Quantcast
Channel: VijayKarnataka
Viewing all articles
Browse latest Browse all 6795

ದಲಿತರಿಗೆ ರಕ್ಷಣೆಗೆ ಆಗ್ರಹಿಸಿ ಮನವಿ

$
0
0

ಹೊಸಪೇಟೆ: ತಾಲೂಕಿನ ಗೋನಾಳ್‌ ಗ್ರಾಮದಲ್ಲಿ ದಲಿತರ ಮೇಲೆ ಬಿಜೆಪಿ ಶಾಸಕ ಸುರೇಶ್‌ ಬಾಬು ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ದಲಿತರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಸ್ಥಳೀಯ ದಲಿತ ಹಕ್ಕುಗಳ ಸಮಿತಿ ಬಳ್ಳಾರಿ ಜಿಲ್ಲಾ ಸಮಿತಿ ಆಗ್ರಹಿಸಿದೆ.

ಈ ಕುರಿತು ತಹಸೀಲ್ದಾರ್‌ ಎಚ್‌. ವಿಶ್ವನಾಥ್‌ರ ಮೂಲಕ ಶುಕ್ರವಾರೆ ಜಿಲ್ಲಾಧಿಕಾರಿಗೆ ಮನವಿ ಪತ್ರ ಸಲ್ಲಿಸಿದ ಸಮಿತಿ ಸದಸ್ಯರು, ತಾಲೂಕಿನ ಕಂಪ್ಲಿ ಹೋಬಳಿಯ ಗೋನಾಳ್‌ ಗ್ರಾಮದಲ್ಲಿ ಜ. 2ರಂದು ದಲಿತರ ಮೇಲೆ ಬಿಜೆಪಿ ಶಾಸಕ ಸುರೇಶ್‌ ಬಾಬು ಬೆಂಬಲಿಗರು ಹಲ್ಲೆ ನಡೆಸಿದ್ದಾರೆ. ಇದನ್ನು ದಲಿತ ಹಕ್ಕುಗಳ ಸಮಿತಿ ತೀವ್ರವಾಗಿ ಖಂಡಿಸುತ್ತದೆ. ದಲಿತರ ಮನೆಗಳ ಮೇಲೆ ಹಾಡಹಗಲೇ ದಾಳಿ ಮಾಡಿ ಮಕ್ಕಳು, ಮಹಿಳೆಯರು ಮತ್ತು ಮುದುಕರು ಸೇರಿದಂತೆ ನೂರಾರು ಜನರ ಮೇಲೆ ಕಲ್ಲು ಮತ್ತು ಬಡಿಗೆಗಳಿಂದ ಹೊಡೆಯಲಾಗಿದೆ. ಮನೆಗಳ ಮೇಲೆ ಕಲ್ಲು ತೂರಿ ಜಖಂ ಮಾಡಿದ್ದಾರೆ. ಅನೇಕರಿಗೆ ತೀವ್ರ ಗಾಯಗಳಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಶಾಸಕರ ಬೆಂಬಲಿಗರಿಗೆ ಹೆದರಿ ನೂರಾರು ಜನ ಗ್ರಾಮವನ್ನೇ ಬಿಟ್ಟು ಹೋಗಿದ್ದಾರೆ. ಹೀಗಿದ್ದರೂ ದಲಿತರ ಮೇಲೆ ದೌರ್ಜನ್ಯ ಮಾಡಿದವರ ಮೇಲೆ ಪೊಲೀಸರು ಕಠಿಣ ಕಾನೂನು ಕ್ರಮ ಕೈಗೊಳ್ಳದೇ, ದೌರ್ಜನ್ಯಕ್ಕೊಳಗಾದ ದಲಿತರ ಮೇಲೆ ಮತ್ತು ಅಮಾಯಕರ ಮೇಲೆ ಸುಳ್ಳು ಪ್ರಕರಣ ದಾಖಲಿಸಲಾಗಿದೆ. ಈ ಕೂಡಲೇ ದಲಿತರಿಗೆ ಸೂಕ್ತ ರಕ್ಷಣೆ ನೀಡಬೇಕು ಎಂದು ಒತ್ತಾಯಿಸಿದರು.

ದಲಿತರ ಮೇಲೆ ಮತ್ತು ದಲಿತರನ್ನು ಬೆಂಬಲಿಸಿದ ಕುರುಬ ಸಮುದಾಯದವರ ಮೇಲೆ ಹಾಕಿರುವ ಸುಳ್ಳು ಕೇಸುಗಳನ್ನು ರದ್ದು ಮಾಡಬೇಕು. ಹಲ್ಲೆಗೊಳಗಾದ ದಲಿತ ಕುಟುಂಬಗಳಿಗೆ ತಲಾ 2 ಲಕ್ಷ ರೂ. ನಷ್ಟ ಪರಿಹಾರವನ್ನು ಸರಕಾರ ಮಂಜೂರು ಮಾಡಬೇಕು. ದಲಿತ ಕುಟುಂಬಗಳಿಗೆ ಉದ್ಯೋಗ ಖಾತರಿ ಯೋಜನೆ ಅಡಿ ಉದ್ಯೋಗ ಕೊಡಬೇಕು. ಕೇರಿಯಲ್ಲಿ ಗಂಜಿ ಕೇಂದ್ರ ಪ್ರಾರಂಭಿಸಬೇಕು. ಗೋನಾಳ್‌ ಗ್ರಾಮದಲ್ಲಿನ ಭಯದ ವಾತಾವರಣ ಹೋಗಲಾಡಿಸಬೇಕು. ಜಿಲ್ಲಾಡಳಿತ ಶಾಂತಿಸಭೆಯನ್ನು ನಡೆಸಬೇಕು. ಬಿಜೆಪಿ ಶಾಸಕ ಸುರೇಶ್‌ ಬಾಬು ತಮ್ಮ ಬೆಂಬಲಿಗರ ಗುಂಡಾ ವರ್ತನೆಯನ್ನು ಬಹಿರಂಗವಾಗಿ ಖಂಡಿಸಬೇಕು ಎಂದು ಒತ್ತಾಯಿಸಿದರು.

ದಲಿತ ಹಕ್ಕುಗಳ ಸಮಿತಿಯ ಜಿಲ್ಲಾ ಸಂಚಾಲಕ ಮರಡಿ ಜಂಬಯ್ಯ ನಾಯಕ, ಮುಖಂಡರಾದ ಆರ್‌. ಭಾಸ್ಕರ್‌ರೆಡ್ಡಿ, ಜೆ. ಶಿವಕುಮಾರ್‌, ಎಸ್‌. ಸತ್ಯಮೂರ್ತಿ, ಬಿ. ರಮೇಶ್‌ಕುಮಾರ್‌, ಕೆ. ಮಂಜುನಾಥ್‌ ಮತ್ತಿತರರಿದ್ದರು.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್