Quantcast
Channel: VijayKarnataka
Viewing all articles
Browse latest Browse all 6795

ಫಸಲ್‌ ಬಿಮಾ ಲಾಭ ಪಡೆಯಿರಿ

$
0
0

ಬಾಗಲಕೋಟ: ರೈತರ ನೆರವಿಗಾಗಿ ಸರಕಾರ ರೂಪಿಸಿರುವ ಫಸಲ್‌ ಬಿಮಾ ಯೋಜನೆಯ ಲಾಭವನ್ನು ಜಿಲ್ಲೆಯ ರೈತರು ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ಪಿ.ಎ.ಮೇಘಣ್ಣವರ ಮನವಿ ಮಾಡಿಕೊಂಡರು.

ಜಿಲ್ಲಾಧಿಕಾರಿ ಕಚೇರಿ ಸಭಾ ಭವನದಲ್ಲಿ ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿ, ಜಿಲ್ಲೆಯಲ್ಲಿ 3 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಹಿಂಗಾರಿ ಬೆಳೆ ಬೆಳೆಯಲಾಗುತ್ತದೆ. ಈವರೆಗೆ 2 ಲಕ್ಷ 80 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. 1 ಲಕ್ಷ 20 ಸಾವಿರ ರೈತರು ಹಿಂಗಾರಿ ಬೆಳೆ ಬೆಳೆಯುತ್ತಾರೆ. ಈ ಪೈಕಿ ಕೇವಲ 34,337 ರೈತರು ವಿಮೆ ಪಾವತಿಸಿದ್ದಾರೆ. ಶೇ.80ರಷ್ಟು ರೈತರು ಇನ್ನೂ ಸೌಲಭ್ಯ ಪಡೆದಿಲ್ಲ. ವಿಮೆ ಸೌಲಭ್ಯ ಪಡೆಯಲು ಡಿ.31 ಕೊನೆಯ ದಿನವಾಗಿದ್ದು, ರೈತರು ಸೌಲಭ್ಯದ ಸದುಪಯೋಗ ಪಡೆಯಬೇಕು ಎಂದರು.

ಜಿಲ್ಲೆಯ ಮುಧೋಳ, ಜಮಖಂಡಿ ಹಾಗೂ ಬೀಳಗಿ ತಾಲೂಕಿನಲ್ಲಿ ಬಹುತೇಕ ಪ್ರದೇಶ ನೀರಾವರಿ ಸೌಲಭ್ಯ ಹೊಂದಿದೆ. ಜಿಲ್ಲೆಯಲ್ಲಿ ಅಂದಾಜು 1 ಲಕ್ಷ ಹೆಕ್ಟೇರ್‌ ಪ್ರದೇಶದಲ್ಲಿ ಕಬ್ಬು ಬೆಳೆಯಲಾಗುತ್ತದೆ. ಈ ವರ್ಷ ಮಳೆ ಕಡಿಮೆಯಾದ ಪರಿಣಾಮ 80 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಮಾತ್ರ ಕಬ್ಬು ಬೆಳೆಯಲಾಗಿದೆ. ಕಬ್ಬಿನ ಬದಲು ಬೇರೆ ಬೆಳೆಗಳನ್ನು ಬೆಳೆದವರು ವಿಮೆ ಸೌಲಭ್ಯ ಪಡೆಯಬಹುದು. ಕಬ್ಬು ಬೆಳೆಯಲಾಗುತ್ತದೆ ಎಂದು ಬೆಳೆ ಸಾಲ ಪಡೆದು ವಾಸ್ತವವಾಗಿ ಇತರ ಬೆಳೆ ಬೆಳೆಯುತ್ತಿರುವವರು ವಿಮೆ ಹಣ ಪಾವತಿಸಬಹುದು. ತಾವು ಬೆಳೆ ಸಾಲ ಪಡೆದ ಬ್ಯಾಂಕ್‌ನಲ್ಲಿ ರೈತರು ವಿಮೆ ಹಣ ಪಾವತಿಸಬೇಕಾಗಿಲ್ಲ. ಪಿಕೆಪಿಎಸ್‌, ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ಖಾತೆ ಹೊಂದಿದ್ದರೆ ಸೌಲಭ್ಯ ಲಭಿಸಲಿದೆ. ಗ್ರಾಮ ಲೆಕ್ಕಾಧಿಕಾರಿಗಳಿಂದ ಬೆಳೆ ಬಗ್ಗೆ ಪ್ರಮಾಣ ಪತ್ರ ಪಡೆದು ವಿಮೆ ಹಣ ಭರ್ತಿ ಮಾಡಬಹುದಾಗಿದೆ ಎಂದು ವಿವರಿಸಿದರು.

