Quantcast
Channel: VijayKarnataka
Viewing all articles
Browse latest Browse all 6795

ಗ್ರಾಮೀಣ ಭಾಗಗಳಲ್ಲಿ ಬಾಲ್ಯ ವಿವಾಹ ಹೆಚ್ಚು

$
0
0

ಕೆ.ಆರ್‌.ಪೇಟೆ: ಹೆಣ್ಣು ಮಕ್ಕಳಿಗೆ 18 ವರ್ಷ ತುಂಬುವ ಮುನ್ನ ವಿವಾಹಕ್ಕೆ ಮುಂದಾದರೆ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಅಧಿಕಾರಿ ದೇವ ಕುಮಾರ್‌ ತಿಳಿಸಿದರು.

ಪಟ್ಟಣದ ಬಿಸಿಎಂ ಬಾಲಕಿಯರ ವಸತಿ ನಿಲಯದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಸಮಾಜ ಕಲ್ಯಾಣ ಇಲಾಖೆಯಿಂದ ನಡೆದ ಬಾಲ್ಯ ವಿವಾಹ ತಡೆ ಜಾಗೃತಿ ಕಾರ‍್ಯಕ್ರಮದಲ್ಲಿ ಮಾತನಾಡಿದ ಅವರು, ಗ್ರಾಮೀಣ ಭಾಗದಲ್ಲಿ ಹೆಚ್ಚು ಬಾಲ್ಯ ವಿವಾಹಗಳ ಪ್ರಕರಣಗಳು ಕಂಡು ಬರುತ್ತಿವೆ. ಅಲ್ಲಿನ ಪ್ರಜ್ಞಾವಂತರು ಬಾಲ್ಯ ವಿವಾಹಗಳು ನಡೆಯುತ್ತಿರುವುದನ್ನು ತಡೆಯಬೇಕು. ಇಲ್ಲವಾದಲ್ಲಿ ನಮಗೆ ಮಾಹಿತಿ ನೀಡಿದರೆ ತಕ್ಷ ಣ ಕ್ರಮಕ್ಕೆ ಮುಂದಾಗುತ್ತೇವೆ. ವಿವಾಹಕ್ಕೆ ನಿಗದಿಪಡಿಸಿರುವ ಒಂದು ದಿನ ಮುಂಚಿತವಾಗಿ ಮದುವೆ ಮಾಡಿದರೂ ಅಂತಹ ವ್ಯಕ್ತಿಗಳ ವಿರುದ್ಧ ಕಾನೂನು ಕ್ರಮ ಜರುಗಿಸಬೇಕಾಗುತ್ತದೆ ಎಂದು ಹೇಳಿದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ಕೆ.ಸುಧಾಮಣಿ ಮಾತನಾಡಿ, ಹೆಣ್ಣು ಮಕ್ಕಳಲ್ಲಿ ದೈಹಿಕ ಶಕ್ತಿ ಕಡಿಮೆ ಇರುವುದರಿಂದ ಬಾಲ್ಯದಲ್ಲಿ ಮದುವೆಯಾದರೆ ಮಕ್ಕಳು ಅಶಕ್ತರಾಗಿ ಹುಟುವುದಲ್ಲದೇ ತಾಯಿಯು ದೈಹಿಕ ಸಮಸ್ಯೆಯಿಂದ ಬಳಲಬೇಕಾಗುತ್ತದೆ. ಗಂಡು ಮಕ್ಕಳಿಗೆ ಕುಟುಂಬ ನಿರ್ವಹಣೆ ಜವ್ದಾರಿ ಇಲ್ಲದೆ ತಂದೆ ಆಶ್ರಯದಲ್ಲಿ ಬೆಳೆದಿರುವುದರಿಂದ ಕುಟುಂಬ ನಿರ್ವಹಿಸಲು ಸಾಧ್ಯವಾಗದೇ ವಿರಸಗಳು ಪ್ರಾರಂಭವಾಗಿರುವ ಬಹುತೇಕ ನಿದರ್ಶನಗಳಿವೆ. ಹೆಣ್ಣಾಗಲಿ-ಗಂಡಾಗಲಿ ಪ್ರಾಪ್ತ ವಯಸ್ಸಿಗೆ ಬಂದ ನಂತರವೇ ವಿವಾಹ ಮಾಡುವುದು ಸೂಕ್ತ ಎಂದರು.

ದೇವರಾಜ್‌, ಪದ್ಮ, ನಿಲಯ ಪಾಲಕರಾದ ವೆಂಕಟೇಶ್‌, ಮಂಜುನಾಥ್‌, ವಿಜಯ್‌ಕುಮಾರ್‌, ಪುಷ್ಪಾ, ಮತ್ತಿತರರು ಭಾಗವಹಿಸಿದ್ದರು.


Viewing all articles
Browse latest Browse all 6795

Trending Articles


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಅಪಘಾತ ಗಾಯಾಳುಗಳಿಗೆ ನೆರವು ನೀಡಿದವರಿಗೆ ಜೀವರಕ್ಷಕ ಪ್ರಶಸ್ತಿ


ಜಮೀನಿನಲ್ಲೇ ಘೋರ ದುರಂತ: ನೀರು ತುಂಬಿದ್ದ ಗುಂಡಿಗೆ ಬಿದ್ದು ಮೂವರು ಸಾವು


ಸೈಬರ್ ಕ್ರೈಂ ಹೇಗೆ ನಡೆಯುತ್ತೆ –ಹೀಗೊಂದು ಸುಂದರ ಕಲ್ಪನೆಯ ಮದ್ವೆ ಕರೆಯೋಲೆ


ವಚನಗಳಿಂದ ಸಂಗೀತ ಲೋಕ ಶ್ರೀಮಂತ


ಶಿವಸೇನೆ ಬಿಗಿಪಟ್ಟು: ದೇಶ ಗೆದ್ದ ಬಿಜೆಪಿ ವಿಲವಿಲ


ಶುಭ ಫಲಕ್ಕಾಗಿ ಮನೆಯಲ್ಲಿ ಗಾಳಿ ಗಂಟೆ ಹಾಕುವ ಮುನ್ನ ಈ ವಿಚಾರ ತಿಳಿಯಿರಿ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ತುಳು ತೆರೆಗೆ ಸೋನಿಯಾ ಎಂಟ್ರಿ


ಶ್ರೀ ಮಹಿಷಾಸುರ ಮರ್ದಿನೀ ಸ್ತೋತ್ರಮ್



<script src="https://jsc.adskeeper.com/r/s/rssing.com.1596347.js" async> </script>