Quantcast
Channel: VijayKarnataka
Viewing all articles
Browse latest Browse all 6795

ದಿನಭವಿಷ್ಯ 11.3.2017

$
0
0

ಮೇಷ:- ಸಮಯೋಚಿತವಾಗಿ ತೆಗೆದುಕೊಂಡ ನಿರ್ಧಾರ ಪ್ರಶಂಸೆಗೆ ಪಾತ್ರವಾಗಲಿದೆ. ನೆಮ್ಮದಿಯಿಂದ ಪ್ರಯಾಣ ಮಾಡುವಿರಿ. ಹಿರಿಯರ ಆರೋಗ್ಯದಲ್ಲಿ ಸುಧಾರಣೆ ಕಂಡುಬರಲಿದೆ. ಊಟ-ಉಪಚಾರಗಳಲ್ಲಿ ಅಲಕ್ಷ ಬೇಡ.

ವೃಷಭ:- ನೂತನ ವ್ಯಕ್ತಿಗಳ ಪರಿಚಯವಾಗುವುದು. ಉತ್ತಮ ಆದಾಯವನ್ನು ಹೊಂದುವಿರಿ. ದಲ್ಲಾಳಿಗಳಿಗೆ ವ್ಯವಹಾರದಲ್ಲಿ ಉತ್ತಮ ಲಾಭ ಬರುವುದು. ಸಮಸ್ಯೆಗಳನ್ನು ಹಿರಿಯರ ಮಧ್ಯಸ್ಥಿಕೆಯಲ್ಲಿ ಬಗೆಹರಿಸಿಕೊಳ್ಳುವುದು ಒಳ್ಳೆಯದು. ಹಣಕಾಸಿನ ಪರಿಸ್ಥಿತಿ ಉತ್ತಮಗೊಳ್ಳುವುದು.

ಮಿಥುನ:- ವಿಶೇಷ ಸಾಧನೆಯೊಂದು ನಿಮ್ಮಿಂದಾಗಲಿದ್ದು ಅದಕ್ಕೆ ಜನರ ಪೂರಕ ಪ್ರತಿಕ್ರಿಯೆ ಉಂಟಾಗುವುದು. ಹಮ್ಮಿಕೊಂಡ ಕಾರ್ಯದಲ್ಲಿ ಯಶಸ್ಸು ದೊರೆಯುವುದು. ಕೌಟುಂಬಿಕ ಜೀವನದಲ್ಲಿ ನೆಮ್ಮದಿ ಕಾಣುವಿರಿ. ದೂರದ ಪ್ರಯಾಣವನ್ನು ಮುಂದೂಡುವುದು ಒಳ್ಳೆಯದು.

ಕಟಕ:- ಹಮ್ಮಿಕೊಂಡ ಕಾರ್ಯಗಳಿಗೆ ಅಡೆತಡೆಯುಂಟಾಗುವ ಸಂಭವವಿದೆ. ವ್ಯಾಪಾರ ವ್ಯವಹಾರಸ್ಥರಿಗೆ ತಕ್ಕಮಟ್ಟಿಗೆ ಲಾಭಾಂಶ ಎದುರಾಗುವುದು. ಮನೆಯ ಹಿರಿಯರ ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು.

ಸಿಂಹ:- ಗೃಹ ಕೈಗಾರಿಕೆಗೆ ಹೆಚ್ಚು ಒತ್ತು ಕೊಡುವುದರಿಂದ ಮುಂದಿನ ದಿನಗಳಲ್ಲಿ ಹೆಚ್ಚಿನ ಆದಾಯ ಸಿಗುವುದು. ನಿಮ್ಮ ಜನಪ್ರಿಯತೆ ಹೆಚ್ಚಾಗುವ ಸಂದರ್ಭವಿದೆ. ಆರ್ಥಿಕ ಸ್ಥಿತಿಯು ಸುಧಾರಣೆಗೊಳ್ಳುವುದು.

ಕನ್ಯಾ:- ಸಂಪಾದನೆಗಿಂತ ವೆಚ್ಚ ಹೆಚ್ಚಾಗುವುದು. ಮಾನಸಿಕ ಒತ್ತಡಗಳಿಂದ ಕೆಲಸ ಕಾರ್ಯಗಳಲ್ಲಿ ತಪ್ಪು ನುಸುಳುವ ಸಾಧ್ಯತೆ ಇರುವುದು. ಆದಷ್ಟು ತಾಳ್ಮೆಯಿಂದ ಕೆಲಸ ಕಾರ್ಯಗಳನ್ನು ಪೂರೈಸಿಕೊಳ್ಳಿರಿ. ಇನ್ನು ಹಲವು ದಿನ ಮೌನವಾಗಿರುವುದು ಕ್ಷೇಮಕರ.

ತುಲಾ:- ಇಂದು ಉತ್ಸಾಹ ಮತ್ತು ಆನಂದ ಹೆಚ್ಚಾಗಲಿದೆ. ಸಂಗಾತಿಯು ನಿಮ್ಮ ಯೋಜನೆಗಳಿಗೆ ಪೂರಕವಾಗಿ ಸ್ಪಂದಿಸುವರು. ಜೀವನ ಮತ್ತು ವೃತ್ತಿಯ ಆಕಾಂಕ್ಷೆಗಳು ಏರುಗತಿಯಲ್ಲಿ ಸಾಗುವುದು.

