Quantcast
Channel: VijayKarnataka
Viewing all articles
Browse latest Browse all 6795

ಮಂದಿರ ಕಟ್ಟುವ ಭರವಸೆ ನೀಡಿದರೆ ಮಾತ್ರ ಮತ : ಪ್ರಧಾನ ಅರ್ಚಕ ದಾಸ್‌

$
0
0

ಅಯೋಧ್ಯಾ: ಪ್ರಧಾನಿ ಮೋದಿ ಅಯೋಧ್ಯೆಯಲ್ಲಿ ರಾಮಮಂದಿರ ಕಟ್ಟುವ ಭರವಸೆ ನೀಡಿದರೆ ಮಾತ್ರ ಮುಂಬರುವ ಉತ್ತರ ಪ್ರದೇಶ ಚುನಾವಣೆಯಲ್ಲಿ ಮಠಾಧೀಶರು ಮತ್ತು ಸಾಧುಗಳು ಬಿಜೆಪಿಯನ್ನು ಬೆಂಬಲಿಸಲಿದ್ದಾರೆ ಎಂದು ರಾಮ ಮಂದಿರದ ಪ್ರಧಾನ ಅರ್ಚಕ ಆಚಾರ್ಯ ಸತ್ಯೇಂದ್ರ ದಾಸ್‌ ಹೇಳಿದ್ದಾರೆ.

'ಮಠಾಧೀಶರು ಮತ್ತು ಸಾಧುಗಳು ರಾಮನ ಪರಮ ಭಕ್ತರಾಗಿದ್ದು, ಅಯೋಧ್ಯೆಯಲ್ಲಿ ಭವ್ಯ ರಾಮಮಂದಿರವನ್ನು ಕಾಣುವ ಬಯಕೆ ಹೊಂದಿದ್ದಾರೆ. ಮೋದಿ ಸರಕಾರ ಅಧಿಕಾರಕ್ಕೆ ಬಂದಿದ್ದರಿಂದ ಮಂದಿರ ನಿರ್ಮಾಣವಾಗಲಿದೆ ಎಂಬ ಆಶಾಭಾವನೆಯಿದೆ' ಎಂದು ದಾಸ್‌ ತಿಳಿಸಿದ್ದಾರೆ.

'ಮೋದಿ ಅಯೋಧ್ಯೆಗೆ ಭೇಟಿ ನೀಡಿ ರಾಮಮಂದಿರ ಕಟ್ಟುವ ಕುರಿತು ಭರವಸೆ ನೀಡಬೇಕು. ಆಗ ನಾವೆಲ್ಲರೂ ಹಿಂದೂಗಳನ್ನು ಒಂದುಗೂಡಿಸಿ ಬಿಜೆಪಿಗೆ ಮತ ನೀಡುವಂತೆ ಮನವೊಲಿಸುತ್ತೇವೆ. ಉತ್ತರ ಪ್ರದೇಶದಲ್ಲಿ ಮಠಾಧೀಶರು ಮತ್ತು ಸಾಧುಗಳಿಗೆ ಸಾಕಷ್ಟು ಜನಬೆಂಬಲವಿದೆ' ಎಂದಿದ್ದಾರೆ.

ಆಡ್ವಾಣಿ ಬಗ್ಗೆ ಬೇಸರ

ಅಯೋಧ್ಯೆಯಲ್ಲಿ ರಾಮಮಂದಿರದ ಹೆಸರಿನಲ್ಲಿ ಅಧಿಕಾರಕ್ಕೆ ಬಂದ ಬಿಜೆಪಿ ಸಂಸದರು ಒಂದು ಬಾರಿಯೂ ಸಂಸತ್ತಿನಲ್ಲಿ ಈ ಕುರಿತು ಧ್ವನಿ ಎತ್ತಿಲ್ಲ ಎಂದು ಅಯೋಧ್ಯೆಯ ರಸಿಕ ನಿವಾಸ ದೇವಸ್ಥಾನದ ಅರ್ಚಕರಾದ ರಘುವೀರ್‌ ಶರಣ್‌ ಆರೋಪಿಸಿದರು.

'ಆಡ್ವಾಣಿ, ಮುರಳಿ ಮನೋಹರ ಜೋಷಿ, ಉಮಾ ಭಾರತಿ, ವಿನಯ್‌ ಕಟಿಯಾರ್‌ ಸೇರಿದಂತೆ ಬಹುತೇಕ ಬಿಜೆಪಿ ನಾಯಕರು ಮಂದಿರದ ಹೆಸರಿನಲ್ಲಿ ಅಧಿಕಾರ ಪಡೆದರು. ಆದರೆ ಅವರಾರೂ ಮಂದಿರ ನಿರ್ಮಾಣಕ್ಕೆ ಮುಂದಾಗುವಂತೆ ಪ್ರಧಾನಿ ಮೋದಿಯವರಿಗೆ ಬೇಡಿಕೆ ಸಲ್ಲಿಸಿಲ್ಲ' ಎಂದು ಶರಣ್‌ ದೂರಿದರು.



Viewing all articles
Browse latest Browse all 6795

Trending Articles


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್


Namaskāra नमस्कार (salutation)


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


‘ವ್ಯಾಪಾರ’ದಲ್ಲಿ ವೃದ್ಧಿಯಾಗಲು ಹೀಗೆ ಮಾಡಿ….


ಅಪ್ಪ ಅಮ್ಮ ಬೈಯ್ತಾರೆ ಅಂತ ಬೆಂಗಳೂರಿಂದ ಚಳ್ಳಕೆರೆಗೆ ಹೋದ ಮಕ್ಕಳು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಮನೆಯಲ್ಲಿ ಸದಾ ಲಕ್ಷ್ಮಿ ನೆಲೆಸಿರಲು ಮಂಗಳಮುಖಿಯಿಂದ ಒಂದು ನಾಣ್ಯ ಪಡೆದು ಹೀಗೆ ಮಾಡಿ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>