Quantcast
Channel: VijayKarnataka
Viewing all articles
Browse latest Browse all 6795

ನಾಗಮಂಗಲ: ದಾಂಪತ್ಯಕ್ಕೆ ಕಾಲಿಟ್ಟ 46 ಜೋಡಿ

$
0
0

ನಾಗಮಂಗಲ: ಯಾವ ದೇಶದಲ್ಲಿ ಗೃಹಸ್ಥಾಶ್ರಮ ತುಂಬಾ ಗಟ್ಟಿಯಾಗಿರುತ್ತದೆಯೋ ಅಂತಹ ನೆಲದಲ್ಲಿ ಸಂಸ್ಕೃತಿ ಭದ್ರವಾಗಿರಲು ಸಾಧ್ಯ ಎಂದು ಆದಿಚುಂಚನಗಿರಿ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ತಿಳಿಸಿದರು.

ಆದಿಚುಂಚನಗಿರಿಯಲ್ಲಿ ಜಾತ್ರಾ ಮಹೋತ್ಸವದ ಅಂಗವಾಗಿ ಶುಕ್ರವಾರ ನಡೆದ ಸಾಮೂಹಿಕ ವಿವಾಹ ಸಮಾರಂಭದಲ್ಲಿ ಅವರು ಮಾತನಾಡಿ, ಸಾಮೂಹಿಕ ವಿವಾಹಗಳು ವರ್ಷವಿಡೀ ನಡೆಯುತ್ತಿದ್ದರೂ, ಭೈರವೈಕ್ಯ ಶ್ರೀಗಳ ಸಂಕಲ್ಪದಂತೆ ಜಾತ್ರಾ ಮಹೋತ್ಸವದಲ್ಲಿ ಸಾಮೂಹಿಕ ವಿವಾಹವನ್ನು ಏರ್ಪಡಿಸಲಾಗಿದೆ. ರೈತರ ಬದುಕು ಈಗಾಗಲೇ ದುಸ್ಥರವಾಗಿದೆ. ಮದುವೆಗಳು ಯಾವ ಹಂತದಲ್ಲಿ ನಡೆದರೆ ಭದ್ರವಾಗಿರಲು ಸಾಧ್ಯ ಎಂಬುದನ್ನು ಪ್ರಶ್ನೆ ಮಾಡಿಕೊಳ್ಳಬೇಕು. ಮದುವೆ ನಿಜವಾಗಿಯೂ ಸಾರ್ಥಕತೆ ಕಾಣಬೇಕೆಂದಾದರೆ ಒಳಗಿರುವ ಶಕ್ತಿಯನ್ನು ಜಾಗೃತಗೊಳಿಸಲು ನಮ್ಮೊಳಗಿರುವ ವಿವಿಧ ಕೋಶಗಳಾಚೆಗೆ ನಾವು ಬದುಕಲು ಪ್ರಾರಂಭಿಸಬೇಕು ಎಂದು ಹೇಳಿದರು.

ಸಚಿವ ಎ.ಮಂಜು ಮಾತನಾಡಿ, ಕಷ್ಟದ ದಿನಗಳಲ್ಲಿ ಸಾಲ ಮಾಡಿ ಮದುವೆ ಮಾಡುವುದನ್ನು ತಪ್ಪಿಸುವ ಸಲುವಾಗಿ ಮಠದಲ್ಲಿ ಹಲವು ವರ್ಷಗಳಿಂದ ಸರಳ ಸಾಮೂಹಿಕ ವಿವಾಹ ನಡೆಸುತ್ತಿರುವ ಕಾರ್ಯ ಶ್ಲಾಘನೀಯ. ಇಂತಹ ಸಾಮಾಜಿಕ ಕಳಕಳಿ ಕಾರ‍್ಯಕ್ರಮಗಳನ್ನು ನಡೆಸಿಕೊಂಡುಬರುತ್ತಿರುವುದು ಶ್ಲಾಘನೀಯ ಎಂದರು.

46 ಜೋಡಿಗಳು ದಾಂಪತ್ಯ ಜೀವನಕ್ಕೆ ಕಾಲಿರಿಸಿದರು. 60 ವರ್ಷ ದಾಪಂತ್ಯ ಜೀವನ ಕಳೆದ 60 ಮಂದಿ ದಂಪತಿಯನ್ನು ಸನ್ಮಾನಿಸಲಾಯಿತು. ಶಿವಮೊಗ್ಗ ಶಾಸಕ ಪ್ರಸನ್ನಕುಮಾರ್‌, ಮಹಿಳಾ ಅಭಿವೃದ್ಧಿ ನಿಗಮದ ರಾಜ್ಯಾಧ್ಯಕ್ಷೆ ಭಾರತಿ ಶಂಕರ್‌, ಮತ್ತಿತರರು ಪಾಲ್ಗೊಂಡಿದ್ದರು.


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


‘ಬಾಹುಬಲಿ’ಅಭಿಮಾನಿಗಳಿಗೆ ಗುಡ್ ನ್ಯೂಸ್ ಸುದ್ದಿ ! ಬರ್ತಿದೆ ‘ಪಾರ್ಟ್-3’


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಭಾಷಾಭಿಮಾನ ಬೆಳೆಸುವ ಪ್ರಯತ್ನ ತುಳು ಕ್ಯಾಲೆಂಡರ್‌ ‘ಕಾಲಕೋಂದೆ’


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!


ಪ್ರಜ್ಞಾ ಪ್ರವಾಹ, ಕರ್ನಾಟಕ “ದೇಶಿ ಚಿಂತನೆ” ಪ್ರಬಂಧ ಸ್ಪರ್ಧೆ



<script src="https://jsc.adskeeper.com/r/s/rssing.com.1596347.js" async> </script>