Quantcast
Channel: VijayKarnataka
Viewing all articles
Browse latest Browse all 6795

ಗಡಾಯಿಕಲ್ಲು ಟ್ರೆಕ್ಕಿಂಗ್‌ ಮೋಜು

$
0
0

-ಶೇಖರ್‌ ಬೆಳಾಲ್‌

ಮುಂಜಾನೆಯ ಮೈ ಕೊರೆಯುವ ಚಳಿ. ಸಿಹಿ ನಿದ್ದೆಯಿಂದ ಎದ್ದೇಳಲು ಮನಸ್ಸು ಒಪ್ಪುತ್ತಿಲ್ಲ . ಆದರೂ ಬೇಗ ಎದ್ದೇಳಲೇಬೇಕು. ಏಕೆಂದರೆ ಅದು ಚಾರಣದ ಸಮಯ.

ಬೆಳ್ತಂಗಡಿ ತಾಲೂಕಿನಲ್ಲಿರುವ ಗಡಾಯಿಕಲ್ಲು ಚಾರಣಪ್ರಿಯರನ್ನು ಕೈ ಬೀಸಿ ಕರೆಯುತ್ತದೆ. ಚಾರಣಪ್ರಿಯರಿಗೆ ಆಕರ್ಷಣಿಯವಾಗಿರುವ ಬೃಹತ್‌ ಕಲ್ಲು ಬಂಡೆಗಳನ್ನು ಸುತ್ತುವರೆದ ಜಮಲಾಬಾದ್‌ ಕೋಟೆ, ಸ್ಥಳೀಯವಾಗಿ ಗಡಾಯಿಕಲ್ಲು, ನರಸಿಂಹ ಗಡ ಎಂದು ಚಿರಪರಿಚಿತವಾದ ಈ ಬಂಡೆಗಳ ಸಮೂಹ ಎತ್ತರವಾಗಿ ಮುಗಿಲಿಗೆ ಮುತ್ತಿಡುವಂತೆ ದೂರದಿಂದ ಗೋಚರಿಸುತ್ತದೆ.

ಸರಿ ಸುಮಾರು 1700 ಅಡಿ ಎತ್ತರದ ಈ ಕಲ್ಲು ಬಂಡೆಯನ್ನು ಒಮ್ಮೆ ಏರಲೇಬೇಕು. ಅಲ್ಲಿನ ಸೊಬಗನ್ನು ಸವಿಯಲೆಂದು ಮನಸ್ಸು ಹಾತೊರೆಯುತ್ತಿತ್ತು .

ಗಡಾಯಿಕಲ್ಲು ಸಮೀಪಿಸುತ್ತಿದ್ದಂತೆ ಆ ಬೃಹತ್‌ ಕಲ್ಲು ಒಬ್ಬೊಬ್ಬರಿಗೆ ವಿಭಿನ್ನ ರೀತಿಯಲ್ಲಿ ಕಾಣಿಸಿತು. ಆ ಬೃಹತ್‌ ಕಲ್ಲಿನ ಆಕಾರದಲ್ಲಿ ಪ್ರಕೃತಿಯ ವಿಸ್ಮಯ ಮನದಲ್ಲಿ ಅಚ್ಚುಳಿಯದೆ ಉಳಿದಿದೆ.

ಈ ಗುಡ್ಡ ಬುಡದಿಂದ ಏರುತ್ತಿದ್ದಂತೆ ಸ್ವಲ್ಪದೂರದವರೆಗೆ ಮಾತ್ರ ಪ್ರಕೃತಿ ನೆರಳಿನ ಆಶ್ರಯ ನೀಡಿತ್ತಾದರೂ ಕಲ್ಲಿನ ಮೇಲೆ ಕಾಲಿಡುತ್ತಿದ್ದಂತೆ ನೆತ್ತಿಯ ಮೇಲೆ ರಣ ಬಿಸಿಲು. ಮೈಯಲ್ಲಿ ಬೆವರು ಹರಿಯಲು ಆರಂಭಿಸಿತು. ತುಸು ಹೊತ್ತು ಪಯಣ ಬೆಳೆಸಿ ಅಲ್ಲಲ್ಲಿ ಬೆಳೆದ ಮರದಡಿಯ ನೆರಳಿನಲ್ಲಿ ವಿಶ್ರಮಿಸುತ್ತಿದ್ದೆವು . ಅಂತೂ ಇಂತೂ ಏದುರುಸಿರು ಬಿಡುತ್ತ ಗಡಾಕಲ್ಲಿನ ಒಂದು ಹಂತದ ತುದಿ ತಲುಪಿದಾಗ ತಂಪು ಪಾನೀಯ ಪೂರ್ತಿ ಕರಗಿತ್ತು.

