಅಳವಡಿಸುವ ಬಗ್ಗೆ ರಾಜ್ಯ ಸರಕಾರ 2016-17ನೇ ಸಾಲಿನ ಬಜೆಟ್‌ನಲ್ಲೇ ಪ್ರಕಟಿಸಿತ್ತು.ಆ ಪ್ರಕ್ರಿಯೆ ಇದೀಗ ಚಾಲನೆ ನೀಡಲಾಗಿದೆ.

ಮುಂದಿನ ವರ್ಷಗಳಲ್ಲಿ 1ರಿಂದ 5, 6 ರಿಂದ 8 ಮತ್ತು 9ರಿಂದ 12ನೇ ತರಗತಿವರೆಗಿನ ಶಿಕ್ಷಣವನ್ನು ಮೂರು ವಿಭಾಗಗಳನ್ನಾಗಿ ಮಾಡಿ ಆ ಮೂಲಕ ಪ್ರೌಢಶಾಲೆ ಮತ್ತು ಪದವಿ ಪೂರ್ವ ಶಿಕ್ಷಣವನ್ನು ಒಂದೇ ನೆಲೆಗೆ ತರಲಾಗುವುದು. ಒಂದೇ ಆಯುಕ್ತಾಲಯದಲ್ಲಿ ಆಡಳಿತ ನೋಡಿಕೊಳ್ಳಲು ಒಬ್ಬ ನಿರ್ದೇಶಕರು, ಪರೀಕ್ಷೆ, ಮೌಲ್ಯಮಾಪನ ಮತ್ತಿತರ ವಿಷಯಗಳನ್ನು ನೋಡಿಕೊಳ್ಳಲು ಮತೊಬ್ಬ ಆಯುಕ್ತರನ್ನು ನೇಮಕ ಮಾಡುವ ಪ್ರಸ್ತಾಪವಿದೆ.

ಸಿಬ್ಬಂದಿ ವಿರೋಧ: ಆದರೆ ಪದವಿ ಪೂರ್ವ ಶಿಕ್ಷಣ ಇಲಾಖೆ ಸಂಯೋಜಿಸುವ ಕೆಲಸವನ್ನು ಯಾವುದೇ ತಯಾರಿ ಇಲ್ಲದೆ ಏಕಾಏಕಿ ಆರಂಭಿಸಿರುವ ಬಗ್ಗೆ ಇಲಾಖೆಯ ಸಿಬ್ಬಂದಿ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದೇ 18ರಂದು ಕರ್ನಾಟಕ ರಾಜ್ಯ ಪಿಯು ಕಾಲೇಜುಗಳ ಉಪನ್ಯಾಸಕರ ಸಂಘ ಸಭೆ ಕರೆದಿದ್ದು, ನಿರ್ಧಾರ ವಿರೋಧಿಸುವ ಹೋರಾಟದ ರೂಪುರೇಷೆಗಳ ಬಗ್ಗೆ ಚರ್ಚೆ ನಡೆಯಲಿದೆ. ಅಲ್ಲದೆ, ಸರಕಾರದ ಈ ನಿರ್ಧಾರ ಶೈಕ್ಷಣಿಕ ಗುಣಮಟ್ಟದ ಮೇಲೆ ಹಾಗೂ ಆಡಳಿತದ ಮೇಲೆ ಗಂಭೀರ ಪರಿಣಾಮ ಬೀರಲಿದೆ ಎಂದು ಇಲಾಖೆಯ ಅಧಿಕಾರಿಗಳು ಅಭಿಪ್ರಾಯಪಟ್ಟಿದ್ದಾರೆ.

-----

ಕೋಟ್‌

ಪದವಿ ಪೂರ್ವ ಶಿಕ್ಷಣ ಹಾಗೂ ಪ್ರೌಢಶಾಲೆಯನ್ನು ಸಂಯೋಜಿಸುವ ಪ್ರಸ್ತಾವ ಸರಕಾರದ ಹಂತದಲ್ಲಿದ್ದು, ಆ ಬಗ್ಗೆ ಸಮಗ್ರ ಅಧ್ಯಯನ ನಡೆಸಲು ಸಮಿತಿ ರಚನೆ ಮಾಡಲಾಗಿದೆ. ಸಮಿತಿ ವರದಿ ನೀಡಿದ ಬಳಿಕ ಸರಕಾರದ ಮಟ್ಟದಲ್ಲಿ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು.

ಸಿ.ಶಿಖಾ, ನಿರ್ದೇಶಕರು, ಪದವಿ ಪೂರ್ವ ಶಿಕ್ಷಣ ಇಲಾಖೆ

---------

ವಿಲೀನಕ್ಕೆ ಉಪನ್ಯಾಸಕರ ವಿರೋಧ

ಪದವಿ ಪೂರ್ವ ಶಿಕ್ಷಣ ಇಲಾಖೆಯನ್ನು ಸಾರ್ವಜನಿಕ ಶಿಕ್ಷಣ ಇಲಾಖೆ ಜೊತೆ ವಿಲೀನಗೊಳಿಸುವ ನಿರ್ಧಾರವನ್ನು ವಿರೋಧಿಸಿ ಹೋರಾಟ ನಡೆಸಲಾಗುವುದು. ಆ ಪ್ರಕ್ರಿಯೆ ಆರಂಭಿಸುವ ಮುನ್ನ ಕನಿಷ್ಠ ಸೌಜನ್ಯಕ್ಕಾದರೂ ಸರಕಾರ ಇಲಾಖೆ ಸಿಬ್ಬಂದಿ ಹಾಗೂ ಸಂಘದ ಪ್ರತಿನಿಧಿಗಳ ಜೊತೆ ಸಮಾಲೋಚನೆ ನಡೆಸಬೇಕಿತ್ತು.

ತಿಮ್ಮಯ್ಯ ಪುರ್ಲೆ, ಅಧ್ಯಕ್ಷರು. ಕರ್ನಾಟಕ ರಾಜ್ಯ ಪಿ ಯು ಕಾಲೇಜುಗಳ ಉಪನ್ಯಾಸಕರ ಸಂಘ

------------



Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಮಲಗಿದ್ದ ಮಹಿಳೆ ಬೆದರಿಸಿ ಬೆತ್ತಲೆ ಫೋಟೋ ತೆಗೆದ ಕಳ್ಳ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


‘ವ್ಯಾಪಾರ’ದಲ್ಲಿ ವೃದ್ಧಿಯಾಗಲು ಹೀಗೆ ಮಾಡಿ….


ಅಪ್ಪ ಅಮ್ಮ ಬೈಯ್ತಾರೆ ಅಂತ ಬೆಂಗಳೂರಿಂದ ಚಳ್ಳಕೆರೆಗೆ ಹೋದ ಮಕ್ಕಳು


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


Namaskāra नमस्कार (salutation)


ತುಳು ತೆರೆಗೆ ಸೋನಿಯಾ ಎಂಟ್ರಿ