Quantcast
Channel: VijayKarnataka
Viewing all articles
Browse latest Browse all 6795

ಅಕ್ರಮ ಗಣಿಗಾರಿಕೆ: ಕೃಷ್ಣ, ಎಚ್‌ಡಿಕೆಗೆ ರಿಲೀಫ್‌; ಸಂಕಷ್ಟದಲ್ಲಿ ಧರಂ

$
0
0

ಅಕ್ರಮ ಗಣಿಗಾರಿಕೆ: ಕೃಷ್ಣ, ಎಚ್‌ಡಿಕೆಗೆ ರಿಲೀಫ್‌; ಸಂಕಷ್ಟದಲ್ಲಿ ಧರಂ

ಹೊಸದಿಲ್ಲಿ: ಅಕ್ರಮ ಗಣಿಗಾರಿಕೆ ಮತ್ತು ಅದಿರು ಸಾಗಣೆಗೆ ಅನುಮತಿ ನೀಡಿದ ಆರೋಪ ಎದುರಿಸುತ್ತಿದ್ದ ರಾಜ್ಯದ ಇಬ್ಬರು ಮಾಜಿ ಮುಖ್ಯಮಂತ್ರಿಗಳಿಗೆ ಸುಪ್ರೀಂ ಕೋರ್ಟ್‌ನಿಂದ ರಿಲೀಫ್‌ ಸಿಕ್ಕಿದೆ. ಇದೇ ಪ್ರಕರಣದಲ್ಲಿ ಮತ್ತೊಬ್ಬ ಮಾಜಿ ಸಿಎಂಗೆ ಸಂಕಷ್ಟ ಮುಂದುವರಿದಿದೆ.

ಬುಧವಾರ ಪ್ರಕರಣದ ವಿಚಾರಣೆ ನಡೆಸಿದ ನ್ಯಾ.ಪಿನಾಕಿ ಚಂದ್ರ ಘೋಷ್‌ ಮತ್ತು ನ್ಯಾ.ಅಶೋಕ್‌ ಭೂಷಣ್‌ ಅವರನ್ನೊಳಗೊಂಡ ಪೀಠ, ಅರಣ್ಯ ಭೂಮಿಯಲ್ಲಿ ಗಣಿಗಾರಿಕೆಗೆ ಅನುಮತಿ ನೀಡಿದ ಆರೋಪ ಎದುರಿಸುತ್ತಿದ್ದ ಎಸ್‌.ಎಂ.ಕೃಷ್ಣ ಮತ್ತು ಜಂತಕಲ್‌ ಎಂಟರ್‌ಪ್ರೈಸಸ್‌ ಮತ್ತು ಸಾಯಿ ವೆಂಕಟೇಶ್ವರ್‌ ಮಿನರಲ್ಸ್‌ಗೆ ಸಹಾಯ ಮಾಡಿದ ಆರೋಪ ಎದುರಿಸುತ್ತಿದ್ದ ಎಚ್‌.ಡಿ.ಕುಮಾರಸ್ವಾಮಿ ವಿರುದ್ಧದ ತನಿಖೆಗೆ ಇರುವ ತಡೆಯಾಜ್ಞೆಯನ್ನು ಮುಂದುವರಿಸಿತು.

ಆದರೆ, ಅಕ್ರಮವಾಗಿ ಗಣಿಗಾರಿಕೆ ಮಾಡಿದ ಅದಿರನ್ನು ಸಾಗಿಸಲು ಅನುಮತಿ ನೀಡಿದ್ದಕ್ಕಾಗಿ ಧರಂಸಿಂಗ್‌ ಮತ್ತು ಇನ್ನಿತರ ಎಂಟು ಅಧಿಕಾರಿಗಳ ವಿರುದ್ಧದ ತನಿಖೆಗೆ ನ್ಯಾಯಾಲಯ ಹಸಿರು ನಿಶಾನೆ ತೋರಿತು.

ಅಧಿಕಾರಿಗಳಾದ ಎಂ.ಬಸಪ್ಪ ರೆಡ್ಡಿ, ಎಲ್‌.ಎಂ.ಚಿದಾನಂದಯ್ಯ, ಮಹೇಂದ್ರ ಜೈನ್‌, ಕೆ.ಎಸ್‌.ಮಂಜುನಾಥ್‌, ಜೀಜಾ ಹರಿಸಿಂಗ್‌, ವಿ.ಉಮೇಶ್‌, ಐ.ಆರ್‌.ಪೆರುಮಾಳ್‌, ಎಂ.ರಾಮಪ್ಪ ಅವರ ವಿರುದ್ಧದ ಆರೋಪಗಳ ಬಗ್ಗೆಯೂ ತನಿಖೆ ಮುಂದುವರಿಯಲಿದೆ.