ವೃಶ್ಚಿಕ:- ವೈದ್ಯ ವೃತ್ತಿಯಲ್ಲಿರುವವರಿಗೆ ಉತ್ತಮ ದಿನ. ನೀವು ನೀಡಿದ ಟ್ರೀಟ್‌ಮೆಂಟಿನಿಂದ ರೋಗಿಯು ಗುಣಮುಖನಾಗಿ ನಿಮ್ಮನ್ನು ಹರಸುವರು. ಇತರೆಯವರು ನಿಮ್ಮ ಕೈಗುಣವನ್ನು ಕೊಂಡಾಡುವರು. ಹಣಕಾಸಿನ ವ್ಯವಹಾರಗಳನ್ನು ದಕ್ಷ ತೆಯಿಂದ ಮಾಡುವಿರಿ.

ಧನಸ್ಸು:- ವಾಣಿಜ್ಯ ರಂಗದವರಿಗೆ ಹೆಚ್ಚಿನ ಲಾಭವಿದೆ. ಗೆಳೆಯರಿಂದ ಬಂಧುಗಳಿಂದ ಸಹಕಾರ ದೊರೆಯುವುದು. ನಿಮ್ಮ ಅನಿಸಿಕೆಗಳನ್ನು ಮುಕ್ತವಾಗಿ ಗೆಳೆಯರ ಮುಂದೆ ಹಂಚಿಕೊಳ್ಳಿರಿ.

ಮಕರ:- ಆರ್ಥಿಕ ವಿಷಯದಲ್ಲಿ ಎಚ್ಚರಿಕೆ ಅಗತ್ಯ. ಬಹು ಮೊತ್ತದ ಹಣ ಕೈಸೇರುವಾಗ ಚಿಲ್ಲರೆ ಹಣವೂ ನಿಮ್ಮ ಕಣ್ತಪ್ಪಿ ಪರರ ಪಾಲಾಗುವುದು. ಮನೆಯಲ್ಲಿ ಸಂತಸದ ವಾತಾವರಣವಿರುವುದು. ಆರೋಗ್ಯ ಉತ್ತಮವಾಗಿರುವುದು.

ಕುಂಭ:- ಮನೆಯ ಹಿರಿಯರ ಸಲಹೆಯನ್ನು ಪಾಲಿಸುವ ನಿಮಗೆ ಈ ದಿನ ಶುಭ ಉಂಟಾಗಲಿದೆ. ವೃತ್ತಿಯಲ್ಲಿ ಮೇಲಧಿಕಾರಿಗಳಿಂದ ಪ್ರಶಂಸೆ ಮತ್ತು ಆಟೋಟಗಳಲ್ಲಿ ಹೆಸರು ಮಾಡುವಿರಿ. ಆರೋಗ್ಯದ ಕಡೆ ಗಮನ ಹರಿಸುವುದು ಒಳ್ಳೆಯದು.

ಮೀನ:- ವ್ಯಾಪಾರ ವ್ಯವಹಾರವು ನಿಮ್ಮ ಎಣಿಕೆಯಂತೆ ಆಗುತ್ತಿರುವುದಕ್ಕೆ ಕಾರಣ ಗುರು-ಹಿರಿಯರ ಆಶೀರ್ವಾದ. ಹಾಗಾಗಿ ನೀವು ಅವರಿಗೆ ಕೃತಜ್ಞರಾಗಿರಬೇಕು. ಹಿರಿಯರ ಮಾತನ್ನು ನಡೆಸಿಕೊಡುವುದೇ ದೇವರ ಪೂಜೆ ಮಾಡಿದಂತೆ. ಶುಭ ಸಮಾರಂಭದಲ್ಲಿ ಭಾಗವಹಿಸುವಿರಿ.


Viewing all articles
Browse latest Browse all 6795

Trending Articles


ವಾರಭವಿಷ್ಯ 21.7.2019 ರಿಂದ 27.7.2019 ರವರೆಗೆ


Namaskāra नमस्कार (salutation)


ವಿರಾಟ್-ಅನುಷ್ಕಾ ನಡುವಣ ಸಂಭಾಷಣೆ ಊಹಿಸಬಲ್ಲೀರಾ?


ಮುಕೇಶ್ ಅಂಬಾನಿಯವರ ಮೊದಲ ಮನೆ ಹೇಗಿದೆ ಗೊತ್ತಾ?


ಮನವನ್ನು ಮುದಗೊಳಿಸುತ್ತೆ ಪುಟ್ಟ ಕಂದನ ಕ್ಯೂಟ್‌ ವಿಡಿಯೋ


ಹೆಚ್ಚಿನ ಸ್ಥಾನ ಗೆಲ್ಲುವ ವಿಶ್ವಾಸ: ಗ್ಯಾರಂಟಿ ಯೋಜನೆ  ಜನರ ಮೇಲೆ ಹೆಚ್ಚು ಪರಿಣಾಮ ಬೀರಿದೆ-...


ಕಳ್ಳತನ ಮಾಡುವಾಗ ಮನೆಯೊಡತಿ ನೋಡಿದ್ದಕ್ಕೆ ಕೊಂದೇ ಬಿಟ್ಟ ಅರ್ಚಕ!


Indira Canteen : ‘ಇಂದಿರಾ ಕ್ಯಾಂಟೀನ್’ನಲ್ಲಿ ಮಾಂಸ ಸೇವನೆಗೂ ಅವಕಾಶವಿದೆ : ಸಚಿವ...


ಅನಿರೀಕ್ಷಿತ ಹಣದ ಹರಿವು ಪಡೆಯಲು ಶುಕ್ರ ದೇವರ ಆರಾಧನೆ


ಏಡ್ಸ್ ಬಗ್ಗೆ ಟೆನ್ಷನ್ ಬೇಡ.. ! ಏಡ್ಸ್ ಸಂಪೂರ್ಣವಾಗಿ ಗುಣಪಡಿಸುವ ಲಸಿಕೆ ಬಂದಿದೆ!



<script src="https://jsc.adskeeper.com/r/s/rssing.com.1596347.js" async> </script>