ಉಳಿದ ಕೊನೆಯ ಇನ್ನೊಂದು ಹಂತದ ತುದಿ ತಲುಪಿದರೆ ಚಾರಣಕ್ಕೆಂದು ಬಂದ ನಮ್ಮ ಗುರಿ ಸಾರ್ಥಕ . ಆದರೆ ಆ ಮೆಟ್ಟಿಲನ್ನು ನೋಡಿದಾಗ ದಂಗಾಗಿ ನಿಂತುಬಿಟ್ಟೆವು . ನೇರವಾದ ಮರವೊಂದಕ್ಕೆ ಒರಗಿಸಿಟ್ಟ ಏಣಿಯಂತಿತ್ತು ಆ ಮೆಟ್ಟಿಲುಗಳು . ಅಂಬೆಗಾಲಿಡುತ್ತ ತ್ರಾಸಪಟ್ಟು ಅದೇ ಹಳೆಯ, ಹೊಸ ವಿಚಾರಗಳೊಂದಿಗೆ ಗುರಿ ತಲುಪಿದಾಗ ಅಲ್ಲಿ ಹಸಿರು ಚಾಪೆಯಂತೆ ದೂರಕ್ಕೂ ಹರಡಿತ್ತು ಬರೀ ಕಾಡು. ಈ ದಟ್ಟ ಕಾಡನ್ನು ನೋಡಲು ಇಷ್ಟೊಂದು ಕಷ್ಟಪಟ್ಟು ಬರಬೇಕಿತ್ತಾ ಅಂತೆನಿಸಿದರೂ ಅಲ್ಲಿ ಅಷ್ಟೆತ್ತರಕ್ಕೂ ಕೆತ್ತಿರುವ ಮೆಟ್ಟಿಲುಗಳು ದೊಡ್ಡ ದೊಡ್ಡ ಬಂಡೆಕಲ್ಲುಗಳಿಂದ ನಿರ್ಮಿಸಿದ ಭದ್ರ ಕೋಟೆ ಕೆರೆಗೆ ಕಟ್ಟಿರುವ ಕೆಂಪು ಇಟ್ಟಿಗೆಯ ದಂಡೆ ಅಚ್ಚರಿ ಮೂಡಿಸಿತು. ಅಂದಿನ ಜನತೆಯ ಶ್ರಮ ಹಾಗೂ ಇದನ್ನು ನಿರ್ಮಿಸಲು ಉಪಯೋಗಿಸಿದ ವೈಜ್ಞಾನಿಕತೆ ನಿಜವಾಗಿಯೂ ನಮ್ಮನ್ನು ಮೂಕವಿಸ್ಮಿತರನ್ನಾಗಿಸಿತು.

