Quantcast
Channel: VijayKarnataka
Viewing all articles
Browse latest Browse all 6795

ರಾಸಲೀಲೆ: ಕೊನೆಗೂ ಸಚಿವ ಮೇಟಿ ರಾಜೀನಾಮೆ

$
0
0

ಬೆಂಗಳೂರು: 'ಸಚಿವ ಎಚ್‌.ವೈ ಮೇಟಿ ರಾಜೀನಾಮೆ ಕೊಟ್ಟಿದ್ದಾರೆ. ಅದನ್ನು ಅಂಗೀಕರಿಸಲು ಮಾನ್ಯ ರಾಜ್ಯಪಾಲರಿಗೆ ಶಿಫಾರಸು ಮಾಡಿದ್ದೇನೆ. ತನಿಖೆಗೆ ಆದೇಶ ಕೂಡ ಕೊಟ್ಟಿದ್ದೇನೆ,' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್‌ ಮಾಡಿದ್ದಾರೆ.

ರಾಜ್ಯಾದ್ಯಂತ ಕಳೆದ ನಾಲ್ಕು ದಿನಗಳಿಂದ ಅಬಕಾರಿ ಸಚಿವ ಎಚ್‌.ವೈ.ಮೇಟಿ ವಿರುದ್ಧದ ರಾಸಲೀಲೆ ಆರೋಪ ಪ್ರಕರಣ ಚರ್ಚೆಗೆ ಗ್ರಾಸವಾಗಿತ್ತು. ಆರೋಪ ಎದುರಿಸುತ್ತಿರುವ ಸಂತ್ರಸ್ತ ಮಹಿಳೆಯ ವಿಭಿನ್ನ ಹೇಳಿಕೆಗಳನ್ನು ನೀಡುತ್ತಿದ್ದು, ಇಡೀ ಪ್ರಕರಣ ಗೊಂದಲದ ಗೂಡಾಗಿತ್ತು. ಈ ಪ್ರಕರಣದಲ್ಲಿ ತಮಗೆ ಏನಾದರೂ ಆದಲ್ಲಿ ಅದಕ್ಕೆ ಪೊಲೀಸ್‌ ಪೇದೆ ಸುಭಾಷ ಮುಗಳಖೋಡ ಕೂಡ ಕಾರಣರಾಗುತ್ತಾರೆ ಎಂದು ಮಹಿಳೆ ಹೇಳಿದ್ದರು.

ಸರಕಾರಿ ಕಚೇರಿಯಲ್ಲಿ ರಾಸಲೀಲೆ ನಡೆಸಿರುವ ಸಿಡಿಯೇ ಇಲ್ಲ, ಇದ್ದರೆ ರಾಜೀನಾಮೆ ನೀಡುವೆ ಎಂದು ಹೇಳುವ ಮೂಲಕ ಮೇಟಿ ಮೇಟಿ ಅವರು ಈ ಆರೋಪವನ್ನು ಅಲ್ಲಗಳೆಯುತ್ತ ಬಂದಿದ್ದರು. ಪ್ರತಿಪಕ್ಷ ಕೂಡ ಈ ಪ್ರಕರಣವನ್ನು ಮುಂದಿಟ್ಟು ಸರಕಾರದ ವಿರುದ್ಧ ವಾಗ್ದಾಳಿ ನಡೆಸಿತ್ತು.

ಕಳೆದ ಎರಡು ದಶಕಗಳ ಹಿಂದೆ ಜೆ.ಎಚ್‌.ಪಟೇಲ್‌ ಅವರ ಸಂಪುಟದಲ್ಲಿ ಅರಣ್ಯ ಸಚಿವರಾಗಿದ್ದ ಎಚ್‌.ವೈ.ಮೇಟಿ ಬಳಿಕ ಸಚಿವರಾಗಿದ್ದೇ ಕಳೆದ ಜೂನ್‌ನಲ್ಲಿ. ಕೇವಲ ಐದು ತಿಂಗಳ ಸಚಿವ ಸ್ಥಾನದ ಅವಧಿಯಲ್ಲಿ ಇಂಥದ್ದೊಂದು ಗಂಭೀರ ಆರೋಪದಡಿ ಸಚಿವ ಸ್ಥಾನ ಕಳೆದುಕೊಳ್ಳುವ ಸನ್ನಿವೇಶ ಎದುರಾಗಿದೆ.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್