Quantcast
Channel: VijayKarnataka
Viewing all articles
Browse latest Browse all 6795

ದಡಾರ-ರುಬೆಲ್ಲಾ ಲಸಿಕಾ ಅಭಿಯಾನ ಯಶಸ್ಸಿಗೆ ಮನವಿ

$
0
0

ಬೀದರ್‌: ಆರೋಗ್ಯ ಇಲಾಖೆಯಿಂದ ಜಿಲ್ಲೆಯಾದ್ಯಂತ ಹಮ್ಮಿಕೊಳ್ಳಲಾಗುತ್ತಿರುವ ದಡಾರ-ರುಬೆಲ್ಲಾ ಲಸಿಕೆ ಕಾರ್ಯಕ್ರಮವನ್ನು ಶೇ.100ರಷ್ಟು ಯಶಸ್ವಿಗೊಳಿಸಬೇಕು ಎಂದು ಆರೋಗ್ಯ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳಿಗೆ ಜಿಲ್ಲಾ ಪಂಚಾಯಿತಿ ಸಿಇಒ ಡಾ.ಆರ್‌.ಸೆಲ್ವಮಣಿ ಸೂಚಿಸಿದರು.

ನಗರದ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ದಡಾರ-ರುಬೆಲ್ಲಾ ಲಸಿಕಾ ಅಭಿಯಾನದ ನಿಮಿತ್ತದ ಜಿಲ್ಲಾ ಸಂಚಾಲನಾ ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, 15 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ನೀಡುವ ಕಾರ್ಯಕ್ರಮ ಇದಾಗಿದೆ ಎಂದರು.

ಅಂಗನವಾಡಿ ಸೇರಿದಂತೆ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಓದುತ್ತಿರುವ ಮಕ್ಕಳಿಗೆ ಲಸಿಕೆ ದೊರೆಯಲು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆಯ ಅಧಿಕಾರಿಗಳು ಮತ್ತು ಇತರೆ ಅಧಿಕಾರಿಗಳು ಈ ಬಗ್ಗೆ ಮುತುವರ್ಜಿ ವಹಿಸಬೇಕು ಎಂದು ನಿರ್ದೇಶನ ನೀಡಿದರು.

ಆರೋಗ್ಯ ಇಲಾಖೆಯ ಅಧಿಕಾರಿಗಳು ಹಾಗೂ ಎಲ್ಲಾ ಶಾಲೆಗಳ ಮುಖ್ಯ ಗುರುಗಳ ಸಭೆ ಕರೆದು ಅವರಲ್ಲಿ ದಡಾರ-ರುಬೆಲ್ಲಾ ಲಸಿಕೆ ಅಭಿಯಾನದ ಕುರಿತು ಜಾಗೃತಿ ಮೂಡಿಸಬೇಕೆಂದು ಶಿಕ್ಷಣ ಇಲಾಖೆ ಅಧಿಕಾರಿಗೆ ಸೂಚಿಸಿದ ಅವರು, ತಾಲೂಕು ಮಟ್ಟದ ಅಧಿಕಾರಿಗಳ ಸಭೆ ಕರೆಯಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕರು ಹಾಗೂ ತಹಸೀಲ್ದಾರರಿಗೆ ಸೂಚಿಸಿದರು.

ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅಧೀನದಲ್ಲಿರುವ ವಸತಿ ಹಾಗೂ ವಸತಿ ರಹಿತ ಶಾಲೆಗಳು, ರೈಲ್ವೆ ಇಲಾಖೆ ಹಾಗೂ ವಾಯುಸೇನೆಯಿಂದ ನಡೆಯುವ ಶಾಲೆಗಳು, ಮಕ್ಕಳ ಕುಟೀರ, ಮದರಸಾಗಳು, ನಿರಾಶ್ರಿತ ಕೇಂದ್ರಗಳು ಸೇರಿದಂತೆ ಮಕ್ಕಳಿರುವ ಎಲ್ಲಾ ಕೇಂದ್ರಗಳಿಗೆ ತೆರಳಿ ಲಸಿಕೆ ನೀಡಬೇಕು ಎಂದು ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ತಿಳಿಸಿದರು.

ಡಾ.ಅನಿಲ ತಾಳಿಕೋಟೆ ಮಾತನಾಡಿದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ.ಎಂ.ಎ.ಜಬ್ಬಾರ, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ಸಿ.ಎಸ್‌.ರಗಟೆ ವೇದಿಕೆಯಲ್ಲಿದ್ದರು. ಜಿಲ್ಲಾ ಕಾರ್ಯಕ್ರಮ ಅಧಿಕಾರಿ ಡಾ.ರವೀಂದ್ರ ಸಿರ್ಸೆ, ಜಿಲ್ಲಾ ಮೇಲ್ವಿಚಾರಕ ಶಿವಕುಮಾರ ಬೇಮಳಗೆ, ಜಿಲ್ಲಾ ಆರೋಗ್ಯ ಶಿಕ್ಷಣಾಧಿಕಾರಿ ಸುಭಾಷ ಮುಧಾಳೆ, ಆರೋಗ್ಯ ಇಲಾಖೆಯ ಅಧಿಕಾರಿಗಳಾದ ಡಾ.ಕಲ್ಲಪ್ಪ ಮಜ್ಜಗೆ, ಡಾ.ಅನಿಲ ಚಿಂತಾಮಣಿ, ಡಾ.ಮಾರ್ತಂಡರಾವ್‌ ಕಾಶಂಪುರ, ಡಾ.ಸಂಜೀವಕುಮಾರ ಪಾಟೀಲ, ಡಾ. ಇಂದುಮತಿ ಪಾಟೀಲ, ಶ್ರವಣ ಜಾಧವ, ಶಿವಶಂಕರ, ವೀರೇಶ್‌ ಬಿರಾದಾರ, ಸಿಬ್ಬಂದಿ ಅಶೋಕ, ಪ್ರತಿಭಾ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಧಿಕಾರಿಗಳು ಹಾಗೂ ಇತರರು ಇದ್ದರು.



Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಬಿಗ್‌ ನ್ಯೂಸ್: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ -‌ ಈ ಬಾರಿಯೂ...


 ಕೌಟುಂಬಿಕ ಕಲಹ ಹಿನ್ನೆಲೆ; ಬುದ್ದಿವಾದ ಹೇಳಿದ ತಂಗಿಯನ್ನೇ ಕೊಂದ ಅಣ್ಣ…


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


‘ಒಡಕು ಮೂಡಿಸಿದ ಸಿದ್ಧರಾಮಯ್ಯ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>