Quantcast
Channel: VijayKarnataka
Viewing all articles
Browse latest Browse all 6795

ವಿಶ್ವಾಸದ ಅಭಿವೃದ್ದಿಗೆ ಮೊದಲ ಆದ್ಯತೆ

$
0
0

ತೇರದಾಳ: ಜನಪ್ರತಿನಿಧಿಗಳು, ಅಧಿಕಾರಿಗಳು ಸೇರಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ಬಾಗಲಕೋಟ ಜಿಲ್ಲಾ ಉಸ್ತುವಾರಿ ಸಚಿವೆ ಉಮಾಶ್ರೀ ಹೇಳಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಸ್ಥಾನ ವಹಿಸಿಕೊಂಡ ನಂತರ ವಿಜಯಕರ್ನಾಟಕದೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನ ಮೇಲೆ ಸಾಕಷ್ಟು ವಿಶ್ವಾಸ, ನಂಬಿಕೆ ಇಟ್ಟು ಜಿಲ್ಲಾ ಉಸ್ತುವಾರಿ ವಹಿಸಿದ್ದಾರೆ. ಜಿಲ್ಲೆಯ ಅಭಿವೃದ್ಧಿಗೆ ಎಲ್ಲ ಶಾಸಕರು, ಸಂಸದರು ಹಾಗೂ ಜನಪ್ರತಿನಿದಿಗಳ ಸಹಕಾರ ಅಗತ್ಯವಾಗಿದೆ. ಆ ನಿಟ್ಟಿನಲ್ಲಿ ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ಜಿಲ್ಲೆಯ ಅಭಿವೃದ್ಧಿಗೆ ಶ್ರಮಿಸುತ್ತೇನೆ ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಮರಳು, ಪಡಿತರ ಚೀಟಿ ಗೊಂದಲ, ಇಲಾಖಾವಾರು ಸಿಬ್ಬಂದಿ ಕೊರತೆ ಸೇರಿದಂತೆ ಸಾಕಷ್ಟು ಸಮಸ್ಯೆಗಳಿವೆ. ಚಾಲುಕ್ಯ, ರನ್ನ ಉತ್ಸವದಂಥ ಮಹತ್ವದ ಕಾರ್ಯಕ್ರಮಗಳು ಕೂಡ ನಿಂತಿವೆ. ತುರ್ತು ಸಮಸ್ಯೆಗಳ ಬಗ್ಗೆ ಹೆಚ್ಚಿನ ಆದ್ಯತೆ ನೀಡಲಾಗುವುದು. ಸರಕಾರದ ಕೆಲ ಮಹತ್ವದ ಯೋಜನೆಗಳಿಗೆ ಹಿನ್ನೆಡೆಯೂ ಆಗುತ್ತಿದೆ. ಮೊದಲು ಜಿಲ್ಲಾಮಟ್ಟದ ಎಲ್ಲ ಇಲಾಖೆ ಅಧಿಕಾರಿಗಳ ಜತೆ ಸಭೆ ನಡೆಸುತ್ತೇನೆ ಎಂದು ಹೇಳಿದರು.

ಜಿಲ್ಲೆಯಲ್ಲಿ ಬರದ ವಾತಾವರಣ ನಿರ್ಮಾಣವಾಗಿದೆ. ಹಲವು ಪ್ರದೇಶಗಳಲ್ಲಿ ಈಗಾಗಲೇ ನೀರಿನ ಹಾಹಾಕಾರ ಆರಂಭವಾಗಿದೆ. ಬೇಸಿಗೆಯಲ್ಲಿ ನೀರಿನ ಸಮಸ್ಯೆ ನೀಗಲು ಈಗಿನಿಂದಲೇ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಇಂದು ಆಗಮನ

ಉಸ್ತುವಾರಿ ಸಚಿವರಾಗಿ ನೇಮಕಗೊಂಡ ನಂತರ ಮೊದಲ ಬಾರಿಗೆ ಬಾಗಲಕೋಟಕ್ಕೆ ಉಮಾಶ್ರೀ ಡಿ.30ರಂದು ಭೇಟಿ ನೀಡಲಿದ್ದಾರೆ ಬೆಳಗ್ಗೆ 10ಕ್ಕ ಆಗಮಿಸಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸುವರು. ಆನಂತರ ಕಾರ‍್ಯಕರ್ತರನ್ನು ಭೇಟಿ ಮಾಡುವರು ಎಂದು ಮೂಲಗಳು ತಿಳಿಸಿವೆ.



Viewing all articles
Browse latest Browse all 6795

Trending Articles



<script src="https://jsc.adskeeper.com/r/s/rssing.com.1596347.js" async> </script>