ಮಾಜಿ ಸಿಎಂ ಧರಂಸಿಂಗ್‌ ತಮ್ಮ ಅಧಿಕಾರಾವಧಿಯಲ್ಲಿ ಅಕ್ರಮ ಅದಿರು ಸಾಗಣೆಗೆ ಅವಕಾಶ ನೀಡುವ ಮೂಲಕ 23 ಕೋಟಿ ರೂಪಾಯಿ ಹಗರಣದಲ್ಲಿ ಭಾಗಿಯಾಗಿದ್ದರು ಎಂದು ಆರೋಪಿಸಲಾಗಿದೆ.

ಎಸ್‌.ಎಂ.ಕೃಷ್ಣ ಪರ ವಾದಿಸಿದ ಹಿರಿಯ ನ್ಯಾಯವಾದಿ ಜೈದೀಪ್‌ ಗುಪ್ತಾ, ಅರಣ್ಯ ಭೂಮಿಯಲ್ಲಿ ಗಣಿಗಾರಿಕೆಗೆ ಅವಕಾಶ ನೀಡುವುದು ರಾಜ್ಯ ಸರಕಾರದ ವ್ಯಾಪ್ತಿಯಲ್ಲಿಲ್ಲ, ಅದು ಕೇಂದ್ರ ಸರಕಾರದ ಅಧಿಕಾರ. ಈ ವಿಷಯದ ಬಗ್ಗೆ ತೀರ್ಪು ನೀಡುವಾಗ ರಾಜ್ಯ ಹೈಕೋರ್ಟ್‌ ಲೋಪವೆಸಗಿದೆ ಎಂದು ವಾದಿಸಿದರು. ಈ ವಾದವನ್ನು ಪರಿಗಣಿಸಿ 2002ರ ಡಿಸೆಂಬರ್‌ 12 ರಂದು ನಡೆದ ಸಚಿವ ಸಂಪುಟ ಸಭೆಯ ಎಲ್ಲ ವಿವರಗಳನ್ನು ನ್ಯಾಯಾಲಯಕ್ಕೆ ಒದಗಿಸುವಂತೆಯೂ ಪೀಠ ಸೂಚಿಸಿತು.

ಎಸ್‌.ಎಂ.ಕೃಷ್ಣ ಸಿಎಂ ಆಗಿದ್ದಾಗ ಬಳ್ಳಾರಿ ಜಿಲ್ಲೆಯ ಅರಣ್ಯಭೂಮಿಯಲ್ಲಿ ಗಣಿಗಾರಿಕೆಗೆ ಅವಕಾಶ ನೀಡಿದ್ದಾರೆಂದು ಲೋಕಾಯುಕ್ತ ಪೊಲೀಸರು 2011ರಲ್ಲಿ ಪ್ರಕರಣ ದಾಖಲಿಸಿದ್ದರು. ಇದನ್ನು ವಿರೋಧಿಸಿ ಹೈಕೋರ್ಟ್‌ ಮೊರೆ ಹೋಗಿದ್ದ ಮಾಜಿ ಮುಖ್ಯಮಂತ್ರಿಗೆ ಹಿನ್ನಡೆಯಾಗಿತ್ತು. ನಂತರ 2013ರಲ್ಲಿ ಸುಪ್ರೀಂ ಕೋರ್ಟ್‌ ಈ ಪ್ರಕರಣದಲ್ಲಿ ಎಸ್‌.ಎಂ.ಕೃಷ್ಣ ವಿರುದ್ಧದ ತನಿಖೆಗೆ ಮಧ್ಯಾಂತರ ತಡೆಯಾಜ್ಞೆ ನೀಡಿತು. ಕೃಷ್ಣ ನಂತರ ಮುಖ್ಯಮಂತ್ರಿಗಳಾದ ಧರಂಸಿಂಗ್‌ ಮತ್ತು ಕುಮಾರಸ್ವಾಮಿ ಅವರು ಹಿಂದಿನ ಸರಕಾರದ ನಿರ್ಧಾರಕ್ಕೆ ಪೂರಕವಾಗಿಯೇ ತೀರ್ಮಾನ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಲಾಗಿತ್ತು.


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