Quantcast
Channel: VijayKarnataka
Viewing all articles
Browse latest Browse all 6795

ಶಿಕ್ಷಣದ ಸದ್ಬಳಕೆ ಅಗತ್ಯ

$
0
0

ಶಿವಮೊಗ್ಗ: ಜೀವನದಲ್ಲಿ ಯಾವುದೇ ಕೆಲಸವಾಗಲಿ ಶ್ರದ್ಧೆಯಿಂದ ಮಾಡಬೇಕು ಎಂದು ವಿಧಾನ ಪರಿಷತ್‌ ಸದಸ್ಯ ಎಂ.ಬಿ.ಭಾನುಪ್ರಕಾಶ್‌ ಹೇಳಿದರು.

ತಾಲೂಕಿನ ಮತ್ತೂರಿನ ಶ್ರೀ ಶಾರದಾ ವಿಲಾಸ ಶಾಲಾಭಿವೃದ್ಧಿ ಸಮಿತಿಯ ಶಿಕ್ಷ ಣ ಸಂಸ್ಥೆಗಳ ಅನ್ನಪೂರ್ಣ ಸಭಾಂಗಣದಲ್ಲಿ ಶಿವಮೊಗ್ಗದ ಜವಹರಲಾಲ್‌ ನೆಹರು ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯ ಇತ್ತೀಚೆಗೆ ಏರ್ಪಡಿಸಿದ್ದ ರಾಷ್ಟ್ರೀಯ ಸೇವಾ ಯೋಜನೆಯ ವಿಶೇಷ ವಾರ್ಷಿಕ ಶಿಬಿರದ ಸಮಾರೋಪದಲ್ಲಿ ಅವರು ಮಾತನಾಡಿದರು.

ಶಿಬಿರದಲ್ಲಿ ಭಾಗವಹಿಸಿದ ವಿದ್ಯಾರ್ಥಿಗಳು ಸಾಮೂಹಿಕ ಜೀವನ ನಡೆಸುವುದನ್ನು ಕಲಿತು, ದೇಶಕ್ಕೆ ಏನನ್ನಾದರೂ ಮಾಡುವ ಹಂಬಲ ಹೊಂದಬೇಕು. ಜವಹರಲಾಲ್‌ ನೆಹರು ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದ ವಿದ್ಯಾರ್ಥಿಗಳು ಕಲಿತ ತಂತ್ರಜ್ಞಾನವನ್ನು ಗ್ರಾಮಗಳ ಅಭಿವೃದ್ಧಿಗೆ ಬಳಸಿಕೊಳ್ಳಬೇಕು ಎಂದರು.

ಶಾರದಾ ವಿಲಾಸ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯಶಿಕ್ಷಕ ಪ್ರಕಾಶ್‌ ಆರ್‌. ಕಮ್ಮಾರ್‌ ಮಾತನಾಡಿ, ಎನ್‌ಎಸ್‌ಎಸ್‌ ಶಿಬಿರಗಳು ಪ್ರತಿಭೆ ಅನಾವರಣಕ್ಕೆ ಉತ್ತಮ ವೇದಿಕೆಯಾಗಿದ್ದು, ವಿದ್ಯಾರ್ಥಿಗಳು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಮುಂದಿನ ಜೀವನದಲ್ಲಿ ಸಾಮಾಜಿಕ ಬದ್ದತೆ, ನಾಯಕತ್ವ, ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಲು ಸಹಕಾರಿ ಎಂದರು.

ಜವಾಹರಲಾಲ್‌ ನೆಹರು ರಾಷ್ಟ್ರೀಯ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ. ಎಚ್‌.ಆರ್‌.ಮಹಾದೇವಸ್ವಾಮಿ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಈ ಸಂದರ್ಭ ರಾ.ಸೇ.ಯೋ ಅಧಿಕಾರಿ ಸಿ.ಡಿ.ಅಶೋಕ್‌ಕುಮಾರ್‌, ಸಹ ಶಿಬಿರಾಧಿಕಾರಿಗಳಾದ ಬಿ.ಎನ್‌.ರವಿಕುಮಾರ್‌, ಎಂ.ಅಕ್ಷ ತಾ ಅವರನ್ನು ಅಭಿನಂದಿಸಲಾಯಿತು. ಶಿಬಿರಾರ್ಥಿಗಳಾದ ಆಕಾಶ್‌, ಮಧುಸೂಧನ ಹಾಗೂ ನಿಶಾಂತ್‌ ತಮ್ಮ ಅನಿಸಿಕೆಗಳನ್ನು ಹಂಚಿಕೊಂಡರು.

ಶಾರದಾ ವಿಲಾಸ ಪ್ರೌಢಶಾಲೆಯ ಮುಖ್ಯಶಿಕ್ಷಕ ಬಿ.ಎಸ್‌.ಸುಧೀಂದ್ರ, ಸ.ಹಿ.ಪ್ರಾ ಶಾಲೆಯ ಮುಖ್ಯ ಶಿಕ್ಷ ಕಿ ಡಿ.ಎಲ್‌.ಲಕ್ಷ್ಮೀದೇವಿ ಸೇರಿದಂತೆ ಹಲವರಿದ್ದರು. ಪ್ರಿಯಾಂಕ ಪ್ರಾರ್ಥಿಸಿ, ರವಿಕುಮಾರ್‌ ಸ್ವಾಗತಿಸಿದರು. ಅಶೋಕ್‌ಕುಮಾರ್‌ ಶಿಬಿರದ ವರದಿ ವಾಚಿಸಿದರು. ಸಹಾಯಕ ಅಧ್ಯಾಪಕಿ ಎಂ.ಅಕ್ಷ ತಾ ವಂದಿಸಿ, ಪವನ್‌ ನಿರೂಪಿಸಿದರು.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಶಿವಸೇನೆ ಬಿಗಿಪಟ್ಟು: ದೇಶ ಗೆದ್ದ ಬಿಜೆಪಿ ವಿಲವಿಲ


ಶುಭ ಫಲಕ್ಕಾಗಿ ಮನೆಯಲ್ಲಿ ಗಾಳಿ ಗಂಟೆ ಹಾಕುವ ಮುನ್ನ ಈ ವಿಚಾರ ತಿಳಿಯಿರಿ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>