Quantcast
Channel: VijayKarnataka
Viewing all articles
Browse latest Browse all 6795

ಅತಿ ಭ್ರಷ್ಟ ಸರಕಾರ ನೀಡಿದ ಕುಖ್ಯಾತಿ ಬಿಜೆಪಿಗಿದೆ : ಅಮಿತ್‌ ಶಾ ಹೇಳಿಕೆಗೆ ಸಿಎಂ ತಿರುಗೇಟು

$
0
0

ಬೆಂಗಳೂರು: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಸಿಎಂ ಸಿದ್ದರಾಮಯ್ಯ, ಭ್ರಷ್ಟರನ್ನು ಪೋಷಿಸಿ ಬೆಳೆಸುವ ಶಾ ಅವರಂಥ ನಾಯಕರಿಂದ ನೈತಿಕ ಪಾಠ ಕಲಿಯಬೇಕಿಲ್ಲ ಎಂದು ತಿರುಗೇಟು ನೀಡಿದ್ದಾರೆ.

ಅರಮನೆ ಮೈದಾನದಲ್ಲಿ ಸೋಮವಾರ 'ಬೆಂಗಳೂರು ಐಟಿಇ.ಬಿಜ್‌ 2016' ಸಮಾರಂಭದಲ್ಲಿ ಪಾಲ್ಗೊಂಡ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ''ರಾಜ್ಯದಲ್ಲಿ ಅತಿ ಭ್ರಷ್ಟ ಸರಕಾರ ನೀಡಿದ ಕುಖ್ಯಾತಿ ಬಿಜೆಪಿಗಿದೆ. ಭ್ರಷ್ಟ ಸರಕಾರದ ನೇತೃತ್ವ ವಹಿಸಿದ್ದ ಯಡಿಯೂರಪ್ಪ ಜತೆ ವೇದಿಕೆ ಹಂಚಿಕೊಂಡಿದ್ದ ಅಮಿತ್‌ ಶಾ ಭ್ರಷ್ಟಾಚಾರದ ವಿರುದ್ಧ ದನಿ ಎತ್ತಿದ್ದು ಅಚ್ಚರಿ ತಂದಿದೆ. ಜೈಲಿಗೆ ಹೋದವರು, ನೋಟು ಎಣಿಕೆ ಯಂತ್ರ ಇಟ್ಟುಕೊಂಡ ಮುಖಂಡರನ್ನು ಜತೆಯಲ್ಲಿ ಕೂರಿಸಿ ಶಾ ನಮ್ಮ ವಿರುದ್ಧ ಮಾತನಾಡುವ ನೈತಿಕತೆ ಹೊಂದಿಲ್ಲ,'' ಎಂದು ಪ್ರತಿಕ್ರಿಯಿಸಿದರು.

''ಶಾ ಕೊಲೆ ಪ್ರಕರಣದಲ್ಲಿ ಸಿಲುಕಿ ಆರೋಪ ಹೊತ್ತಿದ್ದರು. ಮೋದಿ ಪ್ರಧಾನಿ ಆಗದಿದ್ದಲ್ಲಿ ಶಾ ಜೈಲಿಗೆ ಹೋಗಬೇಕಿತ್ತು. ಆದರೆ, ಸಿಬಿಐ ಸಂಸ್ಥೆಯನ್ನು ದುರುಪಯೋಗ ಪಡಿಸಿಕೊಂಡ ಕಾರಣ ಶಾ ನುಣುಚಿಕೊಂಡರು. ಇಂತಹ ಹಿನ್ನೆಲೆಯುಳ್ಳವರು ಬೇರೊಬ್ಬರನ್ನು ಟೀಕಿಸುವ ನೈತಿಕತೆ ಹೊಂದಿಲ್ಲ,'' ಎಂದರು.

''ಕಾವೇರಿ, ಮಹದಾಯಿ ವಿಚಾರದಲ್ಲಿ ರಾಜ್ಯಕ್ಕೆ ಅನ್ಯಾಯವಾಗಿದೆ ಎಂದು ಬೊಬ್ಬೆ ಹಾಕುವ ಮಾಜಿ ಸಿಎಂ ಯಡಿಯೂರಪ್ಪ ಅವರೇ ಅಧಿಕಾರದಲ್ಲಿದ್ದರೂ, ಸಮಸ್ಯೆಗೆ ಪರಿಹಾರ ಹುಡುಕಲಿಲ್ಲ. ಈಗ ಪ್ರತಿಪಕ್ಷದಲ್ಲಿರುವ ಕಾರಣ ರಾಜಕಾರಣಕ್ಕಾಗಿ ಮುಂದಿನ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದಲ್ಲಿ ಪರಿಹಾರ ಹುಡುಕುವ ಮಾತನ್ನಾಡಿರುವುದು ಜನರನ್ನು ವಂಚಿಸುವ ಕೆಲಸವಷ್ಟೇ,'' ಎಂದು ಟೀಕಿಸಿದರು.



Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಮಲಗಿದ್ದ ಮಹಿಳೆ ಬೆದರಿಸಿ ಬೆತ್ತಲೆ ಫೋಟೋ ತೆಗೆದ ಕಳ್ಳ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


‘ವ್ಯಾಪಾರ’ದಲ್ಲಿ ವೃದ್ಧಿಯಾಗಲು ಹೀಗೆ ಮಾಡಿ….


ಅಪ್ಪ ಅಮ್ಮ ಬೈಯ್ತಾರೆ ಅಂತ ಬೆಂಗಳೂರಿಂದ ಚಳ್ಳಕೆರೆಗೆ ಹೋದ ಮಕ್ಕಳು


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


Namaskāra नमस्कार (salutation)


ತುಳು ತೆರೆಗೆ ಸೋನಿಯಾ ಎಂಟ್ರಿ



<script src="https://jsc.adskeeper.com/r/s/rssing.com.1596347.js" async> </script>