ಮಾಹಿತಿ ಪಡೆಯಿರಿ

ರೈತರು ವಿಮೆ ಹಣ ಪಾವತಿಸಲು ಜಮೀನಿನ ಉತಾರ ಸಂಖ್ಯೆ, ಕ್ಷೇತ್ರವನ್ನು ನಿಗದಿತ ಅರ್ಜಿಯಲ್ಲಿ ಭರಿಸಿ ನೀಡಬೇಕು. ಜಂಟಿಯಾಗಿ ಜಮೀನಿದ್ದರೆ ಎಲ್ಲ ಸದಸ್ಯರ ಸಹಿ ಪಡೆದು ಸಲ್ಲಿಸಬೇಕು. ಗ್ರಾಮ ಲೆಕ್ಕಾಧಿಕಾರಿ ಪ್ರಮಾಣ ಪತ್ರ ಸಲ್ಲಿಕೆ ಕಡ್ಡಾಯವಾಗಿದೆ. ಕೃಷಿ, ತೋಟಗಾರಿಕೆ ಇಲಾಖೆಗಳು, ಸೊಸೈಟಿಗಳು, ಬ್ಯಾಂಕ್‌ಗಳಲ್ಲಿ ಮಾಹಿತಿ ನೀಡಲಾಗುತ್ತದೆ. ಅಧಿಕಾರಿಗಳು, ಸಿಬ್ಬಂದಿ ವಿಮಾ ಯೋಜನೆಗೆ ಸಹಕಾರ ನೀಡದಿದ್ದರೆ ಹಿರಿಯ ಅಧಿಕಾರಿಗೆ ದೂರು ಸಲ್ಲಿಸಬಹುದಾಗಿದೆ. ವಿಮೆ ಅವಧಿಯನ್ನು ವಿಸ್ತರಿಸಲು ಅವಕಾಶವಿಲ್ಲ ಎಂದು ಸರಕಾರ ಸ್ಪಷ್ಟಪಡಿಸಿದೆ ಎಂದು ತಿಳಿಸಿದರು. ಜಿಪಂ ಸಿಇಒ ವಿಕಾಸ ಸುರಳಕರ, ಉಪವಿಭಾಗಾಧಿಕಾರಿ ಶಂಕರಗೌಡ ಸೋಮನಾಳ, ಕೃಷಿ ಇಲಾಖೆ ಜಂಟಿ ನಿರ್ದೇಶಕ ರಮೇಶಕುಮಾರ ಇದ್ದರು.

---------

ಕಾರ್ಯದರ್ಶಿ ಅಮಾನತು

ಹುನಗುಂದ ತಾಲೂಕಿನ ಗಂಜಿಹಾಳ ಗ್ರಾಮದ ಪಿಕೆಪಿಎಸ್‌ ಕಾರ್ಯದರ್ಶಿ ಸರಿಯಾಗಿ ಕಾರ್ಯನಿರ್ವಹಿಸದ ಕಾರಣ ಅಮಾನತು ಮಾಡಲಾಗಿದೆ. ರೈತರಿಗೆ ವಿಮೆ ಯೋಜನೆ ಬಗ್ಗೆ ಕಾರ್ಯದರ್ಶಿ ಸಮರ್ಪಕ ಮಾಹಿತಿ ನೀಡಿಲ್ಲ. ಈ ಬಗ್ಗೆ ನಾನು ಸ್ಥಳಕ್ಕೆ ಭೇಟಿ ನೀಡಿದಾಗ ಮಾಹಿತಿ ದೊರೆತಿದೆ. ತಪ್ಪು ಕಂಡ ಬಂದ ಹಿನ್ನೆಲೆಯಲ್ಲಿ ಕಾರ್ಯದರ್ಶಿ ಜಿ.ಎಸ್‌.ಹಿರೇಮಠರನ್ನು ಅಮಾನತು ಮಾಡಲಾಗಿದೆ ಎಂದು ಮೇಘಣ್ಣವರ ತಿಳಿಸಿದರು.

--------------

ರೈತರಿಗೆ ವಿಮಾ ಸೌಲಭ್ಯ ಒದಗಿಸುವ ಉದ್ದೇಶದಿಂದ ಬ್ಯಾಂಕರ್‌ಗಳು, ಗ್ರಾಪಂ ಹಾಗೂ ಹಿರಿಯ ಅಧಿಕಾರಿಗಳ ತಂಡ ರಚಿಸಲಾಗಿದೆ. ಈ ತಂಡಗಳು ಗ್ರಾಮಗಳಿಗೆ ಭೇಟಿ ನೀಡಿ ವಿಮೆ ಬಗ್ಗೆ ಮಾಹಿತಿ ನೀಡುತ್ತಿವೆ. ಆಂದೋಲನದ ಮಾದರಿಯಲ್ಲಿ ವಿಮೆ ಬಗ್ಗೆ ಜಾಗೃತಿ ಕೈಗೊಳ್ಳಲಾಗುತ್ತಿದೆ. ಗೋವಿನಜೋಳ, ಗೋಧಿ, ಕಡಲೆ, ಸೂರ್ಯಕಾಂತಿ, ಬಿಳಿಜೋಳ, ಸೂರ್ಯಕಾಂತಿ ಸೇರಿದಂತೆ ಮಳೆ ಆಶ್ರಿತ ಹಾಗೂ ನೀರಾವರಿ ಬೆಳೆಗಳು ವಿಮೆ ವ್ಯಾಪ್ತಿಯಲ್ಲಿವೆ. ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಯೋಜನೆ ಜಾರಿಯಲ್ಲಿದೆ. ಕಬ್ಬು ಬೆಳೆ ವಿಮೆ ವ್ಯಾಪ್ತಿಯಲ್ಲಿಲ್ಲ.

-ಪಿ.ಎ.ಮೇಘಣ್ಣವರ, ಜಿಲ್ಲಾಧಿಕಾರಿ



Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಮಲಗಿದ್ದ ಮಹಿಳೆ ಬೆದರಿಸಿ ಬೆತ್ತಲೆ ಫೋಟೋ ತೆಗೆದ ಕಳ್ಳ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


‘ವ್ಯಾಪಾರ’ದಲ್ಲಿ ವೃದ್ಧಿಯಾಗಲು ಹೀಗೆ ಮಾಡಿ….


ಅಪ್ಪ ಅಮ್ಮ ಬೈಯ್ತಾರೆ ಅಂತ ಬೆಂಗಳೂರಿಂದ ಚಳ್ಳಕೆರೆಗೆ ಹೋದ ಮಕ್ಕಳು


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


Namaskāra नमस्कार (salutation)


ತುಳು ತೆರೆಗೆ ಸೋನಿಯಾ ಎಂಟ್ರಿ



<script src="https://jsc.adskeeper.com/r/s/rssing.com.1596347.js" async> </script>