Quantcast
Channel: VijayKarnataka
Viewing all articles
Browse latest Browse all 6795

ಕಪ್ಪುಹಣ ಬದಲಾವಣೆ ಪ್ರಕರಣ ಸಿಬಿಐ, ಎಸಿಬಿ ಎರಡೆರಡು ತನಿಖೆ ಬಗ್ಗೆ ದೇವೇಗೌಡ ಅಚ್ಚರಿ

$
0
0

ಬೆಂಗಳೂರು: ಕಪ್ಪು ಹಣ ಬದಲಾವಣೆ ದಂಧೆಯಲ್ಲಿ ಸಿಕ್ಕಿಬಿದ್ದಿರುವ ಚಿಕ್ಕರಾಯಪ್ಪ ಹಾಗೂ ಎಸ್‌.ಸಿ.ಜಯಚಂದ್ರ ಪ್ರಕರಣದ ಬಗ್ಗೆ ಸಿಬಿಐ ಹಾಗೂ ಎಸಿಬಿ ಎರಡೂ ಸಂಸ್ಥೆಗಳು ತನಿಖೆ ನಡೆಸುತ್ತಿರುವ ಬಗ್ಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್‌ ವರಿಷ್ಠ ಎಚ್‌.ಡಿ.ದೇವೇಗೌಡ ಅಚ್ಚರಿ ವ್ಯಕ್ತಪಡಿಸಿದ್ದಾರೆ.

''ಸರಕಾರದ ಇಬ್ಬರು ಅಧಿಕಾರಿಗಳ ನಿವಾಸಗಳ ಮೇಲೆ ದಾಳಿ ಮಾಡಿ ಕಪ್ಪು ಹಣ ಪತ್ತೆ ಮಾಡಿರುವುದು ಹಾಗೂ ಅದರಲ್ಲಿ ಸಚಿವರೊಬ್ಬರ ಹೆಸರು ಕೇಳಿಬಂದಿರುವ ಪ್ರಕರಣದಲ್ಲಿ ಸಿಬಿಐ ಹಾಗೂ ಎಸಿಬಿ ಎರಡೆರಡು ಸಂಸ್ಥೆಗಳು ತನಿಖೆ ನಡೆಸುತ್ತಿವೆ. ಇಂಥದ್ದನ್ನು ನಾವೆಂದೂ ನೋಡಿಲ್ಲ '' ಎಂದು ಹೇಳಿದರು.

ಮಂಗಳವಾರ ಪಕ್ಷದ ಕೋರ್‌ ಕಮಿಟಿ ಸಭೆ ಬಳಿಕ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು ''ಎರಡೆರಡು ತನಿಖಾ ಸಂಸ್ಥೆಗಳು ತನಿಖೆ ಮಾಡುತ್ತಿವೆ. ಯಾರು ಮೊದಲು ಚಾರ್ಜ್‌ಶೀಟ್‌ ಸಲ್ಲಿಸುತ್ತಾರೋ ಗೊತ್ತಿಲ್ಲ. ಯಾರು ಯಾರಿಗೆ ಹಸ್ತಾಂತರ ಮಾಡುತ್ತಾರೋ..'' ಎಂದು ವ್ಯಂಗ್ಯವಾಡಿದರು.

ಈ ಅಧಿಕಾರಿಗಳ ಬಳಿ 2 ಸಾವಿರ ಮುಖಬೆಲೆಯ 5.7 ಕೋಟಿ ರೂ. ಹೊಸನೋಟು ಪತ್ತೆಯಾದ ಪ್ರಕರಣದಲ್ಲಿ ಸಿಬಿಐ ತನಿಖೆ ಬೆನ್ನಲ್ಲೇ, ರಾಜ್ಯದ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕೂಡ ಪ್ರಕರಣದ ತನಿಖೆ ಕೈಗೆತ್ತಿಕೊಂಡಿದೆ. ಈ ಪ್ರಕರಣದಲ್ಲಿ ರಾಜ್ಯ ಸರಕಾರದ ಪಾತ್ರ ಇಲ್ಲದಿದ್ದರೂ, ಡ್ಯಾಮೇಜ್‌ ಕಂಟ್ರೋಲ್‌ ಉದ್ದೇಶದಿಂದ ಈ ಪ್ರಯತ್ನ ನಡೆದಿದೆ ಎಂಬ ಅಭಿಪ್ರಾಯದ ಹಿನ್ನೆಲೆಯಲ್ಲಿ ದೇವೇಗೌಡರ ಈ ಹೇಳಿಕೆ ಮಹತ್ವ ಪಡೆದುಕೊಂಡಿದೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಬಿಗ್‌ ನ್ಯೂಸ್: ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ಪ್ರಕಟ -‌ ಈ ಬಾರಿಯೂ...


 ಕೌಟುಂಬಿಕ ಕಲಹ ಹಿನ್ನೆಲೆ; ಬುದ್ದಿವಾದ ಹೇಳಿದ ತಂಗಿಯನ್ನೇ ಕೊಂದ ಅಣ್ಣ…


ಗುರು ರಾಘವೇಂದ್ರರ ದಿನದ ಭವಿಷ್ಯ ಹಾಗೂ ರಾಶಿ ಫಲ


‘ಒಡಕು ಮೂಡಿಸಿದ ಸಿದ್ಧರಾಮಯ್ಯ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>