Quantcast
Channel: VijayKarnataka
Viewing all articles
Browse latest Browse all 6795

ಕ್ವಾರ್ಟರ್‌ ಫೈನಲ್‌ಗೆ ಸೈನಾ ನೆಹ್ವಾಲ್‌

$
0
0

ಮಕಾವ್‌ ಓಪನ್‌ ಗ್ರ್ಯಾನ್‌ ಪ್ರಿ ಗೋಲ್ಡ್‌ ಬ್ಯಾಡ್ಮಿಂಟನ್‌ ಟೂರ್ನಿ

ಮಕಾವ್‌: ವಿಶ್ವದ ಮಾಜಿ ನಂ.1 ಆಟಗಾರ್ತಿ ಭಾರತದ ತಾರೆ ಸೈನಾ ನೆಹ್ವಾಲ್‌, ಇಲ್ಲಿ ನಡೆಯುತ್ತಿರುವ ಮಕಾವ್‌ ಓಪನ್‌ ಗ್ರ್ಯಾನ್‌ ಪ್ರಿ ಗೋಲ್ಡ್‌ ಬ್ಯಾಡ್ಮಿಂಟನ್‌ ಟೂರ್ನಿಯ ಮಹಿಳಾ ಸಿಂಗಲ್ಸ್‌ನಲ್ಲಿ ಕ್ವಾರ್ಟರ್‌ ಫೈನಲ್‌ ಪ್ರವೇಶಿಸಿದ್ದಾರೆ.

ಗಾಯದ ಸಮಸ್ಯೆಯಿಂದ ಹೊರಬಂದ ಬಳಿಕ ಲಯ ಕಂಡುಕೊಳ್ಳಲು ಶ್ರಮಿಸುತ್ತಿರುವ ಸೈನಾ ನೆಹ್ವಾಲ್‌, ಗುರುವಾರ ನಡೆದ ಪ್ರಿ ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ಇಂಡೋನೇಷ್ಯಾದ ಆಟಗಾರ್ತಿ ದಿನಾರ್‌ ದಿಯಾ ಅವರನ್ನು 17-21, 21-18, 21-12 ಅಂತರದಲ್ಲಿ ಮಣಿಸಿ ಅಂತಿಮ 8ರ ಘಟ್ಟ ಪ್ರವೇಶಿಸಿದರು.

ಟೂರ್ನಿಯಲ್ಲಿ ಅಗ್ರ ಶ್ರೇಯಾಂಕದೊಂದಿಗೆ ಕಣಕ್ಕಿಳಿಸಿರುವ ಸೈನಾ ಸುಮಾರು ಒಂದು ಗಂಟೆ ಕಾಲ ನಡೆದ ಪ್ರಿ ಕ್ವಾರ್ಟರ್‌ ಹಣಾಹಣಿಯಲ್ಲಿ ಮೊದಲ ಗೇಮ್‌ ಹಿನ್ನಡೆ ಅನುಭವಿಸಿದರೂ ಬಳಿಕ ತಿರುಗೇಟು ನೀಡಿ ಜಯ ತಮ್ಮದಾಗಿಸಿಕೊಂಡರು. ಲಂಡನ್‌ ಒಲಿಂಪಿಕ್ಸ್‌ನಲ್ಲಿ ಕಂಚಿನ ಸಾಧನೆ ಮಾಡಿರುವ ಸೈನಾ, ಮುಂದಿನ ಪಂದ್ಯದಲ್ಲಿ ಚೀನಾದ ಜಾಂಗ್‌ ಯಿಯಾನ್‌ ವಿರುದ್ಧ ಸೆಣಸಲಿದ್ದಾರೆ.

ಪರುಪಳ್ಳಿ ಕಶ್ಯಪ್‌ಗೆ ನಿರಾಸೆ

ಕೆನಡಾ ಓಪನ್‌ ಬಳಿಕ ಫಿಟ್ನೆಸ್‌ ಸುಧಾರಣೆ ಸಲುವಾಗಿ ವಿಶ್ರಾಂತಿ ಪಡೆದಿದ್ದ ಭಾರತದ ಅನುಭವಿ ಆಟಗಾರ ಪರುಪಳ್ಳಿ ಕಶ್ಯಪ್‌, ಮಕಾವ್‌ ಓಪನ್‌ನಲ್ಲಿ ಪ್ರಿ ಕ್ವಾರ್ಟರ್‌ ಫೈನಲ್‌ಗೆ ತಮ್ಮ ಅಭಿಯಾನ ಅಂತ್ಯಗೊಳಿಸಿದ್ದಾರೆ. ಗುರುವಾರ ನಡೆದ ಪುರುಷರ ಸಿಂಗಲ್ಸ್‌ ವಿಭಾಗದ 16ರ ಘಟ್ಟದ ಪಂದ್ಯದಲ್ಲಿ ನಿರೀಕ್ಷಿತ ಆಟ ಹೊರತರುವಲ್ಲಿ ವಿಫಲರಾದ ಕಶ್ಯಪ್‌, 13-21, 20-21 ಅಂತರದ ಗೇಮ್‌ಗಳಿಂದ ಚೈನೀಸ್‌ ತೈಪೆಯ ಲಿನ್‌ ಯೂ ಸಿನ್‌ ಎದುರು ಸೋಲೊಪ್ಪಿಕೊಂಡರು.

ಡಬಲ್ಸ್‌ ಅಭಿಯಾನ ಅಂತ್ಯ

ಟೂರ್ನಿಯ ಪುರುಷರ ಡಬಲ್ಸ್‌ ವಿಭಾಗದಲ್ಲಿ ಭಾರತದ ಅಭಿಯಾನ ಅಂತ್ಯಗೊಂಡಿದೆ. ಮೂರನೇ ಶ್ರೇಯಾಂಕ ಪಡೆದಿದ್ದ ಭಾರತೀಯ ಜೋಡಿ ಮನು ಅತ್ರಿ ಮತ್ತು ಬಿ ಸುಮೀತ್‌ ರೆಡ್ಡಿ ಪ್ರಿ ಕ್ವಾರ್ಟರ್‌ ಪಂದ್ಯದಲ್ಲಿ 20-22, 19-21 ಅಂತರದ ಗೇಮ್‌ಗಳಿಂದ ಸಿಂಗಾಪುರದ ಡ್ಯಾನಿ ಬಾವಾ ಮತ್ತು ಹೆಂದ್ರಾ ವಿಜಯಾ ವಿರುದ್ಧ ವಿರುದ್ಧ ಮುಗ್ಗರಿಸಿತು.


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ


ತುಳು ತೆರೆಗೆ ಸೋನಿಯಾ ಎಂಟ್ರಿ


BIG NEWS : ಶಾಲೆಗಳ ಪ್ರಥಮ ಮಾನ್ಯತೆ, ಮಾನ್ಯತೆ ನವೀಕರಣದ ಕುರಿತು ‘ಶಿಕ್ಷಣ ಇಲಾಖೆ’ಯಿಂದ...


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>