ಆ ಕಲ್ಲು ಬಂಡೆಯಲ್ಲಿ ನೋಡುವಂತಹ, ತಿಳಿಯಬೇಕೆಂದಿರುವ ಅನೇಕ ವಿಷಯಗಳಿದ್ದರೂ ನಮ್ಮ ಚಾರಣಪ್ರಿಯರಿಗೊಂದು ಕೆಟ್ಟ ಅಭ್ಯಾಸವೆಂದರೆ ಶುಭ್ರ ಮೆಟ್ಟಿಲು ,ಕೋಟೆಯ ಗೋಡೆಯ ಮೇಲೆ ಮೂಡಿಸಿದ ಪೋಲಿ ಬರಹ, ಪ್ರೀತಿಸಿದವರಿಗೆ ಪ್ರೀತಿಸಿದವರೊಂದಿಗೆ ಅದನ್ನು ನಿವೇದಿಸುವ ಧೈರ್ಯ ಇಲ್ಲ. ಅದನ್ನು ತೋರ್ಪಡಿಸದಿದ್ದರೆ ಮನಸ್ಸಿಗೆ ಸಾಮಾಧಾನವಿಲ್ಲ. ಎತ್ತರಕ್ಕೆ ಒಯ್ಯಬೇಕೆಂದು ಬಯಸಿದ ಪ್ರೀತಿ ಅಥವಾ ಪ್ರೀತಿಸಿದವರು ಅವರ ಬಳಿ ಇಲ್ಲ ಹಾಗೆಯೇ ಸ್ವಗತ ಎಂಬಂತೆ ತಮ್ಮ ಪ್ರೀತಿಸಿದವರ ಹೆಸರನ್ನು ತಮ್ಮ ಹೆಸರಿನೊಂದಿಗೆ ಸೇರಿಸಿ ಆದಕ್ಕೆ ಪ್ರೀತಿಯ ಲಾಂಛನವನ್ನು ತೊಡಿಸಿ ತಮ್ಮ ಅಮರ ಪ್ರೇಮವನ್ನು ಸಾರಿರುತ್ತಾರೆ. ಅದೇ ಈಗ ಶಿಲಾಯುಗದ ಬಳಿಕ ಕಲಾಯುಗದಲ್ಲಿ ಮೂಡಿದಂತೆ ಅನಿಸುತ್ತದೆ.

ಈ ರೀತಿ ಕೆಟ್ಟದಾಗಿ ಗೀಚಿದ ಚಿತ್ರಗಳು, ಗೋಡೆ ಬರಹಗಳು ಅಂದಿನ ಬುದ್ದಿಜೀವಿಗಳಿಗೆ ಅಣಕ ಮಾಡಿದಂತಿತ್ತು. ಕಲ್ಲಿನ ತುತ್ತತುದಿಯಿಂದ ಒಮ್ಮೆ ಸುತ್ತಲಿನ ತೆರೆದ ಪ್ರದೇಶದೆಡೆ ಕಣ್ಣು ಹಾಯಿಸಿದಾಗ ಹೊಸತೊಂದು ಪ್ರಪಂಚ ಕಂಡಂತಾಯಿತು. ಉರಿ ಬಿಸಿಲಲ್ಲೂ ಬೀಸುವ ತಂಗಾಳಿಯ ಜೊತೆ ತುದಿ ತಲುಪಿದ ಆನಂದ ನಮ್ಮ ಸುಸ್ತನ್ನು ಮರೆ ಮಾಚಿತ್ತು. ಪ್ರಪಂಚದ ನಿಗೂಢತೆ ಇನ್ನೊಂದು ರೂಪದಲ್ಲಿ ಇಲ್ಲಿ ಅನಾವರಣವಾಗಿತ್ತು. ಮತ್ತೆ ಏರಿದ ಮೆಟ್ಟಿಲನ್ನು ಇಳಿಯಬೇಕು ಹತ್ತಿದಷ್ಟೆ ಜೋಪಾನವಾಗಿ. ಜಾರಿದಲ್ಲಿ ಅದು ಜೀವನದ ಅದೇ ಕೊನೆಯ ಕ್ಷ ಣ ಎನಿಸಿ ಬಿಟ್ಟಿತು.


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವೃದ್ದೆಗೆ ಚಾಕು ತೋರಿಸಿ ದುಷ್ಕೃತ್ಯ


ತುಳು ತೆರೆಗೆ ಸೋನಿಯಾ ಎಂಟ್ರಿ


ಗಮನಿಸಿ : ‘ಆಯುಷ್ಮಾನ್ ಕಾರ್ಡ್’ನಡಿ 5 ಲಕ್ಷದವರೆಗೆ ಸಿಗಲಿದೆ ಉಚಿತ ಚಿಕಿತ್ಸೆ, ಇಲ್ಲಿದೆ...


ಈ 12 ಕಾರಣಗಳಿಗೆ ನಿಮಗೆ ಡಿ.ಕೆ.ರವಿ ಇಷ್ಟವಾಗಲೇಬೇಕು!


ನಿತ್ಯ ‘ಬ್ಲೂ ಫಿಲಂ’ತೋರಿಸಿ ಸೆಕ್ಸ್ ಗೆ ಬಲವಂತ: ರೋಸಿ ಹೋದ ಪತ್ನಿ


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