Quantcast
Channel: VijayKarnataka
Viewing all articles
Browse latest Browse all 6795

ಮಿತಿ ಇಳಿಕೆಗೆ ವಿನಿಮಯ ವಿಂಡೊ ದುರ್ಬಳಕೆ ಕಾರಣ: ಜೇಟ್ಲಿ

$
0
0

ಹೊಸದಿಲ್ಲಿ: ಬ್ಯಾಂಕುಗಳಲ್ಲಿ ಹಳೆ ನೋಟುಗಳ ವಿನಿಮಯ ಮಿತಿಯನ್ನು 4500 ರೂ.ಗಳಿಂದ 2000 ರೂ.ಗಳಿಗೆ ಇಳಿಸಲು ವಿನಿಮಯ ಸೌಲಭ್ಯದ ದುರ್ಬಳಕೆ ಕಾರಣ ಎಂದು ಕೇಂದ್ರ ಹಣಕಾಸು ಸಚಿವ ಅರುಣ್‌ ಜೇಟ್ಲಿ ಹೇಳಿದ್ದಾರೆ.

ನಿತ್ಯ 4500 ರೂ. ಮೊತ್ತದ ಹಳೆ ನೋಟುಗಳನ್ನು ಹೊಸ ಕರೆನ್ಸಿಗೆ ವಿನಿಮಯ ಮಾಡಿಕೊಳ್ಳುವ ಸೌಲಭ್ಯವನ್ನು ಕಾಳಧನಿಕರು ತಮ್ಮಲ್ಲಿನ ಅಕ್ರಮ ಸಂಪತ್ತನ್ನು ಸಕ್ರಮಗೊಳಿಸಲು ದುರುಪಯೋಗಪಡಿಸಿಕೊಳ್ಳುತ್ತಿದ್ದುದು ಸರಕಾರದ ಗಮನಕ್ಕೆ ಬಂದಿತ್ತು. ಇದನ್ನು ಹೀಗೆಯೇ ಮುಂದುವರಿಯಲು ಬಿಟ್ಟಿದ್ದರೆ ನೋಟು ರದ್ದು ನಿರ್ಧಾರದ ಹಿಂದಿನ ಉದ್ದೇಶ ವ್ಯರ್ಥವಾಗುತ್ತಿತ್ತು. ಆದ್ದರಿಂದ ವಿನಿಮಯ ಮಿತಿಯನ್ನು ಕಡಿತಗೊಳಿಸುವ ನಿರ್ಣಯವನ್ನು ಅನಿವಾರ‍್ಯವಾಗಿ ಕೈಗೊಳ್ಳಬೇಕಾಯಿತು ಎಂದು ಜೇಟ್ಲಿ ವಿವರಿಸಿದ್ದಾರೆ.

500, 1000 ರೂ. ಮುಖಬೆಲೆಯ ನೋಟುಗಳನ್ನು ವಿನಿಮಯ ಮಾಡುವ ಬೃಹತ್‌ ಕಾರಾರ‍ಯಚರಣೆ ಶೀಘ್ರವೇ ಮುಕ್ತಾಯಗೊಳ್ಳಲಿದ್ದು, ಆ ಬಳಿಕ ಬ್ಯಾಂಕ್‌ ಮತ್ತು ಎಟಿಎಂಗಳಿಂದ ಹಣ ತೆಗೆಯುವ ಮಿತಿಯನ್ನು ಸಡಿಲಿಸಲಾಗುತ್ತದೆ ಎಂದು ಸಚಿವರು ಭರವಸೆ ನೀಡಿದ್ದಾರೆ.

ನೋಟು ರದ್ದು ವಾಪಸ್‌ ಇಲ್ಲ

ಯಾರು ಎಷ್ಟೇ ಒತ್ತಾಯ ಮಾಡಿದರೂ ನೋಟು ರದ್ದು ನಿರ್ಧಾರವನ್ನು ವಾಪಸ್‌ ಪಡೆಯುವ ಪ್ರಶ್ನೆಯೇ ಇಲ್ಲ. ರಾಜಕೀಯ ವ್ಯವಸ್ಥೆ ಮತ್ತು ಅರ್ಥವ್ಯವಸ್ಥೆಯನ್ನು ಸ್ವಚ್ಛಗೊಳಿಸುವ ಉದ್ದೇಶದಿಂದ ಪ್ರಧಾನಿ ಮೋದಿ ಈ ದಿಟ್ಟ ನಿರ್ಧಾರ ಕೈಗೊಂಡಿದ್ದಾರೆ. ತನ್ನ ನಿಲುವಿಗೆ ಸರಕಾರ ಕಟಿಬದ್ಧವಾಗಿದೆ ಎಂದು ಜೇಟ್ಲಿ ಸ್ಪಷ್ಟಪಡಿಸಿದರು.



Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


‘ಬಾಹುಬಲಿ’ಅಭಿಮಾನಿಗಳಿಗೆ ಗುಡ್ ನ್ಯೂಸ್ ಸುದ್ದಿ ! ಬರ್ತಿದೆ ‘ಪಾರ್ಟ್-3’


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>